Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಪ.ಪಂ. ವಾಣಿಜ್ಯ ಮಳಿಗೆಯ ಮುಂಭಾಗ...

ಹನೂರು: ಪ.ಪಂ. ವಾಣಿಜ್ಯ ಮಳಿಗೆಯ ಮುಂಭಾಗ ಹೆಚ್ಚುವರಿ ಸ್ಥಳಾವಕಾಶ ತೆರವು

ವಾರ್ತಾಭಾರತಿವಾರ್ತಾಭಾರತಿ4 July 2017 6:18 PM IST
share
ಹನೂರು: ಪ.ಪಂ. ವಾಣಿಜ್ಯ ಮಳಿಗೆಯ ಮುಂಭಾಗ ಹೆಚ್ಚುವರಿ ಸ್ಥಳಾವಕಾಶ ತೆರವು

ಹನೂರು, ಜು.4: ಪಟ್ಟಣದಲ್ಲಿ ಜೆಸಿಬಿ ಕಾರ್ಯಾಚರಣೆ ನಡೆಸಿದ್ದು ಪಟ್ಟಣ ಪಂಚಾಯತ್ ವಾಣಿಜ್ಯ ಮಳಿಗೆಯ ಮುಂಭಾಗ ಬಾಡಿಗೆದಾರರು ಆವರಿಸಿಕೊಂಡಿದ್ದ ಹೆಚ್ಚುವರಿ ಸ್ಥಳಾವಕಾಶವನ್ನು ತೆರವುಗೊಳಿಸಲಾಗಿದೆ.

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ 34 ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಈ ಮಳಿಗೆಗಳನ್ನು ಟೆಂಡರ್ ಮೂಲಕ ಬಹಿರಂಗ ಹರಾಜು ನಡೆಸಿ ಬಾಡಿಗೆಗೆ ನೀಡಲಾಗಿತ್ತು. ಆದರೆ ಬಾಡಿಗೆ ಪಡೆದ ವ್ಯಾಪಾರಿಗಳು ಮಳಿಗೆಯ ಮುಂಭಾಗಕ್ಕೆ ಹೆಚ್ಚುವರಿಯಾಗಿ ಶಿಟುಗಳನ್ನು ಅಳವಡಿಸಿಕೊಂಡು 10-15 ಅಡಿಗಳಷ್ಟು ನಿಲ್ದಾಣವನ್ನು ಆವರಿಸಿಕೊಂಡಿದ್ದರು. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತಿತ್ತು ಮತ್ತು ವಾಹನಗಳನ್ನು ಪಾರ್ಕ್‌ಮಾಡಲು ಅಡಚಣೆಯಾಗುತ್ತಿತ್ತು.

ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ಪಟ್ಟಣ ಪಂ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಬೆಳಗ್ಗೆಯೇ ಕಾರರ್ಯಾಚರನೆ ನಡೆಸಿ ಹೆಚ್ಚುವರಿಯಾಗಿ ಹಾಕಿಕೊಳ್ಳಲಾಗಿದ್ದ ಮಣ್ಣನ್ನು ತೆರವುಗೊಳಿಸಿ, ಮೇಲ್ಚಾವಣಿಗೆ ಅಳವಡಿಸಲಾಗಿರುವ ಶೀಟುಗಳನ್ನೂ ಸಹ ತೆರವುಗೊಳಿಸುವಂತೆ ಸೂಚನೆ ನೀಡಿದರು.

ಜೆಸಿಬಿ ಕಾರ್ಯಾಚರಣೆ ಹಿನ್ನೆಲೆ ವೃತ್ತ ನಿರೀಕ್ಷಕ ಪರಶುರಾಮ್ ಸಮ್ಮುಖದಲ್ಲಿ ಸಿಬ್ಬಂದಿ ನೇಮಕ ಮಾಡಿ ಮೀಸಲು ಪಡೆ ಠಿಕಾಣಿ ಹೂಡಿಸಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

ಕಾರ್ಯಾಚರಣೆ ವೇಳೆ ಮುಖ್ಯಾಧಿಕಾರಿ ಮೋಹನ್‌ ಕೃಷ್ಣ, ಕರವಸೂಲಿಗಾರ ನಂಜುಂಡಶೆಟ್ಟಿ, ಸಿಬ್ಬಂದಿ ಮನಿಯಾ, ಕೆಂಪರಾಜು, ಪ.ಪಂ ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ರಾಜುಗೌಡ, ರಮೇಶ್‌ನಾಯ್ಡು, ಬಾಲರಾಜ್‌ನಾಯ್ಡು, ನಾಗಣ್ಣ, ಜಯಪ್ರಕಾಶ್‌ಗುಪ್ತ ಇನ್ನಿತರರು ಹಾಜರಿದ್ದರು.

ಬಾಡಿಗೆ ಪಾವತಿಸಿ ಇಲ್ಲದಿದ್ದರೆ ಖಾಲಿಮಾಡಿ:  ವಾಣಿಜ್ಯ ಮಳಿಗೆಗಳನ್ನು ಬಾಡಿಗೆಗೆ ಪಡೆದಿರುವ ಬಾಡಿಗೆದಾರರು ಕಳೆದ 11 ತಿಂಗಳುಗಳಿಂದಲೂ ಬಾಡಿಗೆಗಳನ್ನು ಪಾವತಿಸಿಲ್ಲ. ಇನ್ನು ಕೆಲವು ಬಾಡಿಗೆದಾರರು ಕರಾರು ಪತ್ರವನ್ನೇ ನೋಂದಣಿ ಮಾಡಿಸಿಲ್ಲ. ಅಂತಹ ಬಾಡಿಗೆದಾರರ ಮುಂಗಡ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಮತ್ತು ಅಂತಹ ಮಳಿಗೆಗಳನ್ನು ಮರು ಹರಾಜಿಗೆ ಒಳಪಡಿಸಲಾಗುವುದು. ಕೆಲ ಬಾಡಿಗೆದಾರರು ಮಳಿಗೆಗಳನ್ನು 3ನೇ ವ್ಯಕ್ತಿಗೆ ಬಾಡಿಗೆಗೆ ನೀಡಿ ಬಾಡಿಗೆ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಆದುದರಿಂದ ಬಾಡಿಗೆ ಪಾವತಿ ಮಾಡದ ಬಾಡಿಗೆದಾರರು ಹಣ ಪಾವತಿಸಬೇಕು ಎಂದು ಸೂಚನೆ ನೀಡಿದರು.

ಮುಖ್ಯಾಧಿಕಾರಿ ಕಾರ್ಯವೈಖರಿಗೆ ಮೆಚ್ಚುಗೆ:  ಪ.ಪಂ ಮುಖ್ಯಾಧಿಕಾರಿಗಳ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು ಇದೇ ಖಡಕ್ ನಿರ್ಧಾರವನ್ನು ಬಾಡಿಗೆ ವಸೂಲಾತಿಯಲ್ಲಿಯೂ ಕೈಗೊಂಡು ಬಂದ ಆದಾಯದಿಂದ ಪಟ್ಟಣಕ್ಕೆ ಅವಶ್ಯವಾದ ಮೂಲಸೌಕರ್ಯ ಕಲ್ಪಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಅಭಿಪ್ರಾಯಟಪಟ್ಟು ಮುಖ್ಯಾಧಿಕಾರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X