Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶೇಷ ತನಿಖಾ ತಂಡ ರಚಿಸಲು ಆಗ್ರಹಿಸಿ...

ವಿಶೇಷ ತನಿಖಾ ತಂಡ ರಚಿಸಲು ಆಗ್ರಹಿಸಿ ಡಿವೈಎಫ್‌ಐ ಧರಣಿ

ಪಂಜಿಮೊಗರು ಜೋಡಿ ಕೊಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ3 July 2017 5:34 PM IST
share
ವಿಶೇಷ ತನಿಖಾ ತಂಡ ರಚಿಸಲು ಆಗ್ರಹಿಸಿ ಡಿವೈಎಫ್‌ಐ ಧರಣಿ

ಮಂಗಳೂರು, ಜು.3: ಪಂಜಿಮೊಗರು ಜೋಡಿ ಕೊಲೆ (ತಾಯಿ ರಝಿಯಾ ಮತ್ತು ಮಗಳು ಫಾತಿಮಾ ಝುವಾ) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಿಸಲ್ಪಟ್ಟ ‘ಸಿಐಡಿ’ ಬದಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಆಗ್ರಹಿಸಿ ಸೋಮವಾದ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿ ಧರಣಿ ನಡೆಸಿತು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ 2011ರ ಜೂ.28ರಂದು ಈ ಕೊಲೆ ನಡೆದಿದೆ. ಆದರೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಇನ್ನೂ ಸಾಧ್ಯವಾಗಿಲ್ಲ. ಅಂದಿನಿಂದ ಈವರೆಗೆ ಡಿವೈಎಫ್‌ಐ ಸಾಕಷ್ಟು ಹೋರಾಟ ನಡೆಸಿದೆ. ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಡಿವೈಎಫ್‌ಐ ಆಗ್ರಹಿಸಿದ್ದರೂ ಕೂಡ ಸರಕಾರ ಸಿಐಡಿಗೆ ಒಪ್ಪಿಸಿದೆ. ಸಿಐಡಿ ಈ ಪ್ರಕರಣವನ್ನು ಕೈಗೆತ್ತಿಕೊಂಡು 5 ವರ್ಷವಾದರೂ ಗಂಭೀರವಾಗಿ ಪರಿಗಣಿಸಿಲ್ಲ ಎಂದರು.

ಸಿಐಡಿ ನಿಷ್ಪ್ರಯೋಜಕ ಕಾವಲು ನಾಯಿಯಾಗಿದೆ. ಯಾಕೆಂದರೆ ಈ ಹಿಂದೆ ಜಿಲ್ಲೆಯಲ್ಲಿ ನಡೆದ ಬೆಂಜನಪದವು ರಾಜೇಶ್ ಪೂಜಾರಿ, ತಣ್ಣೀರುಬಾವಿಯಲ್ಲಿ ನಡೆದ ಎ.ಜೆ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ರಾಧಾಕೃಷ್ಣನ್ ಕೊಲೆ ಪ್ರಕರಣವನ್ನೂ ಸಿಐಡಿ ಬೇಧಿಸಲು ವಿಫಲವಾಗಿದೆ. ಪಂಜಿಮೊಗರು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರ ಮಂಪರು ಪರೀಕ್ಷೆ ಮಾಡಿ ಎಂದರೂ ಸಿಐಡಿ ಮಾಡಿಲ್ಲ. ಹಾಗಾಗಿ ತನಿಖೆಯನ್ನು ಸಿಐಡಿಯಿಂದ ವಾಪಸ್ ಪಡೆಯಬೇಕು. ವಿಶೇಷ ತನಿಖಾ ತಂಡಕ್ಕೆ ನೀಡಬೇಕು ಎಂದು ಮುನೀರ್ ಕಾಟಿಪಳ್ಳ ಆಗ್ರಹಿಸಿದರು.

ಶಾಸಕರ ಮನೆಗೆ ಚಲೋ: ಕಳೆದ ಚುನಾವಣೆ ಸಂದರ್ಭ ಮೊಯ್ದಿನ್ ಬಾವಾ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದರು. ಆದರೆ, ಶಾಸಕರಾದ ಬಳಿಕವೂ ಅವರು ಭರವಸೆ ಈಡೇರಿಸಿಲ್ಲ. ಹಾಗಾಗಿ ಶಾಸಕರ ಮನೆಗೆ ಚಲೋ ಮಾಡುವುದಾಗಿ ಎಂದು ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹೇಳಿದರು.

ಧರಣಿಯಲ್ಲಿ ರಝಿಯಾರ ಪತಿ ಹಮೀದ್, ಜನವಾದಿ ಮಹಿಳಾ ಸಂಘಟನೆಯ ಜಯಂತಿ ಬಿ. ಶೆಟ್ಟಿ, ಶಮೀಮಾ ತಣ್ಣೀರುಬಾವಿ, ಭಾರತಿ ಬೋಳಾರ್, ಜಯಲಕ್ಷ್ಮಿ, ಆಶಾ ಬೋಳಾರ್, ಸಿಲ್ವಿಯಾ ಜೋಕಟ್ಟೆ, ಅಬೂಬಕರ್ ಜೋಕಟ್ಟೆ, ರಫೀಕ್ ಹರೇಕಳ, ಸಾದಿಕ್ ಕಣ್ಣೂರು, ಅಶ್ರಫ್ ಹರೇಕಳ, ಹಬೀಬ್ ಖಾದರ್, ಮುಹಮ್ಮದ್ ಸಾಲಿ ಮತ್ತಿತರರು ಪಾಲ್ಗೊಂಡಿದ್ದರು.

ತನಿಖೆಯ ದಡ ಸೇರಿಸಿ: ಈ ಕೊಲೆ ಕೃತ್ಯ ನಡೆದು 6 ವರ್ಷವಾಗಿದೆ. ಸಿಐಡಿಗೆ ವಹಿಸಿ 5 ವರ್ಷವಾಗಿದೆ. ತನಿಖಾ ತಂಡದ 7-8 ಅಧಿಕಾರಿಗಳು ಬದಲಾವಣೆಯಾದರೂ ಪ್ರಕರಣ ಭೇದಿಸಲು ಆಗಿಲ್ಲ.

ನನ್ನ ಸಹಿತ ಮೂವರನ್ನು ಮಂಪರು ಪರೀಕ್ಷೆ ನಡೆಸಬೇಕು ಎಂಬ ಕೂಗು ಇತ್ತು. ಆ ಹಿನ್ನಲೆಯಲ್ಲಿ ಸ್ವತ: ನಾನೇ ಮಂಪರು ಪರೀಕ್ಷೆಗೆ ಅವಕಾಶ ಮಾಡಿಕೊಡಿ ಎಂದು ನ್ಯಾಯಾಲಯದ ಅನುಮತಿ ಪಡೆದುಕೊಟ್ಟೆ. ಆದರೆ ಇನ್ನೂ ಮಂಪರು ಪರೀಕ್ಷೆ ಮಾಡಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ದೆಹಲಿಯರವೆಗೂ ಹೋಗಿ ಬಂದೆ. ಆದರೂ ಪ್ರಯೋಜನವಾಗಿಲ್ಲ. ನಾನು ಯಾವ ತನಿಖೆಗೂ ಸಿದ್ಧ. ಎಲ್ಲ ರೀತಿಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ರಝಿಯಾರ ಪತಿ ಹಮೀದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X