Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಕ್ಕಸಮುದ್ರ ಬ್ಯಾರೇಜ್ ನಿರ್ಮಾಣಕ್ಕೆ...

ಕುಕ್ಕಸಮುದ್ರ ಬ್ಯಾರೇಜ್ ನಿರ್ಮಾಣಕ್ಕೆ ರೂ. 6 ಕೋಟಿ ಅನುದಾನ ಮಂಜೂರು: ವೈಎಸ್‌ವಿ ದತ್ತ

ವಾರ್ತಾಭಾರತಿವಾರ್ತಾಭಾರತಿ2 July 2017 5:07 PM IST
share
ಕುಕ್ಕಸಮುದ್ರ ಬ್ಯಾರೇಜ್ ನಿರ್ಮಾಣಕ್ಕೆ ರೂ. 6 ಕೋಟಿ ಅನುದಾನ ಮಂಜೂರು: ವೈಎಸ್‌ವಿ ದತ್ತ

ಕಡೂರು, ಜು.2: ತಾಲೂಕಿನ ಕುಕ್ಕಸಮುದ್ರ ಬ್ಯಾರೇಜ್ ನಿರ್ಮಾಣಕ್ಕೆ ರೂ. 6 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ವೈ.ಎಸ್.ವಿ. ದತ್ತ ಹೇಳಿದರು.

ಅವರು ರವಿವಾರ ಕ್ಷೇತ್ರದ ಪಾದಯಾತ್ರೆ ಸಂದರ್ಭ ತಾಲೂಕಿನ ಹುಲಿಗುಂದಿ ಗ್ರಾಮದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕಡೂರು ತಾಲೂಕು ಡಾ. ಡಿ.ಎಂ. ನಂಜುಂಡಪ್ಪ ವರದಿಯ ಅನ್ವಯ ಅತ್ಯಂತ ಹಿಂದುಳಿದ ತಾಲೂಕು ಆಗಿದ್ದು, ತಾವು ಮತ್ತು ಹೊಸದುರ್ಗ ಕ್ಷೇತ್ರದ ಶಾಸಕ ಬಿ.ಜಿ. ಗೋವಿಂದಪ್ಪ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್‌ಬಾಬು ಪ್ರಯತ್ನದಿಂದ ಈ ಅನುದಾನ ಬಂದಿದೆ. ವಿಶ್ವೇಶ್ವರಯ್ಯ ಜಲ ನಿಗಮ ವತಿಯಿಂದ ವಿಶೇಷ ಅಭಿವೃದ್ದಿ ಯೋಜನೆಯಡಿ ಅತ್ಯಂತ ಹಿಂದುಳಿದ ತಾಲುಕುಗಳನ್ನು ಗುರುತಿಸಿ ಕೆರೆ ಅಭಿವೃದ್ದಿಗೆ ಅನುದಾನ ನೀಡಲಾಗಿದೆ. ಇದರಲ್ಲಿ ಕಡೂರು ತಾಲೂಕಿನ ಕುಕ್ಕಸಮುದ್ರ ಕೆರೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

 ಕುಕ್ಕಸಮುದ್ರ ಕೆರೆ ತಾಲೂಕಿನ ಅತ್ಯಂತ ದೊಡ್ಡ ಕೆರೆಯಾಗಿದ್ದು, ಇದರಲ್ಲಿ ಎರಡು ತೂಬುಗಳಿದ್ದು, ಈ ಎರಡು ತೂಬುಗಳಿಗೆ ರೂ. 6 ಕೋಟಿ ವೆಚ್ಚದಲ್ಲಿ ಎರಡು ಬ್ಯಾರೇಜ್ ನಿರ್ಮಾಣವಾಗಲಿದೆ, ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ವಿಶ್ವೇಶ್ವರಯ್ಯ ಜಲ ನಿಗಮವು ಯೋಜನಾವಾರು ಅನುದಾನ ಹಂಚಿಕೆ ಮಾಡಿ ಸರ್ಕಾರದ ಅನುಮೋದನೆಗಾಗಿ ಕ್ರಿಯಾಯೋಜನೆ ಸಿದ್ದ ಪಡಿಸಿದೆ, ಈ ಯೋಜನೆಯಲ್ಲಿ ಸುಮಾರು ರೂ. 25 ಕೋಟಿ ಆಗಿದ್ದು, ಇದರಲ್ಲಿ ಕಡೂರು, ಹೊಸದುರ್ಗ, ಚಿಕ್ಕನಾಯಕನಹಳ್ಳಿ ಮೂರು ಶಾಸಕರುಗಳ ಪ್ರಯತ್ನ ಎಂದರು.

