Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯಾ: ‘ಮೆರ್ಸ್ ’ಕಾಯಿಲೆ ಪೀಡಿತ...

ಸೌದಿ ಅರೇಬಿಯಾ: ‘ಮೆರ್ಸ್ ’ಕಾಯಿಲೆ ಪೀಡಿತ 13 ರೋಗಿಗಳು ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ1 July 2017 8:38 PM IST
share
ಸೌದಿ ಅರೇಬಿಯಾ: ‘ಮೆರ್ಸ್ ’ಕಾಯಿಲೆ ಪೀಡಿತ 13 ರೋಗಿಗಳು ಆಸ್ಪತ್ರೆಗೆ ದಾಖಲು

ರಿಯಾದ್, ಜು.1: ಸೌದಿ ಅರೇಬಿಯಾದಲ್ಲಿ ಮಾರಣಾಂತಿಕ ‘ಮೆರ್ಸ್-ಸಿಒವಿ’ (ಮಿಡ್ಲ್ ಈಸ್ಟ್ ರೆಸ್ಪಿರೆಟರಿ ಸಿಂಡ್ರೋಮ್-ಕೊರೊನ ವೈರಸ್)ಕಾಯಿಲೆ ಬಾಧಿತ 13 ರೋಗಿಗಳು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು , ಎರಡು ದಿನದ ಹಿಂದೆ 30ರ ಹರೆಯದ ಮಹಿಳೆಯೋರ್ವರು ಈ ರೋಗದಿಂದ ಮೃತಪಟ್ಟಿದ್ದಾರೆ. ಒಂಟೆಯ ಮೂಲಕ ಪರೋಕ್ಷವಾಗಿ ಈ ರೋಗದ ವೈರಸ್ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ಸೌದಿ ಅರೇಬಿಯಾದಲ್ಲಿ 2012ರ ಜೂನ್‌ನಿಂದ 1,667 ಮೆರ್ಸ್-ಸಿಒವಿ ಪ್ರಕರಣ ದಾಖಲಾಗಿದ್ದು ಇದರಲ್ಲಿ 680 ಮಂದಿ ಮೃತಪಟ್ಟಿದ್ದಾರೆ.

ಒಂಟೆ ಜ್ವರ ಎಂದೂ ಕರೆಯಲಾಗುವ ಮೆರ್ಸ್ ರೋಗವು ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗವಾಗಿದ್ದು ಇದನ್ನು 2012ರಲ್ಲಿ ಸೌದಿ ಅರೇಬಿಯಾದಲ್ಲಿ ಪತ್ತೆಹಚ್ಚಲಾಗಿತ್ತು. ಮನುಷ್ಯರಿಗೆ ಸಂಬಂಧಿಸಿ, ಶೇ.80ರಷ್ಟು ಮೆರ್ಸ್ ಕಾಯಿಲೆಯ ಪ್ರಕರಣ ಸೌದಿಯಲ್ಲಿ ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲೂಎಚ್‌ಒ) ತಿಳಿಸಿದೆ. ಮೆರ್ಸ್ ರೋಗದ ಲಕ್ಷಣ ಕೆಲವೊಮ್ಮೆ ಗೋಚರಕ್ಕೇ ಬಾರದೆ ಇರಬಹುದು. ಇನ್ನು ಕೆಲವರಲ್ಲಿ ಸ್ವಲ್ಪ ಮಟ್ಟಿನ ಉಸಿರಾಟ ಸಮಸ್ಯೆ ಕಂಡುಬರಬಹುದು. ಕೆಲವೊಮ್ಮೆ  ಶ್ವಾಸೋಚ್ಛಾಸ ಕ್ರಿಯೆಯಲ್ಲಿ ತೀವ್ರವಾದ ಸಮಸ್ಯೆ ಕಂಡು ಬರಬಹುದು.

