Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ರಾಯಭಾರಿ ಕಚೇರಿ ಸಂಪರ್ಕಿಸಲು ಜಾಧವ್ ರ ...

​ರಾಯಭಾರಿ ಕಚೇರಿ ಸಂಪರ್ಕಿಸಲು ಜಾಧವ್ ರ 18ನೆ ಪ್ರಯತ್ನ ವಿಫಲ

ವಾರ್ತಾಭಾರತಿವಾರ್ತಾಭಾರತಿ2 July 2017 5:16 PM IST
share
​ರಾಯಭಾರಿ ಕಚೇರಿ ಸಂಪರ್ಕಿಸಲು ಜಾಧವ್ ರ  18ನೆ ಪ್ರಯತ್ನ ವಿಫಲ

ಕರಾಚಿ, ಜು.2: ಭಾರತದ ನಿವೃತ್ತ ಸೈನಾಧಿಕಾರಿ ಕುಲಭೂಷಣ್‌ ಯಾದವ್  ಅವರು ರಾಯಭಾರಿ ಕಚೇರಿಯನ್ನು ಸಂಪರ್ಕಿಸಲು ನಡೆಸಿದ   ಹದಿನೆಂಟನೆ ಪ್ರಯತ್ನವನ್ನು ಪಾಕಿಸ್ತಾನ ವಿಫಲಗೊಳಿಸಿದೆ

ಕುಲಭೂಷಣ್  ಮನವಿಯನ್ನು ತಿರಸ್ಕರಿಸಿರುವ ಪಾಕಿಸ್ತಾನವು ಭಯೋತ್ಪಾದನೆಗೆ ನೆರವು ನೀಡುತ್ತಿದೆ ಎಂಬ ಭಾರತದ ಆರೋಪವನ್ನು ನಿರಾಕರಿಸಿದೆ ಎಂದು ’ಇಂಡಿಯಾ ಟುಡೆ” ಪತ್ರಿಕೆ  ವರದಿ ಮಾಡಿದೆ.

ಕುಲ್ ಭೂಷಣ್ ಜಾಧವ್ ವಿಚಾರಕ್ಕೆ ಸಂಬಂಧಿಸಿ ಭಾರತದ ವಾದವು ತರ್ಕದ ಹಾಸ್ಯವಾಗಿದೆ ಎಂದು ಪಾಕ್‌ ಬಣ್ಣಿಸಿದೆ. "ಕಮಾಂಡರ್ ಜಾಧವ್ ಅವರ ಪ್ರಕರಣವನ್ನು ಸಾಮಾನ್ಯ ಕೈದಿಗಳು ಮತ್ತು ಮೀನುಗಾರರ ಜೊತೆ ಹೋಲಿಸಲು ಭಾರತ ಪ್ರಯತ್ನ ನಡೆಸುತ್ತಿದ್ದು, ಇದು ತರ್ಕಶಾಸ್ತ್ರದ ಒಂದು ದುರಂತವಾಗಿದೆ" ಎಂದು ವಿದೇಶಾಂಗ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಎರಡು ದೇಶಗಳು ಪರಸ್ಪರ ಜೈಲುಗಳಲ್ಲಿ ಬಂಧಿಸಿರುವ ಕೈದಿಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡ ಒಂದು ದಿನದ ಬಳಿಕ ಪಾಕ್ ನ ವಿದೇಶಾಂಗ ಕಚೇರಿ ಈ ಹೇಳಿಕೆ ನೀಡಿದೆ. ಪಾಕಿಸ್ತಾನ ಭಾರತಕ್ಕೆ ತಿಳಿಸಿದ ಪಟ್ಟಿಯಲ್ಲಿ ಸುಮಾರು 500 ಮೀನುಗಾರರು ಸೇರಿದಂತೆ ಕನಿಷ್ಠ 546 ಭಾರತೀಯರು ಪಾಕಿಸ್ತಾನ ಜೈಲಿನಲ್ಲಿರುವ ವಿಚಾರ ಬೆಳಕಿಗೆ ಬಂದಿದೆ. 

