Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಪತ್ರಿಕಾ ದಿನಾಚರಣೆ

ಬೆಳ್ತಂಗಡಿ: ಪತ್ರಿಕಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 July 2017 7:15 PM IST
share
ಬೆಳ್ತಂಗಡಿ: ಪತ್ರಿಕಾ ದಿನಾಚರಣೆ

ಬೆಳ್ತಂಗಡಿ, ಜು.1: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವಂತಹ ಇಂದಿನ ಸನ್ನಿವೇಶದಲ್ಲಿ ಪತ್ರಕರ್ತರು ಚಳುವಳಿಗಾರರಾಗಿ, ಹೋರಾಟಗಾರರಾಗಿ ಗುರುತಿಸಿಕೊಳ್ಳುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸದಾಶಿವ ಶೆಣೈ ಹೇಳಿದರು.

ಅವರು ಶನಿವಾರ ಬೆಳ್ತಂಗಡಿ ಶ್ರೀಗುರುನಾರಾಯಣ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
 
ರಾಜಕಾರಣಿಗಳು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದರೆ, ಅಧಿಕಾರಿಗಳು ಹಣಮಾಡುವುದೇ ತಮ್ಮ ಉದ್ದೇಶವೆಂದು ತಿಳಿದುಕೊಂಡಂತಿದೆ. ಹೀಗಾಗಿ ಇವರಿಬ್ಬರಿಂದಲು ಸಮಾಜ ಕಟ್ಟಲು ಸಾಧ್ಯವಿಲ್ಲ ಎಂಬುದು ನಿಶ್ಚಿತ. ಹೀಗಾಗಿ ಇಂದು ಸಮಾಜ ಪತ್ರಕರ್ತರ ಕಡೆಗೆ ನೋಡುತ್ತಿದೆ. ಉತ್ತಮ ಸಮಾಜ ಕಟ್ಟಲು ನಾವು ಹೆಚ್ಚಿನ ಜವಾಬ್ದಾರಿ ಹೊರಬೇಕಾಗಿದೆ. ನ್ಯಾಯಾಂಗ, ಶಾಸಕಾಂಗದಲ್ಲೂ ಒಳ್ಳೆಯವರಿದ್ದಾರೆ. ಅವರನ್ನು ಗುರುತಿಸುವ ಕೆಲಸ ಪತ್ರಕರ್ತರಿಂದಾಗಬೇಕು. ಸಮಾಜದ ರೋಗವನ್ನು ನಿವಾರಿಸುವ ಕಾರ್ಯ ನಾವು ಮಾಡಬೇಕಾಗಿದೆ ಎಂದರು.

ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು, ಮೂವತ್ತೈದು ವರ್ಷಗಳ ಹಿಂದಿನ ವರದಿಗಾರಿಕೆಗೂ ಇಂದಿನದಕ್ಕೂ ಬಹಳಷ್ಟು ವ್ಯತ್ಯಾಸಗಳನ್ನು ಕಂಡಿದೆ. ಇಂದು ಸ್ವಂತಿಕೆ ಇಲ್ಲದ ವರದಿಗಾರಿಕೆಯೇ ಹೆಚ್ಚಾಗಿದೆ. ಅಚ್ಚುಕಟ್ಟುತನದಿಂದ, ಸ್ವಾತಂತ್ರ್ಯದಿಂದ, ಸಮಚಿತ್ತತೆಯಿಂದ, ಬದ್ಧತೆಯಿರುವ ಬರವಣಿಗೆಯೇ ಇಲ್ಲವಾಗಿದೆ. ಪತ್ರಕರ್ತನಿಗೆ ಸಹಜ ಕುತೂಹಲ ಇರಬೇಕೆ ಹೊರತು ಕೆಟ್ಟ ಕುತೂಹಲ ಇರಬಾರದು ಎಂದ ಬೈಕಂಪಾಡಿ ಅವರು ನಿಮಗೆ ಸ್ವಾತಂತ್ರ್ಯವಿದೆ, ಅವಕಾಶವಿದೆ, ಸ್ವಂತ ವ್ಯಾಖ್ಯಾನಕ್ಕೆ ಅವಕಾಶವಿದ್ದರೂ ಯಾಕೆ ಬರೆಯಲು ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಇಂದು ಒಬ್ಬ ವರದಿಗಾರ ಸುದ್ದಿ ಮಾಡಲು ಹೋದರೆ ಮರುದಿನ ಇದ್ದ ಎಲ್ಲಾ ಪತ್ರಿಕೆಗಳನ್ನೂ ಅದೇ ರೀತಿ ಬರುತ್ತದೆ. ಇನ್ನೊಬ್ಬರ ಸುದ್ದಿಯನ್ನು ಕೇಳಬಾರದು ಎಂಬ ಕನಿಷ್ಟ ಅರಿವು ಇಲ್ಲಿದಿರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ನಾನು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಣದ ಚಿಂತೆ ಇರಲಿಲ್ಲ. ಅನುಭವ, ಬರೆಯಬಲ್ಲೆ ಎಂಬ ಧೈರ್ಯ ನನ್ನನ್ನು ಈ ಸ್ಥಾನಕ್ಕೆ ತಂದು ನಿಲ್ಲಿಸಿದೆ ಎಂದರು.
 
ಬೆಳ್ತಂಗಡಿಯ ವಿಶ್ರಾಂತ ಹಿರಿಯ ಪತ್ರಕರ್ತ ಅಶೋಕ್ ಪಿ.ಎಸ್ ಅವರನ್ನು ಸಮ್ಮಾನಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಅಭ್ಯಾಗತರಾಗಿದ್ದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮನೋಹರ ಬಳಂಜ ವಹಿಸಿದ್ದರು.

ಈ ಸಂದರ್ಭ ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದ ಗುರುವಾಯನಕರೆ ಪ್ರೌಢ ಶಾಲೆ ಹಾಗೂ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕಬ್ಬಿಣದ ಕಪಾಟುಗಳನ್ನು ಕೊಡುಗೆಯಾಗಿ ನೀಡಲಾಯಿತು. ಹಾಗೆಯೇ ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ ಅತೀ ಹೆಚ್ಚಿನ ಅಂಕ ಪಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಚ್ಚಿನದ ನವೀನ್, ಮಚ್ಚಿನ ಪ್ರೌಢಶಾಲೆಯ ಸಫ್ರಿನಾ ಬಾನು, ಕಾಶೀಪಟ್ಣ ಪ್ರೌಢಶಾಲೆಯ ಪ್ರಜೇಶ್ ಹಾಗೂ ಗೇರುಕಟ್ಟೆ ಪ್ರೌಢಶಾಲೆಯ ಮೋಹಿನಿ ಎಂಬ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಸ್ಮರಣಿಕೆ ನೀಡಲಾಯಿತು.

ಸಂಘದ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಸ್ವಾಗತಿಸಿದರು. ಕೋಶಾಧಿಕಾರಿ ದೀಪಕ್ ಆಠವಳೆ ಉಪನ್ಯಾಸಕರ ಪರಿಚಯ ನೀಡಿದರು. ಜತೆಕಾರ್ಯದರ್ಶಿ ಪದ್ಮನಾಭ ಕುಲಾಲ್ ವಂದಿಸಿದರು. ಉಪಾಧ್ಯಕ್ಷ ಭುವನೇಶ್ ಗೇರುಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X