Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪತ್ರಕರ್ತರಿಬ್ಬರಿಗೂ ವಿಧಾನಸಭೆ ಸ್ಪೀಕರ್...

ಪತ್ರಕರ್ತರಿಬ್ಬರಿಗೂ ವಿಧಾನಸಭೆ ಸ್ಪೀಕರ್ ಮುಂದೆ ಹಾಜರಾಗಲು ಹೈಕೋರ್ಟ್ ಆದೇಶ

ಸೊಂಟದ ಕೆಳಗಿನ ಭಾಷೆ ಬಳಸಿದರೆ ನಿಮ್ಮ ವಿರುದ್ಧ ಕಠಿಣ ಕ್ರಮ

ವಾರ್ತಾಭಾರತಿವಾರ್ತಾಭಾರತಿ1 July 2017 8:54 PM IST
share
ಪತ್ರಕರ್ತರಿಬ್ಬರಿಗೂ ವಿಧಾನಸಭೆ ಸ್ಪೀಕರ್ ಮುಂದೆ ಹಾಜರಾಗಲು ಹೈಕೋರ್ಟ್ ಆದೇಶ

ಬೆಂಗಳೂರು, ಜು.1: ಅವಹೇಳನಕಾರಿ ವರದಿಗಳನ್ನು ಪ್ರಕಟಿಸಿದ್ದಾರೆನ್ನುವ ಆರೋಪದ ಮೇಲೆ ಹಕ್ಕುಬಾಧ್ಯತಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ವಿಧಾನಸಭೆಯಿಂದ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪತ್ರಕರ್ತ ರವಿ ಬೆಳಗೆರೆ ಹಾಗೂ ಅನಿಲ್‌ರಾಜ್‌ಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ್ ಮುಂದೆ  ಹಾಜರಾಗಲು ಹೈಕೋರ್ಟ್ ಆದೇಶಿಸಿದೆ.

ಬಂಧನಕ್ಕೆ ತಡೆಯಾಜ್ಞೆ ಕೋರಿ ರವಿ ಬೆಳಗೆರೆ ಹಾಗೂ ಅನಿಲ್‌ರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಿಗೇರಿ ಅವರಿದ್ದ ನ್ಯಾಯಪೀಠ ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್‌ರಾಜ್‌ಗೆ ಸೋಮವಾರ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ್ ಮುಂದೆ ಹಾಜರಾಗಲು ಆದೇಶಿಸಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಶಂಕರಪ್ಪ ಅವರು, ಅರ್ಜಿದಾರರು ಸ್ಪೀಕರ್ ಮುಂದೆ ಹಾಜರಾದಾಗ ಬಂಧಿಸುವ ಭೀತಿ ಇದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿದಾರರನ್ನು ಬಂಧಿಸದಂತೆ ಆದೇಶಿಸಿ ಎಂದು ವಕೀಲ ಶಂಕರಪ್ಪ ಅವರು ನ್ಯಾಯಪೀಠಕ್ಕೆ ಪದೇ ಪದೇ ಮನವಿ ಮಾಡಿಕೊಂಡರು.

ಸರಕಾರದ ಪರ ವಾದಿಸಿದ ಪೊನ್ನಣ್ಣ ಅವರು, ಆರೋಪಿಗಳಾದ ರವಿ ಬೆಳಗೆರೆ ಹಾಗೂ ಅನಿಲ್‌ರಾಜ್ ಅವರು ಸ್ಪೀಕರ್ ಮುಂದೆ ಹಾಜರಾದಾಗ ಯಾವುದೇ ಕಾರಣಕ್ಕೂ ಬಂಧಿಸುವ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಒಂದು ವೇಳೆ ಅರ್ಜಿದಾರರನ್ನು ಬಂಧಿಸಿದರೆ ಯಾವುದೇ ಹೊತ್ತಿನಲ್ಲಾದರೂ ಕೋರ್ಟ್‌ಗೆ ಬರಬಹುದು ಎಂದು ವಕೀಲ ಶಂಕರಪ್ಪಗೆ ನ್ಯಾಯಪೀಠವು ಭರವಸೆ ನೀಡಿತು.

ಅಲ್ಲದೆ, ಇನ್ನು ಮಂದೆ ಅರ್ಜಿದಾರರು ಯಾವುದೇ ಅವಿಧೇಯತೆ ಪ್ರದರ್ಶಿಸಿದರೆ ಅಥವಾ ಸೊಂಟದ ಕೆಳಗಿನ ಭಾಷೆ ಬಳಸಿದರೆ ಸದನ ನಿಮ್ಮ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಗಂಭೀರ ಎಚ್ಚರಿಕೆ ನೀಡಿದ ನ್ಯಾಯಪೀಠವು ಪತ್ರಿಕೋದ್ಯಮವನ್ನು ಪ್ರಜಾತಾಂತ್ರಿಕ ಮಾರ್ಗದಲ್ಲಿ ಮುನ್ನಡೆಸಿಕೊಂಡು ಹೋಗಿ ಎಂದು ವೌಖಿಕ ಸಲಹೆ ನೀಡಿದರು.

ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಸೋಮವಾರ ಮೂರು ಗಂಟೆಗೆ ವಿಧಾನಸಭಾಧ್ಯಕ್ಷರ ಮುಂದೆ ಹಾಜರಾಗಲಿ. ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಿ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲಿ ಎಂದು ನ್ಯಾಯಪೀಠವು ಆದೇಶಿಸಿತು. ವಕೀಲ ಶಂಕರಪ್ಪ ಅವರು ಅರ್ಜಿಯನ್ನು ಹಿಂಪಡೆದರು.

ಜೂನ್ 21 ರಂದು ವಿಧಾನಸಭೆಯಲ್ಲಿ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿತ್ತು. ಆದರೆ ರವಿ ಬೆಳಗೆರೆ ಅವರು ಧಾರವಾಡದ ಆಸ್ಪತ್ರೆಯಲ್ಲಿದ್ದ ಪರಿಣಾಮವಾಗಿ ಪೊಲೀಸರು ಅವರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆಯೇ ಕಳೆದ ಮಂಗಳವಾರ ಹೈಕೋರ್ಟ್ ಮುಂದೆ ನಿರೀಕ್ಷಣಾ ಜಾಮೀನಿಗೆ ಬೆಳಗೆರೆ ಹಾಗೂ ಅನಿಲ್ ರಾಜ್ ಅರ್ಜಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X