Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್ ನಲ್ಲಿ ಸಂಕಷ್ಟದಲ್ಲಿದ್ದ ದಂಪತಿಗೆ...

ರಿಯಾದ್ ನಲ್ಲಿ ಸಂಕಷ್ಟದಲ್ಲಿದ್ದ ದಂಪತಿಗೆ ನೆರವಾಗಿ ಮಾನವೀಯತೆ ಮೆರೆದ ಐಎಸ್ ಎಫ್

ವಿದೇಶಕ್ಕೆ ಕರೆಸಿ ವಂಚಿಸಿದ ಏಜೆಂಟ್

ವಾರ್ತಾಭಾರತಿವಾರ್ತಾಭಾರತಿ2 July 2017 10:28 PM IST
share
ರಿಯಾದ್ ನಲ್ಲಿ ಸಂಕಷ್ಟದಲ್ಲಿದ್ದ ದಂಪತಿಗೆ ನೆರವಾಗಿ ಮಾನವೀಯತೆ ಮೆರೆದ ಐಎಸ್ ಎಫ್

ರಿಯಾದ್, ಜು.2: ಏಜೆಂಟ್ ನಿಂದ ವಂಚನೆಗೊಳಗಾಗಿ ರಿಯಾದ್ ನಲ್ಲಿ ಸಂಕಷ್ಟದಲ್ಲಿದ್ದ ಬೆಂಗಳೂರು ಮೂಲದ ದಂಪತಿಗೆ ನೆರವಾಗುವ ಮೂಲಕ ಇಂಡಿಯನ್ ಸೋಷಿಯಲ್ ಫಾರಂ ಮಾನವೀಯತೆ ಮೆರೆದಿದೆ. 

ಸುಮಾರು ಮೂರು ತಿಂಗಳುಗಳ ಹಿಂದೆ ಬೆಂಗಳೂರು ಮೂಲದ ಚಾಂದ್ ಪಾಷ ಮತ್ತು ಪತ್ನಿ ಆಮಿನಾಬಿ ಏಜೆಂಟ್ ಒಬ್ಬನ ಮಾತಿಗೆ ಮರುಳಾಗಿ ಪ್ರಾಯೋಜಕನ ಮನೆಯಲ್ಲಿ ಖಾಸಗಿ ವಾಹನ ಚಾಲಕ ಮತ್ತು ಮನೆ ಕೆಲಸವನ್ನು ಮಾಡುವ ಸಲುವಾಗಿ ರಿಯಾದಿಗೆ ತಲುಪಿದ್ದರು. ಆದರೆ ಪ್ರಾಯೋಜಕ ಈ ದಂಪತಿಗೆ ಕೆಲಸ ನೀಡಲು ನಿರಾಕರಿಸಿದ್ದ. "ನನಗೆ ನಿಮ್ಮಂತಹ ಜನರ ಕೆಲಸದ ಅವಶ್ಯಕತೆ ಇಲ್ಲ" ಎಂದು ಹೇಳಿದ್ದಲ್ಲದೆ, ವಾಸ್ತವ್ಯ ಕಾರ್ಡ್(ಇಕಾಮ)ನ್ನು ಮಾಡದೆ, ಅತ್ತ ಪಾಸ್ ಪೋರ್ಟ್ ನೀಡದೆ, ಸುಮಾರು 18 ಸಾವಿರ ರಿಯಾಲಿನ ಬೇಡಿಕೆ ಇಟ್ಟಿದ್ದ.

