Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1890ರ ಒಪ್ಪಂದಕ್ಕೆ ನೆಹರು ಅನುಮೋದನೆ...

1890ರ ಒಪ್ಪಂದಕ್ಕೆ ನೆಹರು ಅನುಮೋದನೆ ನೀಡಿಲ್ಲ

ಚೀನಾ ಪ್ರಧಾನಿಗೆ ಭಾರತದ ಪ್ರಥಮ ಪ್ರಧಾನಿ ಬರೆದ ಪತ್ರದಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ4 July 2017 7:42 PM IST
share
1890ರ ಒಪ್ಪಂದಕ್ಕೆ ನೆಹರು ಅನುಮೋದನೆ ನೀಡಿಲ್ಲ

ಬೀಜಿಂಗ್, ಜು. 4: ಟಿಬೆಟ್ ಮತ್ತು ಸಿಕ್ಕಿಂ ಗಡಿಗಳಿಗೆ ಸಂಬಂಧಿಸಿ ಬ್ರಿಟಿಶ್ ಭಾರತ ಮತ್ತು ಚೀನಾಗಳ ನಡುವೆ ಏರ್ಪಟ್ಟ 1890ರ ಒಪ್ಪಂದವನ್ನು, ಚೀನಾ ಹೇಳಿಕೊಳ್ಳುವಂತೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಸಂಪೂರ್ಣವಾಗಿ ಅನುಮೋದಿಸಿಲ್ಲ.

ಭಾರತದ ಪ್ರಥಮ ಪ್ರಧಾನಿ ಬರೆದ ಪತ್ರಗಳೇ ಇದನ್ನು ಹೇಳುತ್ತವೆ.

ಭಾರತ, ಭೂತಾನ್ ಮತ್ತು ಚೀನಾಗಳ ಗಡಿಗಳು ಪರಸ್ಪರ ಸಂಧಿಸುವ ಸ್ಥಳದ ಬಗ್ಗೆ ಭಾರತ ಮತ್ತು ಚೀನಾಗಳ ನಡುವೆ ತೀವ್ರ ಭಿನ್ನಾಭಿಪ್ರಾಯಗಳು ಇರುವುದು, 1959ರಲ್ಲಿ ನೆಹರು ಅಂದಿನ ಚೀನಾ ಪ್ರಧಾನಿ ಝೂ ಎನ್‌ಲಾಯಿಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

ಇಂದು ಇದೇ ಪ್ರದೇಶ ಭಾರತ ಮತ್ತು ಚೀನಾಗಳ ನಡುವೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ.

 ಸಿಕ್ಕಿಂಗೆ ಸಂಬಂಧಿಸಿ ಭಾರತ ಮತ್ತು ಚೀನಾಗಳ ನಡುವೆ 1890ರಲ್ಲಿ ಏರ್ಪಟ ಗಡಿ ಒಪ್ಪಂದವನ್ನು ನೆಹರು ಅನುಮೋದಿಸಿದ್ದಾರೆ ಎಂಬುದಾಗಿ ಚೀನಾದ ವಿದೇಶ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಸೋಮವಾರ, ನೆಹರು 1959 ಮಾರ್ಚ್ 22ರಂದು ಎನ್‌ಲಾಯಿಗೆ ಬರೆದ ಪತ್ರವನ್ನು ಉಲ್ಲೇಖಿಸಿ ಹೇಳಿರುವುದನ್ನು ಸ್ಮರಿಸಬಹುದಾಗಿದೆ.

ಸಿಕ್ಕಿಂ ಮತ್ತು ಟಿಬೆಟ್‌ಗಳಿಗೆ ಸಂಬಂಧಿಸಿ ಗ್ರೇಟ್ ಬ್ರಿಟನ್ ಮತ್ತು ಚೀನಾಗಳ ನಡುವೆ ಏರ್ಪಟ್ಟ ಒಪ್ಪಂದಕ್ಕೆ 1890ರಲ್ಲಿ ಅಂದಿನ ಕಲ್ಕತ್ತದಲ್ಲಿ ಅಂದಿನ ವಸಾಹತುಶಾಹಿ ಬ್ರಿಟನ್ ಮತ್ತು ಚೀನಾದ ಕಿಂಗ್ ರಾಜವಂಶ ಸಹಿ ಹಾಕಿತ್ತು.

‘‘ಚೀನಾ-ಸಿಕ್ಕಿಂ ಗಡಿಯಲ್ಲಿ ಯಾವುದೇ ವಿವಾದವಿಲ್ಲ ಎಂಬುದಾಗಿ 1959 ಸೆಪ್ಟಂಬರ್ 26ರಂದು ಝೂ ಅವರಿಗೆ ಬರೆದ ಪತ್ರದಲ್ಲಿ ನೆಹರು ಖಚಿತಪಡಿಸಿದ್ದಾರೆ ಎಂದು ಆ ಒಪ್ಪಂದ ಮತ್ತು ಇನ್ನೊಂದು ಪತ್ರವನ್ನು ಉಲ್ಲೇಖಿಸಿ ಚೀನಾದ ವಕ್ತಾರ ಹೇಳಿದ್ದರು.

