Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯೋತ್ಪಾದಕ ದಾಳಿಗಳಲ್ಲಿ ಮುಸ್ಲಿಮರ...

ಭಯೋತ್ಪಾದಕ ದಾಳಿಗಳಲ್ಲಿ ಮುಸ್ಲಿಮರ ಹೆಸರಿದ್ದರೆ 5 ಪಟ್ಟು ಹೆಚ್ಚು ಪ್ರಚಾರ: ಅಧ್ಯಯನದಿಂದ ಬಹಿರಂಗ

ಇತರ ದಾಳಿಗಳ ಬಗ್ಗೆ ಮೌನವಾಗುವ ಅಮೆರಿಕದ ಮಾಧ್ಯಮಗಳು

ವಾರ್ತಾಭಾರತಿವಾರ್ತಾಭಾರತಿ4 July 2017 4:10 PM IST
share
ಭಯೋತ್ಪಾದಕ ದಾಳಿಗಳಲ್ಲಿ ಮುಸ್ಲಿಮರ ಹೆಸರಿದ್ದರೆ 5 ಪಟ್ಟು ಹೆಚ್ಚು ಪ್ರಚಾರ: ಅಧ್ಯಯನದಿಂದ ಬಹಿರಂಗ

ವಾಷಿಂಗ್ಟನ್, ಜು.4: ಅಮೆರಿಕದಲ್ಲಿ ನಡೆಯುವ ಭಯೋತ್ಪಾದಕ ದಾಳಿಗಳಲ್ಲಿ ಮುಸ್ಲಿಮರ ಹೆಸರಿದ್ದರೆ, ಮುಸ್ಲಿಮೇತರರು ನಡೆಸುವ ಭಯೋತ್ಪಾದಕ ದಾಳಿಗಳಿಗಿಂತ ಐದು ಪಟ್ಟು ಹೆಚ್ಚು ಮಾಧ್ಯಮ ಪ್ರಚಾರವನ್ನು ಪಡೆಯುತ್ತದೆ ಎಂಬುದನ್ನು ಅಧ್ಯಯನವೊಂದು ಕಂಡುಕೊಂಡಿದೆ ಎಂದು independent.co.uk ವರದಿ ಮಾಡಿದೆ.

ಅಮೆರಿಕದಲ್ಲಿ 2011 ಮತ್ತು 2015ರ ನಡುವೆ ನಡೆದ ಎಲ್ಲ ಭಯೋತ್ಪಾದಕ ದಾಳಿಗಳ ವರದಿಗಾರಿಕೆಗಳ ವಿಶ್ಲೇಷಣೆಯಲ್ಲಿ ಈ ಅಂಶ ಬಹಿರಂಗಗೊಂಡಿದ್ದು, ದಾಳಿಯಲ್ಲಿ ಮುಸ್ಲಿಮರು ಆರೋಪಿಗಳಾಗಿದ್ದರೆ, ಮಾಧ್ಯಮ ಗಮನವು 449 ಶೇಕಡದಷ್ಟು ಹೆಚ್ಚಿರುವುದನ್ನು ಅಧ್ಯಯನವು ಪತ್ತೆಹಚ್ಚಿದೆ.

ಮುಸ್ಲಿಮ್ ಆರೋಪಿಗಳು ನಡೆಸಿದ್ದಾರೆ ಎನ್ನಲಾದ ದಾಳಿಗಳು 12.4 ಶೇಕಡವಾಗಿದ್ದರೆ ಈ ದಾಳಿಗಳ ವರದಿಗಾರಿಕೆಯ ಶೇ. 41.4ರಷ್ಟಿದೆ. ಮುಸ್ಲಿಮರ ಬಗ್ಗೆ ಜನರು ಹೆಚ್ಚು ಹೆದರುವಂತೆ ಮಾಧ್ಯಮಗಳು ಮಾಡುತ್ತವೆ ಎಂಬುದನ್ನು ಈ ಅಂಕಿಸಂಖ್ಯೆಗಳು ಸೂಚಿಸುತ್ತವೆ ಎಂದು ಅಧ್ಯಯನದ ಲೇಖಕರು ಅಭಿಪ್ರಾಯಪಡುತ್ತಾರೆ.

