Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನುಮತಿ ಇಲ್ಲದ ಮದ್ಯದಂಗಡಿಯನ್ನು...

ಅನುಮತಿ ಇಲ್ಲದ ಮದ್ಯದಂಗಡಿಯನ್ನು ಮುಚ್ಚಿಸಿದ ಮಹಿಳೆಯರು

ವಾರ್ತಾಭಾರತಿವಾರ್ತಾಭಾರತಿ1 July 2017 9:45 PM IST
share
ಅನುಮತಿ ಇಲ್ಲದ ಮದ್ಯದಂಗಡಿಯನ್ನು ಮುಚ್ಚಿಸಿದ ಮಹಿಳೆಯರು

ಮಡಿಕೇರಿ ಜು.1: ಜನವಸತಿ ಪ್ರದೇಶದಲ್ಲಿ ದಿಢೀರಾಗಿ ತಲೆ ಎತ್ತಿದ ಮದ್ಯದಂಗಡಿಯನ್ನು ಮಹಿಳೆಯರೇ ಮುಚ್ಚಿಸಿದ ಪ್ರಸಂಗ ಸಿದ್ದಾಪುರ ಸಮೀಪ ಪಾಲಿಬೆಟ್ಟ ರಸ್ತೆಯ ಸುಣ್ಣದ ಗೂಡು ಎಂಬಲ್ಲಿ ನಡೆದಿದೆ.

ಸರ್ವೋಚ್ಛನ್ಯಾಯಾಲಯದ ಆದೇಶದನ್ವಯ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಬದಿಯ ಮದ್ಯದಂಗಡಿಗಳಿಗೆ ಅಬಕಾರಿ ಇಲಾಖೆ ಬೀಗ ಜಡಿದ ಹಿನ್ನೆಲೆಯಲ್ಲಿ ಸಿದ್ದಾಪುರದ ಮುಖ್ಯ ರಸ್ತೆಯಲ್ಲಿದ್ದ ಮದ್ಯದಂಗಡಿಯೊಂದು ಶನಿವಾರ ಬೆಳಗ್ಗೆ ದಿಢೀರ್ ಆಗಿ ಸುಣ್ಣದ ಗೂಡು ಎಂಬಲ್ಲಿಗೆ ಸ್ಥಳಾಂತರಗೊಂಡಿತು. 

ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಸಿದ್ದಾಪುರ ಗ್ರಾಮ ಪಂಚಾಯತ್ಗೆ ದೂರು ಸಲ್ಲಿಸಿದ್ದಾರೆ. ಆದರೆ ಪಂಚಾಯತಿಯಂದ ಯಾರೂ ಬಾರದ ಹಿನ್ನೆಲೆಯಲ್ಲಿ ತಾವೇ ಅಂಗಡಿಯನ್ನು ಮುಚ್ಚಿಸಿದ್ದಾರೆ. ಸುಣ್ಣದ ಗೂಡಿನಲ್ಲಿ ಮದ್ಯದಂಗಡಿ ತೆರೆಯಲು ಯಾವುದೇ ಅನುಮತಿ ಪಡೆದುಕೊಂಡಿರಲಿಲ್ಲ.
ಸ್ಥಳೀಯರು ಹಾಗೂ ವಾರ್ಡ್ ಸದಸ್ಯರು ಮದ್ಯದಂಗಡಿ ತೆರೆಯಲು ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ನಿರಾಪೇಕ್ಷಣಾ ಪತ್ರವನ್ನು ಸಹ ನೀಡಿರಲಿಲ್ಲವೆನ್ನಲಾಗಿದೆ.

ಆದರೆ ಶನಿವಾರ ದಿಢೀರ್ ಆಗಿ ಮದ್ಯದಂಗಡಿ ತೆರೆದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು. ಸುಣ್ಣದಗೂಡಿನಲ್ಲಿ ಹೆಚ್ಚಾಗಿ ಕಾರ್ಮಿಕರೇ ವಾಸಿಸುತ್ತಿದ್ದು, ಅಷ್ಟೇ ಅಲ್ಲದೇ ಇದೀಗ ಆರಂಭವಾಗಿರುವ ಮದ್ಯದಂಗಡಿ ಸಮೀಪದಲ್ಲೇ ಕುಡಿಯುವ ನೀರಿನ ಬಾವಿಯೊಂದಿದೆ. ಮದ್ಯಪ್ರಿಯರು ಈ ಬಾವಿಯ ಸಮೀಪದಲ್ಲೇ ಅಶುಚಿತ್ವದ ವಾತಾವರಣವನ್ನು ಸೃಷ್ಟಿಸಲಿದ್ದಾರೆ. ಅಲ್ಲದೆ ಕಿರಿದಾದ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಅಪಘಾತಗಳು ಹೆಚ್ಚಾಗುವುದರಿಂದ ಯಾವುದೇ ಕಾರಣಕ್ಕೂ ಇಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದೆಂದು ಸ್ಥಳೀಯರು ಒತ್ತಾಯಿಸಿದರು.ಮತ್ತೆ ಮದ್ಯದಂಗಡಿಯನ್ನು ತೆರೆದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು. 
       

                                     

share
ವಾರ್ತಾಭಾರತಿ
ವಾರ್ತಾಭಾರತಿ
Next Story
X