Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೇಜಾವರ ಶ್ರೀಗಳ ಕ್ರಮ ವಿರೋಧಿಸಿ ಶ್ರೀರಾಮ...

ಪೇಜಾವರ ಶ್ರೀಗಳ ಕ್ರಮ ವಿರೋಧಿಸಿ ಶ್ರೀರಾಮ ಸೇನೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 July 2017 5:30 PM IST
share
ಪೇಜಾವರ ಶ್ರೀಗಳ ಕ್ರಮ ವಿರೋಧಿಸಿ ಶ್ರೀರಾಮ ಸೇನೆ ಪ್ರತಿಭಟನೆ

ದಾವಣಗೆರೆ, ಜು.2: ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ಮತ್ತು ನಮಾಜ್ ಮಾಡಿದ್ದನ್ನು ಖಂಡಿಸಿ, ಪೇಜಾವರ ಶ್ರೀಗಳ ಕ್ರಮ ವಿರೋಧಿಸಿ ಶ್ರೀರಾಮ ಸೇನೆ ನೇತೃತ್ವದಲ್ಲಿ ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಜಯದೇವ ವೃತ್ತದಲ್ಲಿ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ, ಜಿಲ್ಲಾಧ್ಯಕ್ಷ ಮಣಿ ಸರ್ಕಾರ್ ನೇತೃತ್ವದಲ್ಲಿ ಪೇಜಾವರ ಶ್ರೀಗಳ ವಿರುದ್ಧ ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಗಂಗಾಧರ ಕುಲಕರ್ಣಿ, ಕಳೆದ ದಿ. 24ರಂದು ಪೇಜಾವರ ಶ್ರೀಗಳ ನೇತೃತ್ವದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ಪವಿತ್ರ ಪರಿಸರದಲ್ಲಿ ಇಫ್ತಾರ್ ಕೂಟ ಹಾಗೂ ನಮಾಜ್ ಮಾಡಿಸಿದ್ದು ಸಮಸ್ತ ಹಿಂದುಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದ ಅವರು, ಹತ್ತಾರು ವರ್ಷಗಳಿಂದಲೂ ಹಿಂದುತ್ವದ ಮುಂಚೂಣಿ ನಾಯಕರಾಗಿ, ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದ ಪೇಜಾವರ ಶ್ರೀಗಳ ಈ ನಿಲುವು ಅತ್ಯಂತ ಖಂಡನೀಯ. ಸೌಹಾರ್ದ ಹಿಂದುಗಳಿಗೆ ಮಾತ್ರವಾ, ಸ್ವಾತಂತ್ರ್ಯ ಬಂದಾಗಿನಿಂದಲೂ ಸೌಹಾರ್ದತೆಗೆ ಎಷ್ಟೇ ಪ್ರಯತ್ನಿಸಿದರೂ ಆ ಸಮುದಾಯ ಇಂಚು ಕೂಡ ಆಚೆ, ಈಚೆಗೆ ಆಗದಿದ್ದಾಗ ಹಿಂದುಗಳಿಗೇಕೆ ಸೌಹಾರ್ದತೆಯ ಪಾಠ ಎಂದು ಅವರು ಪ್ರಶ್ನಿಸಿದರು.


ಕಾಶ್ಮೀರದಲ್ಲಿ ಲಕ್ಷಾಂತರ ಹಿಂದುಗಳನ್ನು ಹೊರ ದಬ್ಬಿ, ಆ ಎಲ್ಲರ ಮೇಲೂ ದೌರ್ಜನ್ಯ ಎಸಗಿದ್ದರೂ ಇನ್ನೂ ಸೌಹಾರ್ದ ಬೇಕೆ? ಈ ಎಲ್ಲಾ ಅಂಶ ಗಮನಿಸಿಯಾದರೂ ಪೇಜಾವರ ಶ್ರೀಗಳು ಸೌಹಾರ್ದತೆ ಹೆಸರಿನಲ್ಲಿ ಈ ಇಫ್ತಾರ್  ಕೂಟ ತಿರಸ್ಕರಿಬೇಕಿತ್ತು. ಆದರೆ, ಪವಿತ್ರ ಶ್ರೀಕೃಷ್ಣ ಮಠದ ಆವರಣದಲ್ಲಿ ಮೂರ್ತಿ ಪೂಜೆ ವಿರೋಧಿಸುವವರಿಗೆ ನಮಾಜ್, ಇಫ್ತಾರ್  ಕೂಟಕ್ಕೆ ಅವಕಾಶ ನೀಡಿದ್ದು, ನಮಾಜ್ ವೇಳೆ ಅಲ್ಲಾ ಒಬ್ಬನೇ ದೇವರೆಂದಿದ್ದು, ಶ್ರೀಕೃಷ್ಣನಿಗೆ ಅವಮಾನವಲ್ಲವೇ ಎಂಬುದಕ್ಕೆ ಶ್ರೀಗಳು ಉತ್ತರಿಸಲಿ ಎಂದು ಅವರು ಒತ್ತಾಯಿಸಿದರು.

ಹಿಂದುಗಳ ಪವಿತ್ರ, ಪುಣ್ಯ ಕ್ಷೇತ್ರದಲ್ಲಿ ಇಂತಹ ಶಾಸ ವಿರೋಧಿ, ಧರ್ಮ ವಿರೋಧಿ, ಹಿಂದು ವಿರೋಧಿ ಆಚರಣೆಗಳಿಗೆ ನಡೆಯಬಾರದೆಂದು ಎಚ್ಚರಿಸಲು ರಾಜ್ಯಾದ್ಯಂತ ಇಂತಹದ್ದೊಂದು ಹೋರಾಟ ಶ್ರೀರಾಮ ಸೇನೆ ಹಮ್ಮಿಕೊಂಡಿದ್ದು, ಇಂತಹ ಯಾವುದೇ ಧರ್ಮ ವಿರೋಧಿ ಘಟನೆ ನಡೆದರೆ ತಮ್ಮ ಸಂಘಟನೆ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಆನಂದ ಜ್ಯೋತಿ, ಬಿ. ರಾಜೇಶ, ಕರಾಟೆ ಮಾಸ್ಟರ್ ವಿ.ಪಿ. ರಮೇಶ, ಬಿ.ಜಿ. ರಾಹುಲ್, ವಿ. ಶ್ರೀಧರ್, ಆರ್. ರಮೇಶ ಮತ್ತಿತರರಿದ್ದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X