ಅಮೆರಿಕದ ನೆಲದಲ್ಲಿ ನಡೆದ ಪ್ರತಿಯೊಂದು ಭಯೋತ್ಪಾದಕ ದಾಳಿಯ ಬಗ್ಗೆ ಅಮೆರಿಕದ ಪತ್ರಿಕೆಗಳು ಮಾಡಿರುವ ವರದಿಗಳನ್ನು ಸಂಶೋಧಕರು ಅಧ್ಯಯನ ಮಾಡಿ ಹಾಗೂ ಪ್ರತಿಯೊಂದು ದಾಳಿಗೆ ಸಂಬಂಧಿಸಿ ಪ್ರಕಟಗೊಂಡ ಬರಹಗಳ ಸಂಖ್ಯೆಯನ್ನು ಎಣಿಕೆ ಮಾಡಿದ್ದಾರೆ. 2013ರಲ್ಲಿ ಇಬ್ಬರು ಭಯೋತ್ಪಾದಕರು ಬೋಸ್ಟನ್ ಮ್ಯಾರಥಾನ್ ಬಾಂಬ್ ಸ್ಫೋಟ ನಡೆಸಿದರು. ಆ ಘಟನೆಯಲ್ಲಿ ಮೂವರು ಮೃತಪಟ್ಟರು. ಆ ಘಟನೆಯು ಈ ಐದು ವರ್ಷಗಳ ಅಧ್ಯಯನ ಅವಧಿಯಲ್ಲಿ ಅಮೆರಿಕದಲ್ಲಿ ನಡೆದ ಎಲ್ಲ ಭಯೋತ್ಪಾದಕ ಘಟನೆಗಳ ಒಟ್ಟು ವರದಿಗಾರಿಕೆಯ ಶೇ. 20 ಸ್ಥಳವನ್ನು ಆಕ್ರಮಿಸಿಕೊಂಡಿತು ಎಂಬುದನ್ನು ಅಧ್ಯಯನಕಾರರು ಕಂಡುಕೊಂಡಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, 2012ರಲ್ಲಿ ವಿಸ್ಕೋನ್ಸಿನ್‌ನಲ್ಲಿರುವ ಸಿಖ್ ಮಂದಿರವೊಂದರಲ್ಲಿ ಮೈಕಲ್ ಪೇಜ್ ಎಂಬ ಬಿಳಿಯ ವ್ಯಕ್ತಿ ದಾಳಿ ನಡೆಸಿ ಆರು ಮಂದಿಯನ್ನು ಕೊಂದನಾದರೂ, ಅದಕ್ಕೆ ಕೇವಲ 3.8 ಶೇಕಡ ಪ್ರಚಾರ ಮಾತ್ರ ದೊರಕಿತು ಎಂದು ಅಧ್ಯಯನ ತಿಳಿಸಿದೆ.

ಟ್ರಂಪ್ ಆರೋಪದಲ್ಲಿ ಹುರುಳಿಲ್ಲ: ಅಧ್ಯಯನದಿಂದ ಬಹಿರಂಗ
"ಮುಸ್ಲಿಮರು ನಡೆಸುವ ಭಯೋತ್ಪಾದಕ ದಾಳಿಗಳ ಬಗ್ಗೆ ಮಾಧ್ಯಮಗಳು ವರದಿ ಮಾಡುವುದಿಲ್ಲ" ಎಂಬುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿಯಲ್ಲಿ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ತಮ್ಮ  ಅಧ್ಯಯನವು ಸಾಬೀತುಪಡಿಸಿದೆ ಎಂದು ಸಂಶೋಧಕರು ಹೇಳುತ್ತಾರೆ. ''ಕೆಲವು ಭಯೋತ್ಪಾದಕ ದಾಳಿಗಳ ಬಗ್ಗೆ ಮಾಧ್ಯಮಗಳು ಸರಿಯಾಗಿ ವರದಿ ಮಾಡುವುದಿಲ್ಲ ಎಂದು ಅಧ್ಯಕ್ಷ ಟ್ರಂಪ್ ಹೇಳುತ್ತಾರೆ. ಆದರೆ, ಅದು ಸರಿಯಲ್ಲ ಎನ್ನುವುದು ಸಾಬೀತಾಗಿದೆ'' ಎಂದು ವರದಿಯಲ್ಲಿ ಅವರು ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X