 ತಾಲೂಕಿನ 32 ಕೆರೆಗಳಿಗೆ ನೀರು ಹರಿಸುವ ಯೋಜನೆಯಾದ ಭದ್ರಾ ಮೇಲ್ದಂಡೆ ಕಾಮಗಾರಿಯು ಅಂದಾಜು ರೂ. 175 ಕೋಟಿ ವೆಚ್ಚದ ಕಾಮಗಾರಿಗೆ ಇನ್ನೂ 15 ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಬವಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಈಗಾಗಲೇ 67 ಕಿ.ಮೀ ಭೂಸ್ವಾಧೀನ ಪ್ರಕ್ರಿಯೆ ನಡೆದಿದೆ. ಟೆಂಡರ್ ಪ್ರಕ್ರಿಯೆ ನಂತರ ಅಂದರೆ ಆಗಷ್ಟ್ ಅಥವಾ ಸೆಪ್ಟಂಬರ್ ತಿಂಗಳಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.

  ತಾವು ನಡೆಸುತ್ತಿರುವ ಪಾದಯಾತ್ರೆಗೆ ಒಂದು ವಾರ ಮುಗಿದಿದ್ದು, ಸುಮಾರು 250 ಕಿ.ಮೀ ಪಾದಯಾತ್ರೆ ಮುಗಿಸಲಾಗಿದೆ, ಉಳಿದ ಮೂರು ವಾರಗಳಲ್ಲಿ 750 ಕಿ.ಮೀ ಪಾದಯಾತ್ರೆ ಮುಗಿಯಲಿದೆ. ಪಾದಯಾತ್ರೆಯಿಂದ ತಮಗೆ ತೃಪ್ತಿ ತಂದಿದೆ. ತಮ್ಮ ಈ ಪಾದಯಾತ್ರೆ ಬಗ್ಗೆ ವಿಪಕ್ಷದವರು ಟೀಕಿಸುತ್ತಿದ್ದು, ತಾವು ಯಾವುದನ್ನು ಲೆಕ್ಕಿಸುವುದಿಲ್ಲ. ಈ ಪಾದಯಾತ್ರೆಯು ಯಾವುದೇ ಗಿಮಿಕ್ ಅಲ್ಲ. ರೈತರಿಗೆ ಆತ್ಮಸ್ಥರ್ಯ ತುಂಬುವ ಉದ್ದೇಶ ಮತ್ತು ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸುವುದು ಅಷ್ಟೇ ಎಂದು ಹೇಳಿದರು.

 ಈ ಸಂದರ್ಭ ಪಕ್ಷದ ಮುಖಂಡರಾದ ಭಂಡಾರಿಶ್ರೀನಿವಾಸ್, ಕೆ.ಎಸ್. ರಮೇಶ್, ಕೆ.ಹೆಚ್. ಲಕ್ಕಣ್ಣ, ಸೀಗೇಹಡ್ಲು ಹರೀಶ್, ಪುಟ್ಟೇಗೌಡ, ರೇವಣಸಿದ್ದಪ್ಪ, ಉಪೇಂದ್ರನಾಥ್, ಸುರತಾಳ್ ಮಂಜುನಾಥ್, ಕೆ.ಸಿ. ದತ್ತಾತ್ರಿ, ಕೃಷ್ಣಮೂರ್ತಿ, ವಿಜಯಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X