ಇದರಿಂದ ಕಂಗಾಲಾದ ದಂಪತಿ ಸ್ಥಳೀಯ ಏಜೆಂಟ್ ನನ್ನು ಸಂಪರ್ಕಿಸಿದಾಗ ಆತ ಯಾವುದೇ ಸ್ಪಂದನೆ ನೀಡದೆ ಅಲ್ಲಿಂದ ಪಲಾಯನಗೈದಿದ್ದ. ಯಾರು ಪರಿಚಯದವರಿಲ್ಲದೆ ವಿದೇಶದಲ್ಲಿ ಕಂಗಾಲಾದ ದಂಪತಿ ರಮಝಾನ್ ತಿಂಗಳಲ್ಲಿ ತಿನ್ನಲು ಆಹಾರ ಮತ್ತು ಇರಲು ಮನೆ ಇಲ್ಲದೆ, ಸುಡು ಬಿಸಿನಲ್ಲಿ ಅಲ್ಲಲ್ಲಿ ಬೇಡುತ್ತಾ, ಬೀದಿಗಳಲ್ಲಿ ಅತ್ಯಂತ ಶೋಚನೀಯವಾಗಿ ದಿನಗಳನ್ನು ಕಳೆಯುತ್ತಿದ್ದರು. ಇವರ ದಯನೀಯ ಪರಿಸ್ಥಿತಿಯನ್ನು ಅರಿತ ಇಂಡಿಯನ್ ಸೋಷಿಯಲ್ ಫಾರಂ,  ಕರ್ನಾಟಕ ರಿಯಾದ್ ಘಟಕವು ತಕ್ಷಣವೇ ಇಸ್ಮಾಯಿಲ್ ಮಂಗಳಪೇಟೆ, ನವೀದ್ ಕುಂದಾಪುರ ಮತ್ತು ಶಾಫಿ ವಾಮಾಂಜೂರು ನೇತೃತ್ವದ ತಂಡ ರಚಿಸಿ ದಂಪತಿಯನ್ನು ಮುಖತಃ ಭೇಟಿಯಾಗಿ ಈ ಬಗ್ಗೆ ವಿವರ ಪಡೆದರು.

ತಕ್ಷಣವೇ ದಂಪತಿಗೆ ತಾತ್ಕಾಲಿಕ ಮನೆ ಮತ್ತು ಆಹಾರದ ವ್ಯವಸ್ಥೆಯನ್ನು ಮಾಡಿದ್ದರು. ಇವರನ್ನು ಸ್ವದೇಶಕ್ಕೆ ಕಳುಹಿಸಿಕೊಡುವ ಸಲುವಾಗಿ ಭಾರತೀಯ ರಾಯಭಾರಿಯನ್ನು ಸಂಪರ್ಕಿಸಿ ಬೇಕಾದ ಅಗತ್ಯ ದಾಖಲೆಗಳನ್ನು ತಯಾರಿಸಲಾಯಿತು. ಚಾಂದ್ ಪಾಷರವರ ದಾಖಲೆಯಲ್ಲಿ ಸ್ವಲ್ಪ ಸಮಸ್ಯೆ ಇದ್ದ ಕಾರಣ ಸದ್ಯಕ್ಕೆ ಆಮೀನಾಬಿಯವರನ್ನು ಭಾರತಕ್ಕೆ ಮರಳಿ ಕಳುಹಿಸಿ ಕೊಡಲು ಇಂಡಿಯನ್ ಸೋಷಿಯಲ್ ಪೋರಂ ಮತ್ತು ಸ್ಥಳೀಯ ದಾನಿಯಾದ ಮುಷ್ತಾಕ್ ಉಡುಪಿಯವರ ನೆರವಿನೊಂದಿಗೆ 30 ಸಾವಿರ ರೂ.ಗಳನ್ನು ಟಿಕೆಟ್ ಗಾಗಿ ಸಂಗ್ರಹ ಮಾಡಲಾಯಿತು.

ಜೂ.29ರಂದು ಆಮೀನಾಬಿಯವರನ್ನು ರಿಯಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಕಳುಹಿಸಿ ಕೊಡಲಾಗಿದೆ. ಸ್ವದೇಶಕ್ಕೆ  ಮರಳಿದ ಅಮೀನಾಬಿಯವರನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಚಾಂದ್ ಪಾಷರನ್ನು ಕಳುಹಿಸಿಕೊಡುವ ಸಲುವಾಗಿ ಇಂಡಿಯನ್ ಸೋಷಿಯಲ್ ಫಾರಂನ ತಂಡವು ಸಕಲ ಸಿದ್ಧತೆಯನ್ನು ನಡೆಸುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X