ಆದರೆ, ವಾಸ್ತವವಾಗಿ ಸೆಪ್ಟಂಬರ್ 26ರಂದು ನೆಹರು ಬರೆದ ಪತ್ರದಲ್ಲಿ, ಚೀನಾ ಈಗ ಜಗತ್ತಿಗೆ ಹೇಳುತ್ತಿರುವುದಕ್ಕಿಂತ ಹೆಚ್ಚಿನ ವಿಷಯಗಳಿವೆ. ಉತ್ತರ ಸಿಕ್ಕಿಂಗೆ ಸಂಬಂಧಪಟ್ಟಂತೆ ಮಾತ್ರ 1890ರ ಒಪ್ಪಂದಕ್ಕೆ ಭಾರತ ಬದ್ಧವಾಗಿದೆ ಎಂದು ಆ ಪತ್ರದಲ್ಲಿ ನೆಹರು ಹೇಳಿದ್ದಾರೆ.

  ‘‘1890ರ ಒಪ್ಪಂದವು ಸಿಕ್ಕಿಂ ಮತ್ತು ಟಿಬೆಟ್ ನಡುವಿನ ಗಡಿಯನ್ನೂ ಗುರುತಿಸಿದೆ. ಹಾಗೂ ಈ ಗಡಿಯನ್ನು ಬಳಿಕ 1895ರಲ್ಲಿ ಜಾರಿಗೆ ತರಲಾಯಿತು. ಸಿಕ್ಕಿಂ ಮತ್ತು ಟಿಬೆಟ್ ವಲಯಕ್ಕೆ ಸಂಬಂಧಿಸಿದ ಗಡಿಯಲ್ಲಿ ಯಾವುದೇ ವಿವಾದವಿಲ್ಲ. ಇದು ಸ್ಪಷ್ಟವಾಗಿ ಉತ್ತರ ಸಿಕ್ಕಿಂಗೆ ಅನ್ವಯಿಸುತ್ತದೆಯೇ ಹೊರತು ಮೂರು ದೇಶಗಳ ಗಡಿಗಳು ಸಂಧಿಸುವ ಪ್ರದೇಶಕ್ಕಲ್ಲ. ಈ ತ್ರಿದೇಶ-ಗಡಿ ಸಂಧಿ ಬಗ್ಗೆ ಸಿಕ್ಕಿಂ ಮತ್ತು ಭೂತಾನ್ ಜೊತೆ ಚರ್ಚಿಸಬೇಕಾದ ಅಗತ್ಯವಿದೆ. ಹಾಗೂ ಈಗ ಅದು ವಿವಾದಾಸ್ಪದ ಪ್ರದೇಶವಾಗಿದೆ. ಅದೇ ವೇಳೆ, 1890ರ ಒಪ್ಪಂದವು ಅಸಮಾನತೆಯ ಒಪ್ಪಂದ ಎಂಬುದನ್ನು ನಾವು ಮರೆಯದಿರೋಣ. ಯಾಕೆಂದರೆ ಅದರಲ್ಲಿ ಟಿಬೆಟ್, ಸಿಕ್ಕಿಂ ಮತ್ತು ಭೂತಾನ್ ಒಳಗೊಂಡಿಲ್ಲ’’ ಎಂದು ಚೀನಾ ಪ್ರಧಾನಿ ಝೂಗೆ ಬರೆದ ಪತ್ರದಲ್ಲಿ ನೆಹರು ಹೇಳಿದ್ದರು.

ಯುದ್ಧದಲ್ಲಿ ಭಾರತ ಮೇಲುಗೈ ಪಡೆಯುವುದಿಲ್ಲ: ಚೀನಾ ಸೇನಾ ವೆಬ್‌ಸೈಟ್

ಸಿಕ್ಕಿಂ ವಲಯದಲ್ಲಿ ಈಗ ಉಂಟಾಗಿರುವ ಬಿಕ್ಕಟ್ಟು, ಭಾರತ ಮತ್ತು ಚೀನಾಗಳ ನಡುವೆ ‘ಸಶಸ್ತ್ರ ಸಂಘರ್ಷ’ವಾಗಿ ಮಾರ್ಪಟ್ಟರೆ, ಭಾರತದ ಸಶಸ್ತ್ರ ಪಡೆಗಳು ಮೇಲುಗೈ ಪಡೆಯುವುದಿಲ್ಲ ಎಂದು ಪೀಪಲ್ಸ್ ಲಿಬರೇಶನ್ ಆರ್ಮಿಯ ವೆಬ್‌ಸೈಟ್‌ನಲ್ಲಿ ಮಂಗಳವಾರ ಪ್ರಕಟಗೊಂಡ ಲೇಖನವೊಂದು ಎಚ್ಚರಿಸಿದೆ.

ಯುದ್ಧ ವಿಶ್ಲೇಷಕ ವಾಂಗ್ ದೇಹುಬ ಬರೆದಿರುವ ಲೇಖನವು, ಇದೇ ವಲಯದಲ್ಲಿ 1967ರಲ್ಲಿ ನಡೆದ ಸಂಘರ್ಷವನ್ನು ನೆನಪಿಸಿದೆ ಹಾಗೂ ಅಂದು ಭಾರತೀಯ ಪಡೆಗಳ ವಿರುದ್ಧ ಚೀನಾ ಸೇನೆಯು ‘ಎರಡು ವಿನಾಶಕಾರಿ’ ಪ್ರತಿ ದಾಳಿಗಳನ್ನು ನಡೆಸಿತು ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X