Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ:ಮೊಬೈಲ್ ಫೋನ್,ಜೀನ್ಸ್‌ನಿಂದ...

ರಾಜಸ್ಥಾನ:ಮೊಬೈಲ್ ಫೋನ್,ಜೀನ್ಸ್‌ನಿಂದ ದೂರವಿರಿ ಯುವತಿಯರಿಗೆ ಖಾಪ್ ಪಂಚಾಯತ್‌ನ ತಾಕೀತು

ವಾರ್ತಾಭಾರತಿವಾರ್ತಾಭಾರತಿ2 July 2017 11:38 PM IST
share
ರಾಜಸ್ಥಾನ:ಮೊಬೈಲ್ ಫೋನ್,ಜೀನ್ಸ್‌ನಿಂದ ದೂರವಿರಿ ಯುವತಿಯರಿಗೆ ಖಾಪ್ ಪಂಚಾಯತ್‌ನ ತಾಕೀತು

ಜೈಪುರ,ಜು.2: ಯುವತಿಯರು ಜೀನ್ಸ್ ಮತ್ತು ಆಕರ್ಷಕ ಬಟ್ಟೆಗಳನ್ನು ತೊಡಬಾರದು ಮತ್ತು ಮೊಬೈಲ್ ಪೋನ್‌ಗಳನ್ನು ಬಳಸಕೂಡದು ಎಂದು ತಾಕೀತು ಮಾಡಿರುವ ರಾಜಸ್ಥಾನದ ಧೋಲ್‌ಪುರ ಜಿಲ್ಲೆಯ ಬಲ್ದಿಯಾಪುರ ಗ್ರಾಮದ ಪಂಚಾಯತ್, ಇವು ನಮ್ಮ ಸಂಸ್ಕೃತಿಯನ್ನು ಹಾಳು ಮಾಡುತ್ತವೆ ಎಂದು ಹೇಳಿದೆ. ಪಂಚಾಯತ್‌ನ ಈ ನಿರ್ಧಾರದಿಂದ ಯುವತಿಯರಿಗೆ ಲೈಂಗಿಕ ಕಿರುಕುಳ ತಪ್ಪಲಿದೆ ಎಂದು ಸದಸ್ಯರು ಹೇಳಿದ್ದಾರೆ.

ಮದ್ಯಪಾನವನ್ನೂ ನಿಷೇಧಿಸಿರುವ ಪಂಚಾಯತ್, ಯಾವುದೇ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಪೊಲೀಸರನ್ನು ಸಂಪರ್ಕಿಸಕೂಡದು ಮತ್ತು ಅದನ್ನು ಪಂಚಾಯತ್‌ನ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕು ಎಂದೂ ನಿರ್ಣಯಿಸಿದೆ. ಪಂಚಾಯತ್‌ನಲ್ಲಿ ಪರಿಹಾರ ದೊರೆಯದಿದ್ದರೆ ಮಾತ್ರ ಪೊಲೀಸ್ ಠಾಣೆಗೆ ತೆರಳಬಹುದು ಎಂದು ಅದು ಸೂಚಿಸಿದೆ.

 ಮದ್ಯಪಾನ ಮಾಡಿದವರಿಗೆ 1,100 ರೂ.ಗಳ ದಂಡ ಮತ್ತು ಮದ್ಯ ಮಾರಾಟ ಹಾಗೂ ಸೇವನೆಯ ಬಗ್ಗೆ ಮಾಹಿತಿ ನೀಡುವವರಿಗೆ 500 ರೂ.ಗಳ ಪುರಸ್ಕಾರವನ್ನು ಘೋಷಿಸಿರುವ ಪಂಚಾಯತ್, ಗ್ರಾಮದಲ್ಲಿ ತಂಬಾಕು ಪೊಟ್ಟಣಗಳ ಮಾರಾಟವನ್ನು ನಿಷೇಧಿಸಿದೆ.

