Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಪಗಳನ್ನು ಸಾಬೀತುಪಡಿಸಲು...

ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳಿಲ್ಲ ಎಂದ ಉತ್ತರಪ್ರದೇಶ ಪೊಲೀಸರು

ಅತ್ಯಾಚಾರ ಸಂತ್ರಸ್ತೆಯ ಮೇಲೆ 4ನೆ ಬಾರಿ ಆ್ಯಸಿಡ್ ದಾಳಿ

ವಾರ್ತಾಭಾರತಿವಾರ್ತಾಭಾರತಿ3 July 2017 3:58 PM IST
share
ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳಿಲ್ಲ ಎಂದ ಉತ್ತರಪ್ರದೇಶ ಪೊಲೀಸರು

ಲಕ್ನೋ, ಜು.3: ನಲ್ವತ್ತೈದು ವರ್ಷದ ಅತ್ಯಾಚಾರ ಮತ್ತು ಆ್ಯಸಿಡ್ ದಾಳಿ ಸಂತ್ರಸ್ತೆಯೊಬ್ಬಳು ತನ್ನ ಮೇಲೆ 4ನೇ ಬಾರಿ ಶನಿವಾರ ರಾತ್ರಿ ಅಲಿಗಂಜ್ ಪ್ರದೇಶದಲ್ಲಿ ಆ್ಯಸಿಡ್ ದಾಳಿ ನಡೆದಿದೆಯೆಂದು ಆರೋಪಿಸಿದ್ದರೆ, ಈ ಆರೋಪವನ್ನು ಪುಷ್ಠೀಕರಿಸುವಂತಹ ಯಾವುದೇ ಪುರಾವೆಗಳು ತಮಗೆ ದೊರೆತಿಲ್ಲ ಎಂದು ಫೊರೆನ್ಸಿಕ್ ತಜ್ಞರ ತನಿಖೆಯಿಂದ ತಿಳಿದು ಬಂದಿದೆಯೆಂದು ಲಕ್ನೋ ಪೊಲೀಸರು ಹೇಳಿದ್ದಾರೆ.

ತನ್ನ ಮೇಲೆ 2009ರಲ್ಲಿ ಸಾಮೂಹಿಕ ಅತ್ಯಾಚಾರಗೈದ ಇಬ್ಬರು ಪುರುಷರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಕೂಡ ದಾಖಲಿಸಿರುವ ಮಹಿಳೆ, ತಾನು ವಾಸವಾಗಿರುವ ಮಹಿಳೆಯರ ಹಾಸ್ಟೆಲ್ ಒಳಗೆ ತನ್ನ ಮೇಲೆ ಶನಿವಾರ ದಾಳಿ ನಡೆಯಿತು ಹಾಗೂ ದಾಳಿಕೋರರು ಹಾಸ್ಟೆಲ್ ಕಂಪೌಂಡ್ ಗೋಡೆಯನ್ನು ಹಾರಿ ಪರಾರಿಯಾದರು ಎಂದು ಹೇಳಿಕೊಂಡಿದ್ದಾಳೆ.

ಮುಖ ಹಾಗೂ ಭುಜದ ಬಲಭಾಗದಲ್ಲಿ ಆಕೆಗೆ ಗಾಯಗಳುಂಟಾಗಿದ್ದು ಆಕೆ ಕಿಂಗ್ ಜಾರ್ಜ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮಹಾನಗರ ಸ್ಟೇಟ್ ಫೊರೆನ್ಸಿಕ್ ಪ್ರಯೋಗಾಲಯದ ತಜ್ಞರು ಸ್ಥಳ ಪರಿಶೀಲನೆಗೈದಿದ್ದು, ಅಲ್ಲಿ ಖಾಲಿ ಮಿನರಲ್ ವಾಟರ್ ಬಾಟಲಿ ಪತ್ತೆಯಾಗಿದ್ದರೆ, ಅದರ ಮುಚ್ಚಳ ಮಹಿಳೆ ದಾಳಿಗಿಂತ ಸ್ವಲ್ಪ ಮುಂಚೆ ಹೋಗಿದ್ದ ಶೌಚಾಲಯದಲ್ಲಿ ಪತ್ತೆಯಾಗಿದೆ. ತಾನು ಶೌಚಾಲಯದಿಂದ ಹೊರಬಂದ ಕೂಡಲೇ ತನ್ನ ಮೇಲೆ ದಾಳಿ ನಡೆದಿದೆ ಎಂದು ಮಹಿಳೆ ಹೇಳಿಕೊಂಡಿದ್ದಳು.

ಸ್ಥಳದಲ್ಲಿ ಆ್ಯಸಿಡ್ ಕುರುಹುಗಳು ಅಥವಾ ಯಾವುದೇ ಹೆಜ್ಜೆ ಗುರುತುಗಳು ಪತ್ತೆಯಾಗಿಲ್ಲವೆಂದು ಹೇಳಲಾಗಿದೆ. ಮೇಲಾಗಿ ಶನಿವಾರ ಮಳೆ ಬಂದಿದ್ದರಿಂದ ದುಷ್ಕರ್ಮಿಗಳು ಬಂದಿದ್ದೇ ಆದಲ್ಲಿ ಅವರ ಹೆಜ್ಜೆ ಗುರುತುಗಳು ಅಲ್ಲಿ ಖಂಡಿತವಾಗಿಯೂ ಇರುತ್ತಿತ್ತು ಎಂದು ಫೊರೆನ್ಸಿಕ್ ತಜ್ಞರೊಬ್ಬರು ಹೇಳಿದ್ದಾರೆ.

ಹಾಸ್ಟೆಲ್ ನ ಇತರ ನಿವಾಸಿಗಳು, ಮಾರ್ಚ್ 23ರಂದು ಮಹಿಳೆ ಮೇಲೆ ದಾಳಿ ನಡೆದ ನಂತರ ಆಕೆಗೆ ಒದಗಿಸಲಾಗಿರುವ ಸೆಕ್ಯುರಿಟಿ ಗಾರ್ಡ್ ರಾಜೇಶ್ ಹಾಗೂ ಗನ್ ಮ್ಯಾನ್ ಸಂದೀಪ್ ಕುಮಾರ್ ಕೂಡ ಹಾಸ್ಟೆಲ್ ಕಂಪೌಂಡಿನೊಳಗೆ ಯಾರೂ ಬಂದಿದ್ದನ್ನು ನೋಡಿಲ್ಲ.

ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪ ಹೊತ್ತ ಭೊಂಡು ಸಿಂಗ್ ಹಾಗೂ ಗುಡ್ಡು ಸಿಂಗ್ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತಾದರೂ ಅವರಿಬ್ಬರೂ ಆ ದಿನ ರಾಯ್ ಬರೇಲಿಯ ಉಂಚಹಾರ್ ಎಂಬ ಸ್ಥಳದಲ್ಲಿ ತಮ್ಮ ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ.

ಆ್ಯಸಿಡ್ ದಾಳಿ ಸಂತ್ರಸ್ತರು ನಡೆಸುವ ಶೆರೋಸ್ ಹ್ಯಾಂಗ್ ಔಟ್ ಕೆಫೆಯಲ್ಲಿ ಮಹಿಳೆ ದುಡಿಯುತ್ತಿದ್ದು, ಆಕೆಯ ಪತಿ ಮತ್ತು ಇಬ್ಬರು ಮಕ್ಕಳು ರಾಯ್ ಬರೇಲಿಯಲ್ಲಿ ವಾಸವಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X