Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ಪ್ರದರ್ಶನ, ತರಬೇತಿ ಶಿಬಿರ...

ಯಕ್ಷಗಾನ ಪ್ರದರ್ಶನ, ತರಬೇತಿ ಶಿಬಿರ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ6 July 2017 1:55 PM IST
share

ಕಾಸರಗೋಡು, ಜು. 6: ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನ ಅಂಗವಾಗಿ ಕಾಸರಗೋಡು ಸರಕಾರಿ ಕಾಲೇಜಿನ ಯಕ್ಷಗಾನ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಒಂದು ತಿಂಗಳ ಕಾಲ ವ್ಯವಸ್ಥಿತವಾಗಿ ಎಡನೀರು ಮಠದ ಪರಿಸರದಲ್ಲಿ ನಡೆದ ಯಕ್ಷಗಾನ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಜು. 9ರಂದು ಬೆಳಿಗ್ಗೆ 10 ಗಂಟೆಗೆ ಕಾಸರಗೋಡು ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಕಾಸರಗೋಡು ಮತ್ತು ಮಂಜೇಶ್ವರ ತಾಲೂಕುಗಳ ಪದವಿಪೂರ್ವ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ 33 ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಯಕ್ಷಗಾನ ಕಲಿಕೆಯ ಜತೆಗೆ ನೈತಿಕ ಮತ್ತು ಮಾನವೀಯ ಮೌಲ್ಯ, ಸಮಯ ಪರಿಪಾಲನೆ, ವ್ಯಕ್ತಿತ್ವ ವಿಕಾಸ ಈ ಮುಂತಾದ ವಿಷಯಗಳನ್ನು ಶಿಬಿರದಲ್ಲಿ ಅಳವಡಿಸಲಾಗಿತ್ತು. ಬದುಕಿಗೆ ಅಗತ್ಯವಾದ ಏಕಾಗ್ರತೆ, ವೈಚಾರಿಕ ದೃಷ್ಟಿಕೋನ, ಶೋಧನಾ ಪ್ರಜ್ಞೆ, ನಾಯಕತ್ವಗುಣ, ಅಧ್ಯಯನಶೀಲತೆ ಇತ್ಯಾದಿಗಳ ಮಹತ್ವವನ್ನು ಶಿಬಿರದ ಮೂಲಕ ಪಡೆಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಯಿತು.

ಕರ್ನಾಟಕದ ವಿವಿಧ ಸಂಶೋಧನ ಕೇಂದ್ರಗಳಿಗೆ ಶಿಬಿರಾರ್ಥಿಗಳು ಭೇಟಿ ನೀಡುವುದರ ಮೂಲಕ ಯಕ್ಷಗಾನದ ಕುರಿತು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಹಲವು ವಿಷಯಗಳನ್ನು, ಅನುಭವಗಳನ್ನು ಪಡೆದುಕೊಂಡರು. ಶಿಬಿರವು ಮಲೆಯಾಳ ಮತ್ತು ಕನ್ನಡ ನಾಡಿನ ಕಲಾವಿದರ, ಸಂಶೋಧಕರ, ವಿದ್ವಾಂಸರ, ಸಾಹಿತಿಗಳ, ವಿಮರ್ಶಕರ ವಿಶೇಷ ಮನ್ನಣೆಗೆ ಪಾತ್ರವಾಗಿರುವುದು ಶಿಬಿರಕ್ಕೆ ಸಂದರ್ಶಿಸಿದ ವ್ಯಕ್ತಿಗಳ ಬಹುದೊಡ್ಡ ಸಂಖ್ಯೆಯಿಂದಲೇ ರುಜುವಾತಾಗಿದೆ.

ಶಿಬಿರ ಪ್ರಾರಂಭವಾದಂದಿನಿಂದ ಮುಗಿಯುವ ವರೆಗೆ ಸಂದರ್ಶನ ನೀಡಿದವರ ಸಂಖ್ಯೆ ಸಾವಿರವನ್ನು ದಾಟಿದೆ. ಮಲೆಯಾಳ ಮತ್ತು ಕನ್ನಡ ನಾಡಿನ ಪ್ರಮುಖ ದೃಶ್ಯ-ಮುದ್ರಣ ಮಾಧ್ಯಮಗಳು , ಆಂಗ್ಲ ಪತ್ರಿಕೆಗಳು ಶಿಬಿರದ ಮಹತ್ವವನ್ನು ನಾಡಿನ ಮೂಲೆ ಮೂಲೆಗು ತಲುಪಿಸಿವೆ. ರಾಜ್ಯದಲ್ಲಿಯೇ ಮೊತ್ತಮೊದಲ ಬಾರಿಗೆ 33 ದಿನಗಳ ಸುದೀರ್ಘ ಕಾಲ ಶೈಕ್ಷಣಿಕವಾಗಿಯೂ ವ್ಯವಸ್ಥಿತವಾಗಿಯೂ ನಡೆದ ಶಿಬಿರವು ಚಾರಿತ್ರಿಕ ದಾಖಲೆಯನ್ನು ಸೃಷ್ಟಿಸಿತು.

ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ಇತರ ಅಧಿಕಾರಿಗಳು ಶಿಬಿರಕ್ಕೆ ತಾವಾಗಿ ಬಂದು ಶ್ಲಾಘಿಸಿದರು. 2017 ಜೂನ್ 1ರಂದು ಎಡನೀರು ಶ್ರಿ ಕೇಶವಾನಂದ ಭಾರತೀ ಸ್ವಾಮೀಜಿಯವರ ದಿವ್ಯಹಸ್ತದಿಂದ ಉದ್ಘಾಟನೆಗೊಂಡ ಶಿಬಿರವು ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದಿಂದ ಮುಂದುವರಿಯಿತು. ನಾಡಿನ ಜನರ ಮಾದರಿ ಶಿಬಿರವಾಗಿ ಮಾರ್ಪಟ್ಟಿತು.

ಬೆಳಿಗ್ಗೆ 9.30ರಿಂದ ಪ್ರಾರ್ಥನೆ, ಯೋಗದಿಂದ ಪ್ರಾರಂಭವಾಗಿ ನಾಟ್ಯ, ತಾಳ ತರಬೇತಿಯು ಒಂದು ಗಂಟೆಯ ವರೆಗೆ ಮುಂದುವರಿಯಿತು. ಅಪರಾಹ್ನ 2ರಿಂದ ಸಂಜೆ 4ರ ತನಕ, ಕೆಲವೊಮ್ಮೆ 6ರ ತನಕವೂ ವಿಶೇಷೋಪನ್ಯಾಸ, ಸಂವಾದ, ಚರ್ಚೆ, ಪ್ರಾತ್ಯಕ್ಷಿಕೆ, ಮಾತುಕತೆ, ತುಲನಾತ್ಮಕ ಪ್ರದರ್ಶನ ಪಾಠೀ ಮುಂತಾದವುಗಳನ್ನು ಶಿಬಿರದಲ್ಲಿ ನಡೆಸಲಾಯಿತು.

ಅನುಭವಿ ಮತ್ತು ಹಿರಿಯ ಕಲಾವಿದರು ಸಂಪನ್ಮೂಲ ವ್ಯಕ್ತಿಯಾಘಿ ಪಾಲ್ಗೊಂಡರು.

ಶಿಬಿರದ ಬಹತೇಕ ದಿನಗಳಲ್ಲಿ ರಾತ್ರಿಹೊತ್ತು ಎಡನೀರು ಮೇಳದ ಆಟ ನಡೆಯುತ್ತಿದ್ದುದರಿಂದ ಶಿಬಿರಾರ್ಥಿಗಳಿಗೆ ರಾಮಾಯಣ, ಮಹಾಬಾರತ ಹಾಗೂ ಭಾಗವತದ ಹಲವು ಯಕ್ಷಗಾನ ಪ್ರಸಂಗಗಳನ್ನು ವೀಕ್ಷಿಸುವಂತಾಯಿತು. ಎರಡು ವಿಶೇಷ ತಾಳಮದ್ದಳೆಗಳನ್ನು ಶಿಬಿರಾರ್ಥಿಗಳಿಗಾಗಿಯೇ ನಡೆಸಲಾಗಿದೆ.

ಆಹಾರ್ಯ, ವಾಚಿಕ ಮತ್ತು ಸಾತ್ವಿಕ ಹೀಗೆ ಚತುರ್ವಿಧ ಅಭಿನಯ ಗಳ ಬಗ್ಗೆ, ಯಕ್ಷಗಾನಕ್ಕೆ ಪೂರಕವಾದ ಇತರ ಭಾರತೀಯ ಕಲೆಗಳ ಬಗ್ಗೆ ಶಿಬಿರದಲ್ಲಿ ಪ್ರಾತ್ಯಕ್ಷಿಕೆ, ಸಂವಾದ, ಉಪನ್ಯಾಸಗಳು ನಡೆದಿವೆ. ನಾಡಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಸೂರಿಕುಮೇರಿ ಕೆ. ಗೋವಿಂದ ಭಟ್, ಡಾ. ಬಳ್ಳಂಬೆಟ್ಟು ಶ್ರೀಧರ ಭಂಡಾರಿ, ಶ್ರೀಧರ ರಾವ್ ಕುಂಬಳೆ, ವಿದ್ವಾನ್ ಬಾಬು ರೈ, ಬನ್ನಂಜೆ ಸಂಜೀವ ಸುವರ್ಣ, ಕುರಿಯ ಗಣಪತಿ ಶಾಸ್ತ್ರಿ, ಕುಬಣೂರು ಶ್ರೀಧರ ರಾವ್, ರತ್ನಾವತಿ ಸಾಲೆತ್ತಡ್ಕ, ದೇವಕಾನ ಕೃಷ್ಣ ಭಟ್, ಪ್ರೊ. ಕೋಟೆ ರಾಮ ಭಟ್, ವಿದ್ವಾಂಸರಾದ ಡಾ. ರಾಘವನ್ ನಂಬಿಯಾರ್, ಡಾ. ಕೆ. ಚಿನ್ನಪ್ಪ ಗೌಡ ಈ ಮುಂತಾದ ಸುಮಾರು 70ಕ್ಕೂ ಮಿಕ್ಕಿ ಕಲಾವಿದರು, ವಿದ್ವಾಂಸರು ಶಿಬಿರದ ಸಂಪನ್ಮುಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ.

