Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಾಯಿಯಲ್ಲಿ ಲಾಲಾರಸ...

ಬಾಯಿಯಲ್ಲಿ ಲಾಲಾರಸ ಉತ್ಪತ್ತಿಯಾಗದಿರುವುದು ಸಮಸ್ಯೆಯೇ....?

ವಾರ್ತಾಭಾರತಿವಾರ್ತಾಭಾರತಿ2 July 2017 4:51 PM IST
share
ಬಾಯಿಯಲ್ಲಿ ಲಾಲಾರಸ ಉತ್ಪತ್ತಿಯಾಗದಿರುವುದು ಸಮಸ್ಯೆಯೇ....?

ನಮ್ಮ ಬಾಯಿಯಲ್ಲಿ ಉತ್ಪತ್ತಿಯಾಗುವ ಲಾಲಾರಸ ಅಥವಾ ಜೊಲ್ಲು ನಾವು ಸೇವಿಸುವ ಆಹಾರ ಜೀರ್ಣಗೊಳ್ಳಲು ನೆರವಾಗುತ್ತದೆ. ಅದು ನಮ್ಮ ಬಾಯಿಯನ್ನು ಸ್ವಚ್ಛವಾಗಿರಿಸುವ ಜೊತೆಗೆ ಬಾಯಿಯಲ್ಲಿ ಸ್ವಲ್ಪ ತೇವವನ್ನೂ ಕಾಯ್ದುಕೊಳ್ಳುತ್ತದೆ. ಬೂಸ್ಟು ಮತ್ತು ಬ್ಯಾಕ್ಟೀರಿಯಾಗಳನ್ನು ನಿಯಂತ್ರಿಸಲೂ ಈ ಲಾಲಾರಸ ನೆರವಾಗುತ್ತೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿರಲಿಕ್ಕಿಲ್ಲ.

ನಮ್ಮ ಬಾಯಿ ಸಾಕಷ್ಟು ಲಾಲಾರಸವನ್ನು ಉತ್ಪಾದಿಸಲು ವಿಫಲಗೊಂಡರೆ ಅದು ಒಳಗುತ್ತದೆ ಮತ್ತು ಬ್ಯಾಕ್ಟೀರಿಯಾಗಳು ಬಾಯಿಯಲ್ಲಿ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಿಕೊಳ್ಳುತ್ತವೆ. ಬಾಯಿ ಒಣಗಿರುವ ಸ್ಥಿತಿಯನ್ನು ‘ಝೆರೋಸ್ಟೋಮಿಯಾ’ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಅಂಶಗಳು ಇಲ್ಲಿವೆ.......

ನಮ್ಮ ಬಾಯಿ ಒಣಗುವುದೇಕೆ? ಮಧುಮೇಹ, ಕೆಪ್ಪಟ, ಪಾರ್ಶ್ವವಾಯು, ಅಧಿಕ ರಕ್ತದೊತ್ತಡ, ಕೀಲೂತ, ರಕ್ತಹೀನತೆ ಮತ್ತು ಅಲ್ಝಿಮರ್ ಕಾಯಿಲೆಯಂತಹ ಸ್ಥಿತಿಗಳು ಬಾಯಿಯನ್ನು ಒಣಗಿಸುತ್ತವೆ.

ಕೆಲವು ಔಷಧಿಗಳೂ ಲಾಲಾರಸ ಉತ್ಪತ್ತಿಯನ್ನು ತಡೆಯುತ್ತವೆ. ಅಸ್ತಮಾ, ವಾಕರಿಕೆ, ಅತಿಸಾರ, ಅಧಿಕ ರಕ್ತದೊತ್ತಡ, ಅಪಸ್ಮಾರ, ಮೊಡವೆ, ಬೊಜ್ಜು, ಶೀತ, ಉದ್ವೇಗ, ನೋವು, ಖಿನ್ನತೆ ಮತ್ತು ಅಲರ್ಜಿಗಳ ಚಿಕಿತ್ಸೆಗೆ ಬಳಸುವ ಕೆಲವು ಮಾತ್ರೆಗಳು ಬಾಯಿ ಒಣಗುವುದಕ್ಕೆ ಕಾರಣವಾಗಬಹುದು.
ವಿಕಿರಣ ಚಿಕಿತ್ಸೆ ಮತ್ತು ಕೆಮೊಥೆರಪಿಗಳು ಸಹ ಲಾಲಾರಸ ಉತ್ಪತ್ತಿಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತವೆ. ಜೊಲ್ಲುಗ್ರಂಥಿಗಳ ಮೇಲೆ ಪರಿಣಾಮವನ್ನುಂಟು ಮಾಡುವ ವೈದ್ಯಕೀಯ ಚಿಕಿತ್ಸೆಗಳು ಬಾಯೊಣಗಿಸುತ್ತವೆ.

ಅಪಘಾತದಿಂದ ಅಥವಾ ಶಸ್ತ್ರಚಿಕಿತ್ಸೆಯಿಂದ ನರಗಳಿಗೆ ಹಾನಿಯಾದಾಗಲೂ ಲಾಲಾರಸ ಉತ್ಪತ್ತಿಗೆ ತೊಂದರೆಯಾಗುತ್ತದೆ.
ನಾವು ಸಾಕಷ್ಟು ನೀರನ್ನು ಕುಡಿಯದಿದ್ದರೆ ಅಥವಾ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿದ್ದರೂ ಬಾಯೊಣಗುತ್ತದೆ.

ಅತಿಯಾದ ಧೂಮಪಾನಿಗಳಲ್ಲಿ ಬಾಯೊಣಗುವಿಕೆ ಸಾಮಾನ್ಯ ಅಡ್ಡಪರಿಣಾಮವಾಗಿದೆ. ಬಾಯಿಯಿಂದ ಉಸಿರಾಡಿದರೂ ಇದೇ ಆಗುತ್ತದೆ.
ಬಾಯಿ ಒಣಗಿದಾಗ ಏನಾಗುತ್ತದೆ? ಪದೇ ಪದೇ ಬಾಯಾರಿಕೆ ಅನ್ನಿಸುತ್ತದೆ. ಅದು ತುಟಿಗಳಲ್ಲಿ ಬಿರುಕುಗಳಾಗುವ ಜೊತೆಗೆ ಬಾಯಿಯೊಳಗೆ ಹುಣ್ಣುಗಳೂ ಆಗಬಹುದು. ಲಾಲಾರಸ ತೀರ ಕಡಿಮೆ ಪ್ರಮಾಣದಲ್ಲಿದ್ದರೆ ಬಾಯಿ ದುರ್ವಾಸನೆಯನ್ನೂ ಬೀರುತ್ತದೆ. ಹೀಗಾಗಿ ಆಗಾಗ್ಗೆ ಬಾಯಿ ಒಣಗುತ್ತಿದೆ ಎಂದು ನಿಮಗನ್ನಿಸಿದರೆ ವೈದ್ಯರನ್ನು ಭೇಟಿ ಯಾಗುವದು ಒಳ್ಳೆಯದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X