Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಜಿ.ಪಂ. ಕಚೇರಿ ಆವರಣದಲ್ಲಿ...

ಶಿವಮೊಗ್ಗ ಜಿ.ಪಂ. ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ವಿಧಿಸುವ ಕೋರಿಕೆ ತಿರಸ್ಕರಿಸಿದ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ5 July 2017 3:20 PM IST
share
ಶಿವಮೊಗ್ಗ ಜಿ.ಪಂ. ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ವಿಧಿಸುವ ಕೋರಿಕೆ ತಿರಸ್ಕರಿಸಿದ ಜಿಲ್ಲಾಧಿಕಾರಿ

ಶಿವಮೊಗ್ಗ, ಜು. 5: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೀಡು ಮಾಡಿದ್ದ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಸಿಆರ್‌ಪಿಸಿ (ಅಪರಾಧ ದಂಡ ಪ್ರಕ್ರಿಯಾ ಸಂಹಿತೆ) 144 ನೇ ಕಲಂ ಅನ್ವಯ ನಿರಂತರ ನಿಷೇಧಾಜ್ಞೆ ವಿಧಿಸಬೇಕೆಂಬ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ) ಯ ಕೋರಿಕೆಯನ್ನು ಜಿಲ್ಲಾಧಿಕಾರಿ ಡಾ. ಎಂ. ಲೋಕೇಶ್ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ!

ಇತ್ತೀಚೆಗೆ ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿ.ಪಂ. ಕಚೇರಿ ಆವರಣದಲ್ಲಿ ನಿರಂತರ ನಿಷೇಧಾಜ್ಞೆ ವಿಧಿಸಲು ಅನುಮತಿ ನೀಡದಿರುವ ಜಿಲ್ಲಾಧಿಕಾರಿಗಳ ನಿರ್ಧಾರವನ್ನು ವಿವಿಧ ಪಕ್ಷಗಳ ಕೆಲ ಹಾಲಿ - ಮಾಜಿ ಜಿ. ಪಂ. ಸದಸ್ಯರು, ಪಕ್ಷಗಳ ಮುಖಂಡರು ಸ್ವಾಗತಿಸಿದ್ದಾರೆ. ’ಡಿ.ಸಿ.ಯವರು ಉತ್ತಮ ನಿರ್ಧಾರ ಕೈಗೊಂಡು, ಪ್ರಜಾಪ್ರಭುತ್ವದ ಮೌಲ್ಯ ಉಳಿಸುವ ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಏನಿದು ಪ್ರಸ್ತಾಪ: ಕಳೆದ ಕೆಲ ತಿಂಗಳುಗಳ ಹಿಂದೆ, ಸರ್ಕಾರಿ ಜಮೀನು ಮಂಜೂರು ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಜಿ.ಪಂ. ಕಚೇರಿ ಆವರಣದಲ್ಲಿ ಡಿ.ಎಸ್.ಎಸ್. ಸಂಘಟನೆಯ ನೇತೃತ್ವದಲ್ಲಿ ಹಕ್ಕಿಪಿಕ್ಕಿ ಸಮುದಾಯದವರು ದಿಢೀರ್ ಆಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ಧರಣಿಯಲ್ಲಿ ವಯೋವೃದ್ದರು, ಮಹಿಳೆಯರು, ಮಕ್ಕಳು ಕೂಡ ಭಾಗಿಯಾಗಿದ್ದರು. ಅಹೋ ರಾತ್ರಿ ಧರಣಿ ಕೈ ಬಿಡುವಂತೆ ಅಧಿಕಾರಿಗಳು ಮಾಡಿದ್ದ ಮನವಿಗೆ ಪ್ರತಿಭಟನಾಕಾರರು ಒಪ್ಪದೆ ಇಡೀ ರಾತ್ರಿ ಕಚೇರಿ ಆವರಣದಲ್ಲಿಯೇ ಬೀಡುಬಿಟ್ಟಿದ್ದರು.

ಈ ಪ್ರಕರಣದ ನಂತರ ಜಿ.ಪಂ. ಸಿಇಓರವರು ಜಿಲ್ಲಾಡಳಿತಕ್ಕೆ ಪ್ರಸ್ತಾವನೆಯೊಂದನ್ನು ಸಲ್ಲಿಸಿದ್ದರು. ಜಿ.ಪಂ. ಕಚೇರಿ ಆವರಣದಲ್ಲಿ ನಡೆದಿದ್ದ ದಿಢೀರ್ ಅಹೋರಾತ್ರಿ ಧರಣಿಯನ್ನು ಉಲ್ಲೇಖಿಸಿದ್ದರು. ಈ ರೀತಿಯ ದಿಢೀರ್ ಹೋರಾಟಗಳು ಕಚೇರಿ ಆವರಣದಲ್ಲಿ ನಡೆದು ಏನಾದರೂ ಅನಾಹುತ ಸಂಭವಿಸಿದರೆ ಆಡಳಿತ ವ್ಯವಸ್ಥೆಗೆ ಕೆಟ್ಟ ಹೆಸರು ಬರಲಿದೆ. ಈ ಹಿನ್ನೆಲೆಯಲ್ಲಿ ಕಚೇರಿ ಆವರಣದಲ್ಲಿ ಸಿಆರ್‌ಪಿಸಿ 144 ನೇ ಕಲಂ ಅನ್ವಯ ನಿರಂತರ ನಿಷೇಧಾಜ್ಞೆ ವಿಧಿಸಬೇಕು ಎಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದರು.

ವ್ಯಾಪಕ ಆಕ್ರೋಶ: ಸಿಇಓರವರ ಈ ಕೋರಿಕೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇಡೀ ದೇಶದ ಯಾವುದೇ ಸರ್ಕಾರಿ ಕಚೇರಿಗಳಲ್ಲಿಯೂ ಇಲ್ಲದ ನಿಷೇಧಾಜ್ಞೆ ಶಿವಮೊಗ್ಗ ಜಿ.ಪಂ. ಕಚೇರಿ ಆವರಣದಲ್ಲೇಕೆ? ನಾಗರೀಕರ ಪ್ರತಿಭಟನೆಯ ಹಕ್ಕು ಕಿತ್ತುಕೊಳ್ಳುವ ಹುನ್ನಾರವಾಗಿದೆ ಎಂಬಿತ್ಯಾದಿಯಾಗಿ ಟೀಕಾ ಪ್ರಹಾರ ನಡೆಸಿದ್ದರು. ಈ ನಡುವೆ ಜಿಲ್ಲಾಧಿಕಾರಿಗಳು, ಸಿಇಓ ಪ್ರಸ್ತಾವನೆಯನ್ನು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ರವಾನಿಸಿದ್ದರು. ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ವಿಧಿಸುವಂತಹ ಪರಿಸ್ಥಿತಿಯಿದೆಯೇ ಎಂಬ ಅಭಿಪ್ರಾಯ ಕೇಳಿದ್ದರು. ಜಿಲ್ಲಾ ರಕ್ಷಣಾಧಿಕಾರಿಗಳು ನಿಷೇಧಾಜ್ಞೆ ವಿಧಿಸಲು ಒಪ್ಪಿಗೆ ಸೂಚಿಸಿದ್ದರು. ಆದರೆ ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರ ಬಳಸಿ ನಿಷೇಧಾಜ್ಞೆ ಕೋರಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X