Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತರು ಸತ್ಯಕ್ಕೆ ಸನಿಹವಾದ...

ಪತ್ರಕರ್ತರು ಸತ್ಯಕ್ಕೆ ಸನಿಹವಾದ ವರದಿಗಾರಿಕೆ ಮಾಡಬೇಕು: ರಾಜು ಮೊಗವೀರ

ವಾರ್ತಾಭಾರತಿವಾರ್ತಾಭಾರತಿ1 July 2017 9:40 PM IST
share
ಪತ್ರಕರ್ತರು ಸತ್ಯಕ್ಕೆ ಸನಿಹವಾದ ವರದಿಗಾರಿಕೆ ಮಾಡಬೇಕು: ರಾಜು ಮೊಗವೀರ

ಮುಂಡಗೋಡ, ಜು.1: ಪತ್ರಕರ್ತರು ಬದ್ಧತೆ, ವಸ್ತು ನಿಷ್ಠೆ, ಸತ್ಯಕ್ಕೆ ಸನಿಹವಾದ ಸುದ್ದಿಯನ್ನು ಬರೆಯಬೇಕು ಎಂದು ಶಿರಸಿ ಉಪವಿಭಾಗಧಿಕಾರಿ ರಾಜೂ ಮೊಗವೀರ ಹೇಳಿದರು.

ಅವರು ಶಿರಸಿಯಲ್ಲಿ ಪತ್ರಕರ್ತರ ಭವನದಲ್ಲಿ ಶನಿವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಕರ್ತರ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ಸಚ್ಚಿದಾನಂದವರಿಗೆ ಕೆ. ಶ್ಯಾಮರಾವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪತ್ರಕರ್ತರು ತಮ್ಮ ಬದ್ದತೆ ಅರಿತುಕೊಳ್ಳುವುದು ಉತ್ತಮ. ಏನೇ ಬರೆಯ ಬೇಕಾದರು ಬಹಳ ವಿಚಾರಮಾಡಿ ಜವಾಬ್ದಾರಿಯಿಂದ ಬರೆಬೇಕಾಗುತ್ತೆ. ಏಕೆಂದರೆ ಪತ್ರಿಕೆಯಲ್ಲಿ ಬಂದಂತಹ ಸುದ್ದಿಗಳು ಅಧಿಕೃತವಾಗುತ್ತವೆ. ಧಾವಂತದಲ್ಲಿ ಬರೆಯದೇ ಓದುಗರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯಬೇಕು.

ಕಾಡಿನಲ್ಲಿರುವ ಸಿಂಹಕ್ಕೆ ಭೇಟೆಯಾಡುವುದು ಕಲಿಸಬೇಕಾಗಿಲ್ಲ, ನೀರಿನಲ್ಲಿರುವ ಮೀನಿಗೆ ಈಜು ಹೇಳಕೊಡಬೇಕಾಗಿಲ್ಲ. ಹಾಗೆಯೇ ಪತ್ರಕರ್ತನಿಗೆ ಹೇಗೆ ಬರೆಯಬೇಕು ಎಂದು ಹೇಳಕೊಡಬೇಕಾಗಿಲ್ಲ ಎಂದರು.

 ಹೊಸ ದಿಗಂತ ಪತ್ರಿಕೆಯ ಹುಬ್ಬಳ್ಳಿ ಆವೃತಿಯ ಸಂಪಾದಕ ವಿಠ್ಠಲ್‌ದಾಸ ಕಾಮತ್ ಮಾತನಾಡಿ, ಹೊಟ್ಟೆ ತುಂಬಿಕೊಳ್ಳಲು ಪತ್ರಕರ್ತನಾಗಬಾರದು. ಸಮಾಜದ ಅಂಕುಡೊಂಕುಗಳನ್ನು ತಿದ್ದುವಂತ ಕೆಲಸಮಾಡಬೇಕು. ಜಾತಿ ಆಧಾರಿತ ವರದಿಗಾರಿಕೆಯಿಂದ ದೂರ ಇರಬೇಕು. ಸಮಾಜದಲ್ಲಿ ಬೆರೆತು, ಸಮಾಜದಲ್ಲಿರುವ ಎಲ್ಲ ಜಾತಿ ಮತದವರ ನೋವಿಗೆ ಸ್ಪಂದಿಸುವಂತ ಕೆಲಸಮಾಡಬೇಕು. ಒಂದು ತಾಲೂಕಯ ವರದಿಗಾರನೆಂದರೆ ಆ ತಾಲೂಕಿನ ಶಾಸಕ ಇದ್ದಂತೆ ಎಂದರು.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಕಂಬಗಳಿಗೆ ಗೆದ್ದಲು ಹತ್ತಿದಾಗ ಅದಕ್ಕೆ ಸುಣ್ಣ ಬಣ್ಣ ಬಳೆಯುವ ಕೆಲಸವನ್ನು ಪತ್ರಿಕಾರಂಗ ಮಾಡಬೇಕಾಗುತ್ತದೆ. ಒಬ್ಬ ರೋಗಿಯ ಮನಷ್ಯ ದೇಹವನ್ನು ವೈದ್ಯ ಆರೋಗ್ಯವಂತ ಮಾಡುತ್ತಾನೆ. ಹಾಗೆಯೇ ಇಡೀ ಸಮಾಜವನ್ನು ಆರೋಗ್ಯವಂತ ಮಾಡುವ ತಾಕತ್ತು ಪತ್ರಕರ್ತನಿಗಿದೆ ಎಂದರು.

ಪತ್ರಕರ್ತರು ಹಣದ ಹಿಂದೆ ಗಿರಕಿಹೊಡೆದರೆ ಸತ್ಯ ಸುದ್ದಿಯನ್ನು ಮರೆಮಾಚ ಬೇಕಾಗುತ್ತದೆ. ಹೀಗಾದರೆ ನಾವು ಸಮಾಜವನ್ನು ಸುಧಾರಿಸುವುದು ಯಾವಾಗ ಎಂದರು. ಪತ್ರಕರ್ತರು ಧನಾತ್ಮಕವಾಗಿ ವಿಚಾರಮಾಡುವುದನ್ನು ಕಲಿಬೇಕು ಋಣಾತ್ಮಕ ವಿಚಾರಮಾಡುವುದನ್ನು ಬೀಡಬೇಕು.
ಪ್ರಶಸ್ತಿಗಳು ಹಣ ವಸೂಲಿಯ ಮೂಲಕ ಪಡಯದೇ ಸಾಧನೆಯ ಮೂಲಕ ಪತ್ರಕರ್ತನಿಗೆ ಬರಬೇಕು ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಬಕ್ಕಳ, ನರಸಿಂಹ ಸಾತೋಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಶೆಟ್ಟಿ,  ಕಾಂಗ್ರೆಸ್ ಹಿರಿಯ ಧುರಿಣ ಟಿಎಸ್‌ಎಸ್ ಅಧ್ಯಕ್ಷ ಶಾಂತರಾಮ ಶೀಗೆಹಳ್ಳಿ, ಉತ್ತರ ಕನ್ನಡ ಜಿಲ್ಲೆಯ ಪತ್ರಕರ್ತರು ಸೇರಿದಂತೆ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಾಘವೇಂದ್ರ ಹೆಬ್ಬಾರ ನಿರೂಪಿಸಿ ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X