Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆ.ಸಿ.ರೋಡ್: ಬ್ಯಾಂಕ್ ದರೋಡೆ ಯತ್ನ...

ಕೆ.ಸಿ.ರೋಡ್: ಬ್ಯಾಂಕ್ ದರೋಡೆ ಯತ್ನ ಪ್ರಕರಣ: ಬಂಧಿತರು ಸಿಸಿಬಿ ಪೊಲೀಸರ ವಶ

ವಾರ್ತಾಭಾರತಿವಾರ್ತಾಭಾರತಿ4 July 2017 9:06 PM IST
share
ಕೆ.ಸಿ.ರೋಡ್: ಬ್ಯಾಂಕ್ ದರೋಡೆ ಯತ್ನ ಪ್ರಕರಣ: ಬಂಧಿತರು ಸಿಸಿಬಿ ಪೊಲೀಸರ ವಶ

ಉಳ್ಳಾಲ, ಜು. 4: ತಲಪಾಡಿ ಸಮೀಪದ ಕೆ.ಸಿ.ರೋಡ್ ಜಂಕ್ಷನ್‌ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಕಳೆದ ಜೂ.23ರಂದು ಹೆಲ್ಮೆಟ್ ಧರಿಸಿ ನುಗ್ಗಿ ಚಿನ್ನಾಭರಣವನ್ನು ದರೋಡೆಗೈಯ್ಯಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಪಿಲಾರು, ದಾರಂದಬಾಗಿಲು ನಿವಾಸಿ ರಾಮಚಂದ್ರ ಯಾನೆ ಬೋಟ್ ರಾಮ (58) ಮತ್ತು ಪ್ರಕಾಶ್ ನಗರ ನಿವಾಸಿ ಮೋಹನ್ ಚಿಟ್ಟಿಯಾರ್ (46) ಎಂದು ಗುರುತಿಸಲಾಗಿದೆ.

ಪಿಲಾರು, ದಾರಂದ ಬಾಗಿಲಿನ ರಾಮಚಂದ್ರ ಸೋಮೇಶ್ವರ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾಗಿದ್ದು ಲಕ್ಷಾಂತರ ರೂ. ಮೌಲ್ಯದ ಚಿಟಿ ಫಂಡ್ ಮತ್ತು ಫೈನಾನ್ಸ್ ವ್ಯವಹಾರವನ್ನು ನಡೆಸುತ್ತಿದ್ದರೆನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ವ್ಯವಹಾರದಲ್ಲಿ ಕೈಸುಟ್ಟುಕೊಂಡಿದ್ದ ಬೋಟ್ ರಾಮಣ್ಣ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಕೆ.ಸಿ.ರೋಡ್‌ನ ಶಾಖೆಯನ್ನು ದರೋಡೆ ಮಾಡಲು ಪ್ಲ್ಯಾನ್ ರೆಡಿ ಮಾಡಿದ್ದರು ಎನ್ನಲಾಗಿದೆ.

ಇದಕ್ಕಾಗಿ ತನ್ನ ಸ್ನೇಹಿತ ಮೋಹನ್ ಚೆಟ್ಟಿಯಾರನ್ನು ಬಳಸಿಕೊಂಡು ಕಳೆದ ಜೂ.23 ರಂದು ಮಧ್ಯಾಹ್ನ ಹೆಲ್ಮೆಟ್ ಧರಿಸಿ ಬ್ಯಾಂಕಿಗೆ ನುಗ್ಗಿದ್ದು ಒಳಗಿದ್ದ ಮೂವರು ಸಿಬ್ಬಂದಿಗಳನ್ನು ಟಾಯ್ಲೆಟಲ್ಲಿ ಕೂಡಿ ಹಾಕಿ ಲಾಕರ್‌ನಲ್ಲಿದ್ದ ಸುಮಾರು ಆರು ಕೋಟಿಗೂ ಅಧಿಕ ಬೆಳೆಬಾಳುವ 25 ಕೆ.ಜಿ ಚಿನ್ನವನ್ನು ಎಗರಿಸಿ ಬೈಕಿನಲ್ಲಿ ಓಡಲೆತ್ನಿಸಿದಾಗ ಬೆನ್ನಟ್ಟಿದ್ದ ಸರಪ್ಪ ಎಂಬುವವರು ಇಬ್ಬರಿಗೂ ಕಲ್ಲಿನಲ್ಲಿ ಹೊಡೆದ ಪರಿಣಾಮ ಚಿನ್ನದ ಗೋಣಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು.

ಬ್ಯಾಂಕಿನ ಹತ್ತಿರದ ಶಾಪ್‌ಗಳ ಸಿಸಿ ಕೆಮರಾ ದೃಶ್ಯಗಳ ಆಧಾರದಲ್ಲಿ ಪರಿಶೀಲನೆ ನಡೆಸಿದ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಮುಖ ಆರೋಪಿ ಬೋಟ್ ರಾಮ ಆರೂವರೆ ಅಡಿ ಎತ್ತರದ ಧೃಢಕಾಯದವರಾಗಿದ್ದು, ಬ್ಯಾಂಕ್‌ನ ಸಿಬ್ಬಂದಿ, ಇನ್ನಿತರ ಪದಾಧಿಕಾರಿಗಳಲ್ಲಿ ಸಿಸಿ ಕ್ಯಾಮೇರ ಫೂಟೇಜಿನ ಹೆಲ್ಮೆಟ್ ಧಾರಿ ವ್ಯಕ್ತಿಗಳಿಬ್ಬರನ್ನು ತೋರಿಸಿದಾಗ ಧೃಢಕಾಯದ ವ್ಯಕ್ತಿಯನ್ನು ಅನೇಕರು ಬೋಟ್ ರಾಮರೇ ಇರಬಹುದೆಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತನ್ನ ಪತ್ನಿ ಬ್ಯಾಂಕಿನ ಮಾಜಿ ನಿರ್ದೇಶಕಿಯಾಗಿದ್ದರಿಂದ ಬೋಟ್ ರಾಮ ಬ್ಯಾಂಕಿನ ಸಿಬ್ಬಂದಿಗಳ ಜೊತೆ ಒಡನಾಟ ಹೊಂದಿದ್ದರೆನ್ನಲಾಗಿದೆ. ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳನ್ನು ಮಂಗಳವಾರ ಸಂಜೆ ಹೆಚ್ಚಿನ ವಿಚಾರಣೆಗಾಗಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X