Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರುದ್ರನ ಹತ್ಯೆ ಪ್ರಕರಣ:ರೌಡಿ ಗೌತಮ್ ಬಂಧನ

ರುದ್ರನ ಹತ್ಯೆ ಪ್ರಕರಣ:ರೌಡಿ ಗೌತಮ್ ಬಂಧನ

ವಾರ್ತಾಭಾರತಿವಾರ್ತಾಭಾರತಿ4 July 2017 7:38 PM IST
share
ರುದ್ರನ ಹತ್ಯೆ ಪ್ರಕರಣ:ರೌಡಿ ಗೌತಮ್ ಬಂಧನ

ಬೆಂಗಳೂರು, ಜು.4: ರೌಡಿ ಶಿವಕುಮಾರ್ ಯಾನೆ ರುದ್ರ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ರೌಡಿ ಗೌತಮ್‌ನನ್ನು ತಮಿಳುನಾಡಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹಳೆಯ ರೌಡಿಯಾಗಿರುವ ಈತನ ಬಂಧನದಿಂದ ಪೊಲೀಸ್ ಅಧಿಕಾರಿಯ ಕೊಲೆ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ.

ಪ್ರಕರಣದ ವಿವರ: ಮೃತಪಟ್ಟಿರುವ ರೌಡಿ ಶಿವಕುಮಾರ್ ಮತ್ತು ವೇಲು ಕುಟುಂಬದ ನಡುವೆ ಗಲಾಟೆಯಾಗಿತ್ತು. 2005ರಲ್ಲಿ ವೇಲು ಸಂಬಂಧಿ ಸುಬ್ರಹ್ಮಣ್ಯ ಎಂಬಾತನನ್ನು ರೌಡಿ ಶಿವಕುಮಾರ್ ಹತ್ಯೆ ಮಾಡಿದ್ದ. ಇದಕ್ಕೆ ಪ್ರತೀಕಾರವಾಗಿ ವೇಲು ಮತ್ತು ಆತನ ಸಹಚರರು ಶಿವಕುಮಾರ್‌ನ ಅಣ್ಣ ಅಶ್ವಥ್ ನಾರಾಯಣ್‌ನನ್ನು ಕೊಲೆ ಮಾಡಿದ್ದರು. ಜೈಲಿನಿಂದ ಬಿಡುಗಡೆಯಾದ ಶಿವಕುಮಾರ್ ನಿವೃತ್ತ ಪೊಲೀಸ್ ಅಧಿಕಾರಿ ತಮ್ಮಯ್ಯ ಅವರನ್ನು ಯಲಹಂಕ ಸಮೀಪ ಕೊಲೆ ಮಾಡುತ್ತಾನೆ. ನಂತರ ತನ್ನ ಸಹಚರರೊಂದಿಗೆ ಸೇರಿ ವೇಲು ಅವರನ್ನು 2011ರಲ್ಲಿ ಹತ್ಯೆ ಮಾಡುತ್ತಾನೆ.

 ಜೈಲಿನಿಂದ ಬಿಡುಗಡೆಯಾದ ನಂತರ ಶಿವಕುಮಾರ್, ನಾನು ಪೊಲೀಸ್ ಅಧಿಕಾರಿಯನ್ನು ಕೊಂದವನು, ವೇಲು ಕುಟುಂಬ ಯಾವ ಲೆಕ್ಕ, ಅವರಿಗೂ ಒಂದು ಗತಿ ಕಾಣಿಸುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ. ಇದನ್ನು ಕೇಳಿಸಿಕೊಂಡ ವೇಲು ಸಂಬಂಧಿಗಳಾದ ಷಣ್ಮುಗ, ರಂಜಿತ್, ಗೌತಮ್ ಹಾಗೂ ರೌಡಿ ಸುನೀಲ ಯಾನೆ ಸೈಲಂಟ್ ಸುನೀಲ ಅವರ ಸಹಾಯದಿಂದ ಸಂಚು ರೂಪಿಸಿ 2012, ಡಿಸೆಂಬರ್ 9ರಂದು ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಶಿವಕುಮಾರ್‌ನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಂದು ಹಾಕುತ್ತಾರೆ. ಈ ಪ್ರಕರಣದಲ್ಲಿ ಗೌತಮ್ ತಲೆಮರೆಸಿಕೊಂಡಿದ್ದ ಎಂದು ಸಿಸಿಬಿ ತಿಳಿಸಿದೆ.

ಗೌತಮ್ 2013ರಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಪ್ರಕರಣ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದರು. ಗೌತಮ್ ಎಸ್.ಜೆ.ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು, ಈತನ ವಿರುದ್ಧ ಎಸ್.ಜೆ.ಪಾರ್ಕ್, ಬಸವನಗುಡಿ, ಅಶೋಕ್‌ನಗರ, ತಿಲಕ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಕೊಲೆ ಯತ್ನ, ಸುಲಿಗೆ, ದರೋಡೆಗೆ ಸಂಚು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮಾರು 9 ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X