Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಚ್ಛೇದಿನ್ ಎಲ್ಲಿ ಬಂತು? : ಮೋದಿ...

ಅಚ್ಛೇದಿನ್ ಎಲ್ಲಿ ಬಂತು? : ಮೋದಿ ವಿರುದ್ಧ ಸಿಎಂ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ1 July 2017 7:09 PM IST
share
ಅಚ್ಛೇದಿನ್ ಎಲ್ಲಿ ಬಂತು? : ಮೋದಿ ವಿರುದ್ಧ ಸಿಎಂ ವಾಗ್ದಾಳಿ

ತುಮಕೂರು/ಮಧುಗಿರಿ,ಜು.1: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ಸಾಕಷ್ಟು ಭರವಸೆಗಳನ್ನು ನೀಡಿದ್ದರು, ಆದರೆ ಇದುವರೆಗೆ ಯಾವುದೇ ಭರವಸೆಯನ್ನು ಈಡೇರಿಸಿಲ್ಲ, ಅಚ್ಛೇದಿನ್ ಆಯೇಗಾ, ಅಚ್ಛೇದಿನ್ ಆಯೇಗಾ ಎಂದು ಹೇಳುತ್ತಿದ್ದರು, ಅಚ್ಛೇದಿನ್ ಎಲ್ಲಿ ಬಂದಿದೆ ಎಂದು ಜನರನ್ನು ಪ್ರಶ್ನಿಸಿದರು.

ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, ಮೋದಿ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಚುನಾವಣಾ ಭರವಸೆಯಲ್ಲಿ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು, ಆದರೆ ಇದುವರೆಗೂ 4ಲಕ್ಷ ಉದ್ಯೋಗವನ್ನು ಸೃಷ್ಟಿಸಿದ್ದಾರೆ. ಅಧಿಕಾರಕ್ಕೆ ಬಂದ ನೂರೇ ದಿನದಲ್ಲಿ  ವಿದೇಶದಲ್ಲಿನ ಕಪ್ಪುಹಣ ಭಾರತಕ್ಕೆ ತರುತ್ತೇನೆ, 15 ರೂಪಾಯಿ ತಂದ್ರಾ? ಮೋದಿ ಬಾಯಿ ಬಡಾಯಿ, ಸಾಧನೆ ಶೂನ್ಯ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರ 2013ರಲ್ಲಿ ನೀಡಿದ್ದ ಚುನಾವಣಾ ಭರವಸೆಗಳಲ್ಲಿ ಶೇಕಡಾ 95ರಷ್ಟು ಭರವಸೆಯನ್ನು ಈಡೇರಿಸಿದ್ದೇವೆ, ಇದು ನಮಗೆ ಹೆಮ್ಮೆ ವಿಚಾರವಾಗಿದೆ, ನುಡಿದ್ದಂತೆ ನಡೆಯುತ್ತಿದ್ದೇವೆ, ಬಿಜೆಪಿಯಂತೆ ಯೂಟರ್ನ್ ರಾಜಕಾರಣವನ್ನು ಮಾಡುವುದಿಲ್ಲ, ಜಿಎಸ್‍ಟಿ, ಆಧಾರ್, ನರೇಗಾ ವಿರೋಧಿಸಿದ್ದ ಬಿಜೆಪಿಯವರು ಇಂದು ಅದೇ ಯೋಜನೆಗಳನ್ನು ಅಪ್ಪಿಕೊಳ್ಳುತ್ತಿದ್ದಾರೆ, ಒಪ್ಪಿಕೊಳ್ಳುತ್ತಿದ್ದಾರೆ, ಜಿಎಸ್‍ಟಿ ಯೋಜನೆ ಯುಪಿಎ ಸರ್ಕಾರದ ಕೂಸು, ಅದನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದರು.

