Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಪ್ಟಂಬರ್‌ನಿಂದ ಸರಕಾರಿ ಕೇಂದ್ರಗಳಲ್ಲಿ...

ಸೆಪ್ಟಂಬರ್‌ನಿಂದ ಸರಕಾರಿ ಕೇಂದ್ರಗಳಲ್ಲಿ ಮಾತ್ರ ಆಧಾರ್ ಕಾರ್ಡ್ ದಾಖಲಾತಿ

ವಾರ್ತಾಭಾರತಿವಾರ್ತಾಭಾರತಿ2 July 2017 8:15 PM IST
share
ಸೆಪ್ಟಂಬರ್‌ನಿಂದ ಸರಕಾರಿ ಕೇಂದ್ರಗಳಲ್ಲಿ ಮಾತ್ರ ಆಧಾರ್ ಕಾರ್ಡ್ ದಾಖಲಾತಿ

ಹೊಸದಿಲ್ಲಿ, ಜು. 2: ಆಧಾರ್ ಕಾರ್ಡ್ ದಾಖಲಾತಿಯನ್ನು ಸರಕಾರಿ ಅಥವಾ ನಗರಾಡಳಿತ ಕಚೇರಿ ಆವರಣಕ್ಕೆ ವರ್ಗಾಯಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಯುಐಡಿಎಐ ರಾಜ್ಯ ಸರಕಾರಗಳಿಗೆ ಸೂಚಿಸಿದೆ.

ರಾಷ್ಟ್ರಾದ್ಯಂತ ಸುಮಾರು 25 ಸಾವಿರ ಸಕ್ರಿಯ ದಾಖಲಾತಿ ಕೇಂದ್ರಗಳಿದ್ದು, ಇದನ್ನು ಸರಕಾರದ ಮೇಲ್ವಿಚಾರಣೆ ಅಡಿಯಲ್ಲಿ ತರಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ದಾಖಲಾತಿ ಹಾಗೂ ನವೀಕರಣವನ್ನು ಸರಕಾರ ಸೂಕ್ಷ್ಮವಾಗಿ ಅವಲೋಕಿಸಲಿದ್ದು, ಇದು ಖಾಸಗಿ ನಿರ್ವಹಣೆದಾರರು ಮಿತಿ ಮೀರಿ ಶುಲ್ಕ ವಸೂಲು ಮಾಡುವುದನ್ನು ತಡೆಯಲು ನೆರವಾಗಲಿದೆ.

ಜು. 31ರ ಒಳಗೆ ಸರಕಾರಿ ಕಚೇರಿ ಆವರಣದಲ್ಲಿ ದಾಖಲಾತಿ ಹಾಗೂ ನವೀಕರಣ ಚಟುವಟಿಕೆ ಕೇಂದ್ರಗಳನ್ನು ಗುರುತಿಸಿ ಎಂದು ಯುಐಡಿಎಐ ಕಾರ್ಯನಿರ್ವಹಣಾ ಅಧಿಕಾರಿ ಅಜಯ್ ಭೂಷಣ್ ರಾಜ್ಯ ಸರಕಾರಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

ಜನರು ದಾಖಲಾತಿ ಕೇಂದ್ರಗಳನ್ನು ಪತ್ತೆಹಚ್ಚಲು ಕಷ್ಟಪಡುತ್ತಿದ್ದಾರೆ. ಹಲವು ಬಾರಿ ಅವರು ನಮಗೆ ದೂರು ನೀಡಿದ್ದಾರೆ. ಕೆಲವರು ಕೇಂದ್ರಕ್ಕೆ ಹೋಗುತ್ತಾರೆ. ಅದು ಮುಚ್ಚಿರುವುದನ್ನು ನೋಡಿ ಹಿಂದೆ ಬರುತ್ತಾರೆ. ಕೇಂದ್ರ ಸಿಕ್ಕರೂ ದಾಖಲಾತಿ ಸಂದರ್ಭ ಮಿತಿ ಮೀರಿದ ಶುಲ್ಕ ವಸೂಲಿ ಮಾಡಿದ ಬಗ್ಗೆ ದೂರು ನೀಡುತ್ತಾರೆ. ಆದುದರಿಂದ ಖಾಸಗಿ ದಾಖಲಾತಿ ಕೇಂದ್ರಗಳು ಸರಕಾರಿ ಕಚೇರಿಗಳ ಮೇಲ್ವಿಚಾರಣೆಯಲ್ಲಿ ಇರಬೇಕು ಅಥವಾ ಮುಚ್ಚಬೇಕು ಎಂದು ಪಾಂಡೆ ಹೇಳಿದ್ದಾರೆ.

ಖಾಸಗಿ ಸ್ಥಳದಲ್ಲಿರುವ ದಾಖಲಾತಿ ಕೇಂದ್ರಗಳನ್ನು ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪರಿಷತ್ ಕಚೇರಿ, ನಗರಾಡಳಿತ ಕಚೇರಿ, ಬ್ಯಾಂಕ್, ಬ್ಲಾಕ್ ಕಚೇರಿ, ತಾಲೂಕು ಕಚೇರಿ ಅಥವಾ ಇತರ ವಿತರಣಾ ಕಚೇರಿಯಂತಹ ಸರಕಾರಿ ಕಚೇರಿಗಳ ಆವರಣಕ್ಕೆ ವರ್ಗಾಯಿಸಬೇಕು. ಇದರಿಂದ ನಾಗರಿಕರಿಗೆ ಸಹಾಯಕವಾಗಲಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಕೇಂದ್ರ ಸರಕಾರ ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಜೋಡಿಸಲು ಕೆಲವು ದಿನಗಳ ಹಿಂದೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ನಡೆ ಮುಖ್ಯವಾದುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X