"ಕಮಾಂಡರ್ ಜಾಧವ್ ಅವರು ಭಾರತೀಯ ನೌಕಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಬೇಹುಗಾರಿಕೆ, ಭಯೋತ್ಪಾದನೆ ಮತ್ತು ವಿನಾಶಕಾರಿ ಚಟುವಟಿಕೆಗಳಿಗಾಗಿ ಪಾಕಿಸ್ತಾನಕ್ಕೆ ತನ್ನ ಗುಪ್ತಚರ ಸಂಸ್ಥೆ RAW  ಕಳುಹಿಸಿತ್ತು. ಇದರಿಂದಾಗಿ ಅನೇಕ ಮುಗ್ಧರು ಬಲಿಯಾಗಿದ್ದರು.  ಅಪಾರ ಆಸ್ತಿಪಾಸ್ತಿ  ಹಾನಿಯಾಗಿತ್ತು." ಎಂದು ವಿದೇಶಾಂಗ ಕಚೇರಿ ತಿಳಿಸಿದೆ.

ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯದಿಂದ  ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟ ಜಾಧವ್ ಮತ್ತು ಪಾಕಿಸ್ತಾನಕ್ಕೆ ಪ್ರವೇಶಿಸಲು ಯತ್ನಿಸಿ ಮೂರು ವರ್ಷ ಜೈಲು ಶಿಕ್ಷೆಗೆ ಒಳಗಾದ ಭಾರತೀಯ ಎಂಜಿನಿಯರ್ ಮತ್ತು ವ್ಯಾಪಾರಿ ಹಮೀದ್ ನೆಹಲ್ ಅನ್ಸಾರಿ ಸೇರಿದಂತೆ ಪಾಕಿಸ್ತಾನದ ಜೈಲಿನಲ್ಲಿರುವ ಭಾರತದ ಕೈದಿಗಳಿಗೆ  ರಾಯಭಾರಿ ಕಚೇರಿಯನ್ನು ಸಂಪರ್ಕಿಸಲು ಭಾರತ ಶನಿವಾರ ಮಾಡಿದ್ದ ಮನವಿಯನ್ನು ಪಾಕ್‌  ತಿರಸ್ಕರಿಸಿದೆ.

ಭಾರತವು ಮತ್ತೊಮ್ಮೆ ಭಾರತೀಯ ಕೈದಿಗಳ ಬಿಡುಗಡೆ ಮತ್ತು ವಾಪಸಾತಿಗಾಗಿ ಪಾಕಿಸ್ತಾನವನ್ನು ವಿನಂತಿಸಿದೆ. ಜಾಧವ್ ಅವರನ್ನು ಮಾರ್ಚ್ 3, 2016 ರಂದು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಿಂದ ಬಂಧಿಸಲಾಗಿತ್ತು. ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ  ಜಾಧವ್‌ ತಾನು ಬಲೋಚಿಸ್ತಾನದಲ್ಲಿ ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿರುವ ಬಗ್ಗೆ  ವೀಡಿಯೊ ದಾಖಲೆ ಇದೆ ಎಂದು  ಪಾಕಿಸ್ತಾನ ಹೇಳಿದೆ, ಆದರೆ ಭಾರತ ಇದನ್ನು ತಿರಸ್ಕರಿಸಿದೆ. ಜಾಧವ್‌ ಅವರಿಗೆ  ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯವು ಎಪ್ರಿಲ್ ನಲ್ಲಿ ಮರಣದಂಡನೆ ವಿಧಿಸಿತ್ತು.

ಜಾಧವ್ ಅವರಿಗೆ ಮರಣದಂಡನೆ ವಿಧಿಸಿರುವುದನ್ನು ಭಾರತ ಹೇಗ್ ನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಅಂತಾರಾಷ್ಟ್ರೀಯ ನ್ಯಾಯಾಲಯ ಪಾಕ್ ನ ಆದೇಶಕ್ಕೆ ತಾತ್ಕಾಲಿಕ ತಡೆ ವಿಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X