Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈದ್ಯೆಯಾಗುವ ಕನಸಿನ ಸಾಕಾರದಲ್ಲಿ...

ವೈದ್ಯೆಯಾಗುವ ಕನಸಿನ ಸಾಕಾರದಲ್ಲಿ “ಬಾಲ್ಯವಧು”

8ನೆ ವಯಸ್ಸಿಗೆ ಮದುವೆ, 21ನೆ ವಯಸ್ಸಿಗೆ ವೈದ್ಯೆ

ವಾರ್ತಾಭಾರತಿವಾರ್ತಾಭಾರತಿ30 Jun 2017 6:42 PM IST
share
ವೈದ್ಯೆಯಾಗುವ ಕನಸಿನ ಸಾಕಾರದಲ್ಲಿ “ಬಾಲ್ಯವಧು”

ಜೈಪುರ, ಜೂ.30: ಬಾಲ್ಯವಿವಾಹ ಪದ್ಧತಿ  ನಿಷೇಧಿಸಲ್ಪಟ್ಟಿದ್ದರೂ ಹಲವೆಡೆಗಳಲ್ಲಿ ಇದು ನಡೆಯುತ್ತಲೇ ಬರುತ್ತಿವೆ. ಜೈಪುರದ ಕರೇರಿ ಗ್ರಾಮದಲ್ಲಿ 8ರ ಹರೆಯದಲ್ಲೇ ಬಾಲ್ಯವಿವಾಹಕ್ಕೊಳಗಾಗಿ 10ನೆ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಮೊದಲೇ ಗಂಡನ ಮನೆ ಸೇರಿದ್ದ ಹೆಣ್ಣು ಮಗಳೊಬ್ಬಳು ನೀಟ್ ಪರೀಕ್ಷೆ ಬರೆದು ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಗಳಿಸುವಲ್ಲಿ ಮುಂದಡಿಯಿಟ್ಟಿದ್ದಾಳೆ.

ತನ್ನ ಪತಿ ಹಾಗೂ ಮನೆಯವರ ಸಹಕಾರದಿಂದ ಸಾಧನೆಗೈದ ಯುವತಿ ರೂಪಾ ಯಾದವ್. ರೂಪಾ 3ನೆ ತರಗತಿಯಲ್ಲಿದ್ದಾಗ 12 ವರ್ಷದ ಶಂಕರ್ ಲಾಲ್ ನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. 10ನೆ ತರಗತಿ ಪರೀಕ್ಷೆ ಬರೆದು ಫಲಿತಾಂಶ ಬರುವ ಮೊದಲೇ ಆಕೆ ಗಂಡನ ಮನೆ ಸೇರಿದ್ದಳು. ಎಸೆಸೆಲ್ಸಿಯಲ್ಲಿ ರೂಪಾ ಶೇ.84  ಅಂಕಗಳೊಂದಿಗೆ ಉತ್ತೀರ್ಣಳಾಗಿದ್ದಳು. ಆದರೆ ಮುಂದಿನ ವಿದ್ಯಾಭ್ಯಾಸ ನಡೆಸಲು ಪತಿಯ ಗ್ರಾಮದಲ್ಲಿ ಕಾಲೇಜುಗಳಿರಲಿಲ್ಲ. ಇದರಿಂದಾಗಿ 6 ಕಿ.ಮೀ. ದೂರದ ಖಾಸಗಿ ಕಾಲೇಜೊಂದಕ್ಕೆ ಆಕೆಯನ್ನು ಸೇರಿಸಲಾಯಿತು.

ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ನಂತರ ರೂಪಾ ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ ಬರೆದರೂ ರ್ಯಾಂಕ್ ಕಡಿಮೆಯಿದ್ದ ಕಾರಣ ಎಂಬಿಬಿಎಸ್ ಕೋರ್ಸ್ ಗೆ ಸೇರಲಾಗಲಿಲ್ಲ. “ಕೋಟಾಕ್ಕೆ ತೆರಳಿ ಅಲ್ಲಿ ತರಬೇತಿ ಪಡೆದು ಮತ್ತೊಮ್ಮೆ ಪರೀಕ್ಷೆ ಬರೆಯುವಂತೆ ಕೆಲವರು ಸಲಹೆ ನೀಡಿದ್ದರು. ಆದರೆ ಪತಿಯ ಮನೆಯವರು ಇದಕ್ಕೆ ಒಪ್ಪುತ್ತಾರೆಯೇ ಎಂಬ ಸಂದೇಹ ನನ್ನಲ್ಲಿತ್ತು. ಆದರೆ ಪತಿ ಹಾಗೂ ಅವರ ಹಿರಿಯ ಸಹೋದರ ನನ್ನನ್ನು ಕೋಟಾಕ್ಕೆ ಕಳುಹಿಸಲು ಒಪ್ಪಿದರು. ನನ್ನ ಖರ್ಚು ವೆಚ್ಚಗಳನ್ನು ಭರಿಸಲು ಅವರು ಆಟೊ ರಿಕ್ಷಾಗಳನ್ನು ಓಡಿಸಲು ಆರಂಭಿಸಿದರು.” ಎನ್ನುತ್ತಾರೆ ರೂಪಾ.

2016ರಲ್ಲಿ ಆಕೆ ಉತ್ತಮ ಫಲಿತಾಂಶ ದಾಖಲಿಸಿದ್ದರೂ ಸೀಟ್ ಗಳಿಸುವಲ್ಲಿ ವಿಫಲಳಾಗಿದ್ದಳು. ಕೋಟಾಕ್ಕೆ ಕಳುಹಿಸುವ ಕುಟುಂಬದ ನಿರ್ಧಾರಕ್ಕೆ ಗ್ರಾಮಸ್ಥರು ಆಗಲೇ ವಿರೋಧ ವ್ಯಕ್ತಪಡಿಸುತ್ತಿದ್ದರು. ಅಡುಗೆ ಮಾಡಲು ಹಾಗೂ ಕುಟುಂಬವನ್ನು ನೋಡಿಕೊಳ್ಳಲು ಮಾತ್ರ ಆಕೆ ಸೂಕ್ತ ಎಂದು ಗ್ರಾಮಸ್ಥರು ಹೇಳುತ್ತಿದ್ದರು.

“ಆದರೆ ಪತಿಗೆ ನನ್ನ ಮೇಲೆ ಭರವಸೆಯಿತ್ತು. ಕೋಚಿಂಗ್ ಸೆಂಟರ್ ನನ್ನ 75 ಶೇ.ದಷ್ಟು ಶುಲ್ಕವನ್ನು ಕಡಿತಗೊಳಿಸಿದ ನಂತರ ಪತಿ ಕುಟುಂಬಸ್ಥರನ್ನು ಮನವೊಲಿಸಿದರು. ಇದರಿಂದಾಗಿ ನಾನು ಇನ್ನೂ ಒಂದು ವರ್ಷದ ಕಾಲ ಅಲ್ಲಿ ಕಲಿತೆ” ಎಂದವರು ಹೇಳುತ್ತಾರೆ.

ಈ ವರ್ಷದ ನೀಟ್ ಪರೀಕ್ಷೆಯಲ್ಲಿ ರೂಪಾ 720ರಲ್ಲಿ 603 ಅಂಕ ಗಳಿಸುವ ಮೂಲಕ ದೇಶದಲ್ಲೇ 2,283 ರ್ಯಾಂಕ್ ಗಳಿಸಿದ್ದಾರೆ. ಕಾಲೇಜು ಹಂಚಿಕೆಗಾಗಿ ಕೌನ್ಸೆಲಿಂಗ್ ನಲ್ಲಿ ಪಾಲ್ಗೊಳ್ಳುತ್ತಿರುವ ಅವರು ಜೈಪುರದ ಎಸ್ ಎಂ ಎಸ್ ಕಾಲೇಜಿನಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.”

ಕಲಾ ವಿಭಾಗದಲ್ಲಿ ಪದವೀಧರರಾಗಿರುವ ಶಂಕರ್ ತನ್ನ ಸಹೋದರನೊಂದಿಗೆ ಕೃಷಿಯಲ್ಲಿ ತೊಡಗಿದ್ದು, ಪತ್ನಿ ನಿರ್ಧಾರಗಳಿಗೆ ಬೆಂಬಲವಾಗಿ ನಿಂತ ಸಂತಸದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X