ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ: ವಿನಯಕುಮಾರ್ ಸೊರಕೆ

ಉಡುಪಿ, ಜು.3: ಉಡುಪಿ ತಾಲೂಕಿನಲ್ಲಿ ಕೆರೆಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡುವಂತೆ ಕಾಪು ಶಾಸಕ ವಿನಯ ಕುಮಾರ್ ಸೊರಕೆ ತಿಳಿಸಿದ್ದಾರೆ.
ಸೋಮವಾರ ಉಡುಪಿ ತಾ.ಪಂ. ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡು ತಿದ್ದರು.
ಪಶ್ಚಿಮ ವಾಹಿನಿಯ ಅನುಷ್ಠಾನಕ್ಕಾಗಿ ಬಜೆಟ್ನಲ್ಲಿ 100 ಕೋಟಿ ರೂ ಮೀಸಲಿಡಲಾಗಿದೆ. ತಾಲೂಕಿನಲ್ಲಿ ಈಗಾಗಲೇ ಸುಮಾರು 20 ಕೆರೆಗಳ ಅಭಿವೃದ್ದಿ ಕಾರ್ಯ ನಡೆಯುತ್ತಿದ್ದು, ಕೆರೆ ಅಭಿವೃದ್ದಿ ಪೂರ್ಣಗೊಂಡಿರುವ ಕಡೆಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ತಾಲೂಕಿನಲ್ಲಿ ಅಗತ್ಯವಿರುವೆಡೆಗಳಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಸಣ್ಣ ನೀರಾವರಿ ಮತ್ತು ಸಂಬಂಧ ಪಟ್ಟ ಇಲಾಖೆಗಳು ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಶಾಸಕರು ಸೂಚಿಸಿದರು.
ತಾಲೂಕಿನಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ್ದು, ಯಾಂತ್ರೀಕೃತ ನಾಟಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಬೆಳೆ ವಿಮೆ ಯೋಜನೆಗೆ ಜು.31 ಕೊನೆಯ ದಿನವಾಗಿದೆ ಹಾಗೂ ಜಿಲ್ಲೆಗೆ ಈ ವರ್ಷದಿಂದ ಕೃಷಿಭಾಗ್ಯ ಯೋಜನೆ ಮಂಜೂರಾಗಿದ್ದು, ಕೃಷಿ ಹೊಂಡ ರಚನೆಗೆ ಸಹಾಯಧನ ಲ್ಯವಿದೆ. ರೈತರು ಈ ಯೋಜನೆಯ ಪ್ರಯೋಜನ ಪಡೆಯುವಂತೆ ಹಾಗೂ ಮಣ್ಣು ಆರೋಗ್ಯ ಕಾರ್ಡ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿ ಗಳು ತಿಳಿಸಿದರು.
ತಾಲೂಕಿನಲ್ಲಿ ಕೃಷಿ ಚಟುವಟಿಕೆ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಕಾಪು ಕ್ಷೇತ್ರದಲ್ಲಿ ಹಡಿಲು ಬಿಟ್ಟಿದ್ದ ಸುಮಾರು 250 ಎಕ್ರೆ ಜಾಗ ದಲ್ಲಿ ಮತ್ತೆ ಕೃಷಿ ಚಟುವಟಿಕೆ ಕೈಗೊಳ್ಳಲಾಗಿದೆ. ಸಾಲ ಮನ್ನಾ ಯೋಜನೆಯಡಿ ಪ್ರಯೋಜನ ಪಡೆಯುವ ಫಲಾನುಭವಿ ರೈತರ ಮಾಹಿತಿಯನ್ನು ಒದಗಿಸುವಂತೆ ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ತಾಲೂಕಿನ ರಸ್ತೆಗಳಲ್ಲಿ ಗುಂಡಿ ಬಿದ್ದಿರುವ ಕಡೆ ಶೀಘ್ರದಲ್ಲಿ ದುಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಹಾಗೂ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವಂತೆ ಸೊರಕೆ ಸೂಚಿಸಿದರು. ತಾಲೂಕಿನ ಕೆಲವು ಹಾಸ್ಟಲ್ಗಳು ಮಳೆಯಿಂದಾಗಿ ಸೋರುತ್ತಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೆ ಅಂತಹ ಹಾಸ್ಟಲ್ಗಳನ್ನು ದುರಸ್ತಿಗೊಳಿಸುವಂತೆ ಹಾಗೂ ಹಾಸ್ಟಲ್ಗಳ ಪರಿಶೀಲನೆಗೆ ನೇಮಕ ಮಾಡಿದ್ದ ನೋಡಲ್ ಅಧಿಕಾರಿಗಳ ವಿವರ ಹಾಗೂ ಅವರು ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನು ನೀಡುವಂತೆ ಸೊರಕೆ ತಿಳಿಸಿದರು.
ಮಲೇರಿಯಾ ಹಾಗೂ ಡೆಂಗ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳು ವಂತೆ ಹಾಗೂ ಜನಸಂಖ್ಯೆಗನುಗುಣವಾಗಿ ಮೇಲ್ದರ್ಜೆಗೆ ಏರಿಸಬೇಕಾದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಪ್ರಸ್ತಾವನೆಯೊಂದಿಗೆ ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಕಾಪುನಲ್ಲಿ 5 ಕೋಟಿರೂ. ವೆಚ್ಚದಲ್ಲಿ ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಾಣ ಮಾಡುವ ಕುರಿತಂತೆ ಪ್ರಸ್ತಾವನೆ ಸಿದ್ದಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಕಾಪು ಕ್ಷೇತ್ರದಲ್ಲಿ ಘನತ್ಯಾಜ್ಯ ವಿಲೇವಾರಿಗೆ 10 ಎಕ್ರೆ ಜಾಗ ಗುರುತಿಸಲಾಗಿದೆ. ಕಾಪು ಸಮೀಪದ ಗ್ರಾಪಂ ಗಳು ಸಹ ಇಲ್ಲಿಗೆ ತ್ಯಾಜ್ಯವನ್ನು ನೀಡುವಂತೆ ಶಾಸಕರು ತಿಳಿಸಿದರು.
ಸಭೆಯಲ್ಲಿ ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ತಹಶೀಲ್ದಾರ್ ಮಹೇಶ್ಚಂದ್ರ, ಬ್ರಹ್ಮಾವರ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಶೇಷಪ್ಪ ಉಪಸ್ಥಿತರಿದ್ದರು.







