Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಕೆಟ್‌ನ 'ಅದ್ಭುತ ಬಾಲಕ'ಪ್ರಣವ್...

ಕ್ರಿಕೆಟ್‌ನ 'ಅದ್ಭುತ ಬಾಲಕ'ಪ್ರಣವ್ ಧನವಡೆಗೆ ರಿಯಾಲಿಟಿ ಚೆಕ್!

ವಾರ್ತಾಭಾರತಿವಾರ್ತಾಭಾರತಿ4 July 2017 5:15 PM IST
share
ಕ್ರಿಕೆಟ್‌ನ ಅದ್ಭುತ ಬಾಲಕಪ್ರಣವ್ ಧನವಡೆಗೆ ರಿಯಾಲಿಟಿ ಚೆಕ್!

ಮುಂಬೈ, ಜು.4: ಇನಿಂಗ್ಸ್‌ವೊಂದರಲ್ಲಿ ಸಾವಿರಕ್ಕೂ ಅಧಿಕ ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್, 'ಕ್ರಿಕೆಟ್‌ನ ಅದ್ಭುತ ಬಾಲಕ'ನೆಂದು  ಖ್ಯಾತಿ ಪಡೆದಿರುವ ಪ್ರಣವ್ ಧನವಡೆ ರಿಯಾಲಿಟಿ ಚೆಕ್‌ಗೆ ಗುರಿಯಾಗಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಶಾಲಾ ಪಂದ್ಯದಲ್ಲಿ 1009 ರನ್ ಗಳಿಸಿದ ಮಹಾನ್ ಸಾಧನೆಗಾಗಿ ಮುಂಬೈ ಕ್ರಿಕೆಟ್ ಸಂಸ್ಥೆ(ಎಂಸಿಎ) ಧನವಡೆಗೆ ಐದು ವರ್ಷಗಳ ಕಾಲ ಪ್ರತಿ ತಿಂಗಳು 10,000 ರೂ. ವಿದ್ಯಾರ್ಥಿ ವೇತನ ನೀಡುವುದಾಗಿ ಕಳೆದ ವರ್ಷ ಘೋಷಣೆ ಮಾಡಿತ್ತು. ಒಂದು ವರ್ಷ ಕಾಲ ವಿದ್ಯಾರ್ಥಿ ವೇತನ ನೀಡಿರುವ ಎಂಸಿಎ ಕಳೆದ 6 ತಿಂಗಳುಗಳಿಂದ ವಿದ್ಯಾರ್ಥಿ ವೇತನ ನೀಡಿಲ್ಲ. ಈ ವಿಳಂಬಕ್ಕೆ ಕಾರಣವೇನೆಂದು ಧನವಡೆ ಹೆತ್ತವರಿಗೆ ಗೊತ್ತಿಲ್ಲ.

ಎಂಸಿಎ ಎರಡನೆ ವರ್ಷದ ವಿದ್ಯಾರ್ಥಿ ವೇತನ ನೀಡುವ ಮೊದಲು ಧನವಡೆ ಪ್ರದರ್ಶನವನ್ನು ಪರಾಮರ್ಶೆ ನಡೆಸಲಿದೆ.

  ವಿದ್ಯಾರ್ಥಿ ವೇತನ ಘೋಷಣೆಯ ವೇಳೆ ಪ್ರತಿವರ್ಷ ಆಟಗಾರನ ಕ್ರಿಕೆಟ್ ಹಾಗೂ ವಿದ್ಯಾರ್ಥಿ ಚಟುವಟಿಕೆಗಳನ್ನು ಪರಾಮರ್ಶಿಸಲಿದೆ ಎಂದು ಎಂಸಿಎ ಹೇಳಿತ್ತು. ಈ ವರ್ಷ ಈತನಕ ಪರಾಮರ್ಶೆ ನಡೆದಿಲ್ಲ. ಪರಾಮರ್ಶೆಯ ಬಳಿಕ ಆಡಳಿತ ಮಂಡಳಿಗೆ ವರದಿ ನೀಡಲಾಗುತ್ತದೆ. ಮಂಡಳಿಯು ವಿದ್ಯಾರ್ಥಿ ವೇತನ ಮುಂದುವರಿಸಬೇಕೇ, ಬೇಡವೇ ಎಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಎಂಸಿಎ ಜೊತೆ ಕಾರ್ಯದರ್ಶಿ ಉನ್ಮೇಶ್ ಖಾನ್ವೀಕರ್ ಹೇಳಿದ್ದಾರೆ.

ಕೆ.ಸಿ. ಗಾಂಧಿ ಶಾಲಾ ವಿದ್ಯಾರ್ಥಿಯಾಗಿರುವ ಧನವಡೆ ಎಂಸಿಎ 2016ರ ಜನವರಿಯಲ್ಲಿ ಆಯೋಜಿಸಿದ್ದ ಅಂತರ್‌ಶಾಲಾ ಪಂದ್ಯದಲ್ಲಿ ವಿಶ್ವ ದಾಖಲೆಯ ವೈಯಕ್ತಿಕ ಸ್ಕೋರ್ ದಾಖಲಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರು.

"ಈ ವರ್ಷದ ಆರು ತಿಂಗಳು ಕಳೆದರೂ ಎಂಸಿಎ ವಿದ್ಯಾರ್ಥಿ ವೇತನ ಲಭಿಸಿಲ್ಲ. ಎಂಸಿಎ ಯಾವ ನಿರ್ಧಾರ ತಳೆದಿದೆ ಎಂದು ನಮಗೆ ಗೊತ್ತಿಲ್ಲ. ನಾನು ಎಂಸಿಎಯನ್ನು ಸಂಪರ್ಕಿಸಿಲ್ಲ. ಅಲ್ಲಿ ಯಾರನ್ನು ಸಂಪರ್ಕಿಸಬೇಕೆಂದು ತಿಳಿದಿಲ್ಲ'' ಎಂದು ಧನವಡೆಯ ತಂದೆ ಪ್ರಶಾಂತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X