ಜ್ವರ, ಕೆಮ್ಮು ಹಾಗೂ ಉಸಿರಾಟಕ್ಕೆ ತೊಂದರೆ- ಇದು ಮೆರ್ಸ್ ಕಾಯಿಲೆಯ ಸಾಮಾನ್ಯ ಲಕ್ಷಣ. ನ್ಯುಮೋನಿಯಾ ಬಾಧಿಸುವ ಸಾಧ್ಯತೆ ಇರುತ್ತದೆ. ಉದರಕ್ಕೆ ಸಂಬಂಧಿಸಿದ ತೊಂದರೆ, ಭೇದಿ ಕೂಡಾ ಕಾಣಿಸಿಕೊಳ್ಳುತ್ತದೆ. ಹಿರಿಯರಲ್ಲಿ (ವೃದ್ಧರಲ್ಲಿ) ಈ ವೈರಸ್‌ಗಳು ತೀವ್ರವಾದ ಕಾಯಿಲೆಗೆ ಕಾರಣವಾಗುತ್ತವೆ.

ಪ್ರಸಕ್ತ ಈ ಕಾಯಿಲೆಗೆ ಯಾವುದೇ ಚುಚ್ಚುಮದ್ದು ಅಥವಾ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ರೋಗಿಯ ಚಿಕಿತ್ಸಕ ಸ್ಥಿತಿಯನ್ನು ಅವಲಂಬಿಸಿ ಈಗ ಚಿಕಿತ್ಸೆ ನೀಡಲಾಗುತ್ತದೆ. ಸೋಂಕು ತಗುಲಿದ ಸವಾರಿ ಒಂಟೆಗಳು ಅಥವಾ ಮನುಷ್ಯರ ಸಂಪರ್ಕದಲ್ಲಿರುವ ವ್ಯಕ್ತಿಗಳಿಗೆ ಈ ರೋಗದ ಸೋಂಕು ತಗುಲುತ್ತದೆ ಎಂದು ತಿಳಿದುಬಂದಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪ್ರವಾಸಕ್ಕೆ ತೆರಳಿದ್ದ ಕೆಲವು ವಿದೇಶಿಯರಿಗೆ ಕೂಡಾ ಈ ಸೋಂಕು ತಗುಲಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳನ್ನು ಹೊರತುಪಡಿಸಿ, ಇತರ ರಾಷ್ಟ್ರಗಳಲ್ಲಿ ಈ ರೋಗದ ವೈರಸ್‌ಗಳು ಕಾಣಿಸಿಕೊಳ್ಳುವುದು ಅಪರೂಪವಾಗಿದೆ ಎಂದು ಡಬ್ಲೂಎಚ್‌ಒ ವರದಿ ತಿಳಿಸಿದೆ.

ಕೃಷಿ ಕ್ಷೇತ್ರ, ಮಾರುಕಟ್ಟೆ , ಹಟ್ಟಿ ಇತ್ಯಾದಿಗಳಿಗೆ ಭೇಟಿ ನೀಡುವ ಸಂದರ್ಭ ಸವಾರಿಗೆ ಬಳಸಲಾಗುವ ಒಂಟೆ , ಇತರ ಒಂಟೆಗಳು ಅಥವಾ ಸಾಕುಪ್ರಾಣಿಗಳ ಸಂಪರ್ಕ ಆಗುವ ಸಂಭವವಿದೆ. ಆದ್ದರಿಂದ ಇವನ್ನು ಮುಟ್ಟುವ ಮೊದಲು ಹಾಗೂ ಬಳಿಕ ಕೈಗಳನ್ನು ತೊಳೆದುಕೊಳ್ಳಬೇಕು. ಅಲ್ಲದೆ ರೋಗಪೀಡಿತ ಪ್ರಾಣಿಗಳನ್ನು ಸ್ಪರ್ಶಿಸಬಾರದು. ಒಂಟೆಗಳ ಮಾಂಸ ಅಥವಾ ಹಾಲನ್ನು ಚೆನ್ನಾಗಿ ಕುದಿಸಿ ಬಳಸಬೇಕು. ಇವನ್ನು ಬೇಯಿಸದ ಪದಾರ್ಥಗಳ ಜೊತೆ ಇಡಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X