 ಯುವತಿಯರು ಜೀನ್ಸ್ ಧರಿಸುವುದರಿಂದ ಮತ್ತು ಮೊಬೈಲ್ ಫೋನ್‌ಗಳನ್ನು ಬಳಸುವುದರಿಂದ ಭಾರತೀಯ ಸಂಸ್ಕೃತಿ ನಾಶವಾಗುತ್ತದೆ ಎನ್ನುವುದು ಪಂಚಾಯತ್ ಸದಸ್ಯರ ಒಮ್ಮತದ ಅಭಿಪ್ರಾಯ. ಇಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಹೆಚ್ಚಿನ ಯುವತಿಯರು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿದ್ದು, ಆಧುನಿಕ ಉಡುಪುಗಳನ್ನು ತೊಡುತ್ತಿದ್ದಾರೆ ಎಂದಿರುವ ಪಂಚಾಯತ್, ಯುವತಿಯರಿಗೆ ಜೀನ್ಸ್ ಮತ್ತು ಮೊಬೈಲ್ ಫೋನ್ ಕೊಡಿಸದಂತೆ ಹೆತ್ತವರಿಗೆ ಸೂಚಿಸಿದೆ. ಅಲ್ಲದೆ ಹೆಣ್ಣುಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆಯೂ ಸೂಚಿಸಿದೆ.

ಪಂಚಾಯತ್‌ನ ನಿರ್ಣಯಗಳನ್ನು ಗ್ರಾಮದಲ್ಲಿ ಬಲಪೂರ್ವಕವಾಗಿ ಜಾರಿಗೊಳಿಸ ಲಾಗುವುದು ಎಂದು ಸದಸ್ಯರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನ ಮಾಡಲು ಪಂಚಾಯತ್ ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮಹಿಳೆಯರು ಆಕರ್ಷಕ ಉಡುಪುಗಳನ್ನು ಧರಿಸುತ್ತಿರು ವುದರಿಂದ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳದ ಘಟನೆಗಳು ಹೆಚ್ಚುತ್ತಿವೆ ಎಂದು ಪಂಚಾಯತ್‌ನ ಸರಪಂಚ ಕಣಸಿಲ್ ಹರಿರಾಮ್ ಸಿಂಗ್ ಪರಮಾರ್ ಹೇಳಿದರು.

 ಪಂಚಾಯತ್ ನೇಮಕಗೊಳಿಸಿರುವ ಸದಸ್ಯರು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಪ್ರತಿ ತಿಂಗಳ ಮೊದಲ ದಿನದಂದು ಸಭೆ ಸೇರಲಿರುವ ಪಂಚಾಯತ್ ಆಗಿರುವ ಬೆಳವಣಿಗೆಗಳನ್ನು ಚರ್ಚಿಸಲಿದೆ.

ಕುಶಾವ್ಹಾ ಸಮುದಾಯದ ಪ್ರಾಬಲ್ಯವಿರುವ ಬಲ್ದಿಯಾಪುರದಲ್ಲಿ ಸುಮಾರು 2,500 ಜನಸಂಖ್ಯೆಯಿದೆ. ಕಣಸಿಲ್ ಪಂಚಾಯತ್‌ನ ವ್ಯಾಪ್ತಿಯಲ್ಲಿರುವ ಇತರ ಗ್ರಾಮಗಳಲ್ಲಿ ಯೂ ಈ ನಿಯಮಗಳು ಶೀಘ್ರ ಜಾರಿಗೊಳ್ಳಲಿವೆ.

ಮದ್ಯ ಮಾರಾಟ ಮತ್ತು ಸೇವನೆಯನ್ನು ಪಂಚಾಯತ್ ನಿಷೇಧಿಸಿರುವುದು ಒಳ್ಳೆಯ ಕ್ರಮ. ಆದರೆ ಯುವತಿಯರು ಜೀನ್ಸ್ ಧರಿಸಬಾರದು ಮತ್ತು ಮೊಬೈಲ್ ಬಳಸಕೂಡದು ಎನ್ನುವ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ ಎಂದು ಧೋಲ್‌ಪುರದ ಹೆಚ್ಚುವರಿ ಜಿಲ್ಲಾಧಿಕಾರಿ ವಿನೋದಕುಮಾರ ಮೀನಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X