ಜನವಿರೋಧ ಇಲ್ಲದ ಸರ್ಕಾರ ದೇಶದಲ್ಲಿ ನಮ್ಮದು ಮಾತ್ರ, ಸಾಲಮನ್ನಾಕ್ಕೆ ರೈತರು ದೇಶದ ವಿವಿಧೆಡೆ ಹೋರಾಟ ಪ್ರಾರಂಭಿಸಿದರು, ಮಧ್ಯಪ್ರದೇಶದಲ್ಲಿ ರೈತರನ್ನು ಗುಂಡಿಕ್ಕಿ ಕೊಂದರು, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಸಾಲಮನ್ನಾ ಮಾಡಿದ ಆದೇಶ ಹೊರಬಂದಿಲ್ಲ, ರೈತರು ಹೋರಾಟ ಮಾಡುವ ಮುಂಚೆಯೇ ಸಾಲಮನ್ನಾ ಮಾಡಿದ್ದೇನೆ, 6 ವರ್ಷದಿಂದ ಬರಗಾಲದಲ್ಲಿರುವ ಕರ್ನಾಟಕದಲ್ಲಿ ರೈತರ ಸಾಲವನ್ನು ಮಾಡುವಂತೆ ಪ್ರಧಾನಿಗೆ ಬಿಜೆಪಿ ನಾಯಕರೊಂದಿಗೆ ತೆರಳಿ ಮನವಿ ಮಾಡಿದೆವು, ನೋಡುತ್ತೇವೆ ಎಂದರೆ ಹೊರತು ಏನು ಮಾಡಲಿಲ್ಲ, ಬಿಜೆಪಿ ನಾಯಕರು ಒತ್ತಡ ಹಾಕಲಿಲ್ಲ ಎಂದರು

ಇತಿಹಾಸದಲ್ಲಿಯೇ ಯಾರು ಮಾಡದಷ್ಟು ಸಾಲವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ, ಸಾಲ ಮನ್ನಾ ಮಾಡುವಂತೆ ಕೊರಳಪಟ್ಟಿ ಹಿಡಿಯುತ್ತೇನೆ ಎಂದಿದ್ದ ಬಿಜೆಪಿ ಮುಖಂಡರು ಮೋದಿ ಅವರಿಗೆ ಕೈಮುಗಿದು ರಾಷ್ಟ್ರೀಯ ಬ್ಯಾಂಕ್‍ಗಳ ಸಾಲವನ್ನು ಮನ್ನಾ ಮಾಡಿಸಲಿ, ಬಿಎಸ್‍ವೈ ಮುಖ್ಯಮಂತ್ರಿಯಾಗಿದ್ದಾಗ ಸಾಲಮನ್ನಾ ಮಾಡಲು ಆಗುವುದಿಲ್ಲ, ಕೇಂದ್ರ ಸರಕಾರ ನೋಟು ಮುದ್ರಿಸುವ ಅವಕಾಶ ನೀಡಿಲ್ಲ ಎಂದಿದ್ದರು, ಅಂತಹವರು ಈಗ ಸಾಲಮನ್ನಾ ಮಾಡುವಂತೆ ಹೇಳುತ್ತಾರೆ, ಇಂತಹ ಎರಡು ನಾಲಿಗೆಯ ನಾಯಕರನ್ನು ಜನರು ನಂಬಬಾರದು ಎಂದು ಹೇಳಿದರು.

ಮಧುಗಿರಿ ಅಭಿವೃದ್ಧಿಗೆ ಶಾಸಕ ಕೆ.ಎನ್.ರಾಜಣ್ಣ ಕಾರಣ, ಕ್ರಿಯಾಶೀಲ ಶಾಸಕ, ಬಡವರ ಬಗ್ಗೆ ಚಿಂತಿಸುವ ರಾಜಕಾರಣಿ, ರಾಜಕಾರಣಿ ಜನಪರ ಕಾಳಜಿ ಹೊಂದಿರಬೇಕು, ಕಾಳಜಿಯುಳ್ಳ ರಾಜಕಾರಣಿ ಜನರ ಮನಸ್ಸಿನಲ್ಲಿ ಉಳಿಯುತ್ತಾರೆ, ಅಂತಹ ರಾಜಕಾರಣಿ ಕೆ.ಎನ್.ರಾಜಣ್ಣನವರು, ಯಾವ ಶಾಸಕ ಮಾಡದೇ ಇರುವಷ್ಟು ಅಭಿವೃದ್ಧಿ ಕೆಲಸ ಇಲ್ಲಿ ಆಗಿದೆ. ಕೆ.ಎನ್.ರಾಜಣ್ಣ ಸಿಕ್ಕಿರುವುದು ಈ ಕ್ಷೇತ್ರದ ಪುಣ್ಯ ಎಂದು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X