ಜಿಲ್ಲೆಯ ಹಿರಿಯ ಮತ್ತು ಅನುಭವಿ ನಾಟ್ಯಗುರುಗಳಾದ ದಿವಾಣ ಶಿವಶಂಕರ ಭಟ್ ಮತ್ತು ಸಬ್ಬಣಕೋಡಿ ರಾಮ ಭಟ್ ನಾಟ್ಯ ತರಬೇತಿ ನೀಡಿದ್ದಾರೆ.

ಶಿಬಿರದ ಯಶಸ್ವಿಗಾಗಿ ಸಂಯೋಜನಾಧಿಕಾರಿ ಡಾ. ರತ್ನಾಕರ ಮಲ್ಲಮೂಲೆ ಆಹೋರಾತ್ರಿ ದುಡಿದಿದ್ದಾರೆ. ಡಾ. ರಾಜೇಶ್ ಬೆಜ್ಜಂಗಳ ಸಹ ಸಂಯೋಜನಾಧಿಕಾರಿಯಾಗಿ ಸಹಕರಿಸಿದ್ದಾರೆ.
   
    
          
ಶಿಬಿರವು ಕಾಸರಗೋಡಿನ ಇತಿಹಾಸದಲ್ಲಿ ಒಂದು ಚಾರಿತ್ರಿಕ ದಾಖಲೆಯಾಗಿದ್ದು, ಕಾಲೇಜಿಗೆ ಮಾತ್ರವಲ್ಲ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ಉತ್ತಮ ಹೆಸರನ್ನು ತಂದಿದೆ. ಶಿಬಿರಾರ್ಥಿಗಳ ರಂಗ ಪ್ರವೇಶ ಜು. 8ರಂದು ಅಪರಾಹ್ನ 2 ಗಂಟೆಯಿಂದ ಕಾಸರಗೊಡು ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಜರಗಲಿದೆ. ಶಿಬಿರದ ಸಮಾರೋಪ ಸಮಾರಂಭ ಜು. 9ರಂದು ಬೆಳಿಗ್ಗೆ 10 ಗಂಟೆಗೆ ಕಾಸರಗೋಡು ಸರಕಾರಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಸಮಾರೋಪ ಸಮಾರಂಭವನ್ನು ಕಾಸರಗೋಡು ಶಾಸಕ ಎನ್. ಎ. ನೆಲ್ಲಿಕುನ್ನು ಉದ್ಘಾಟಿಸುವರು. ಕಾಲೇಜು ಪ್ರಿನ್ಸಿಪಾಲ ಡಾ. ಟಿ. ವಿನಯನ್ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಕೆ. ಜೀವನ್‌ಬಾಬು ದಿಕ್ಸೂಚಿ ಭಾಷಣಗೈಯ್ಯುವರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ಎ. ಜಿ. ಸಿ. ಬಶೀರ್, ಕಾಸರಗೋಡು ನಗರಸಭಾಧ್ಯಕ್ಷೆ ಬೀಫಾತಿಮ ಇಬ್ರಾಹಿಂ, ಕೌನ್ಸಿಲರ್ ಸವಿತಾ ಕೆ., ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಕೆ. ಅಂಬುಜಾಕ್ಷನ್, ಜಿಲ್ಲಾ ಯೋಜನಾಧಿಕಾರಿ ಕೆ. ಎಂ. ಸುರೇಶ್, ಹಣಕಾಸು ಅಧಿಕಾರಿ ಪಿ. ವಿ. ನಾರಾಯಣನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ , ಮಾಜಿ ಶಾಸಕ ಕುಂಬಳೆ ಸುಂದರ ರಾವ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು. ಹಿರಿಯ ಕಲಾವಿದ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಸಮಾರೊಪ ಭಾಷಣಗೈಯ್ಯುವರು. ನಾಟ್ಯುರುಗಳಾದ ದಿವಾಣ ಶಿವಶಂಕರ ಭಟ್ ಮತ್ತು ಸಬ್ಬಣಕೋಡಿ ರಾಮ ಭಟ್ ಅವರಿಗೆ ಶಿಬಿರಾರ್ಥಿಗಳಿಂದ ಗುರುವಂದನೆ ನಡೆಯಲಿದೆ. ಕಾಲೇಜು ಉಪಪ್ರಿನ್ಸಿಪಾಲ ಡಾ. ಕೆ. ಕೆ. ಹರಿಕುರುಪ್, ಕಣ್ಣೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ರಾಜು ಎಂ. ಸಿ., ಆಂತರಿಕ ವೌಲ್ಯಖಾತರಿ ಘಟಕದ ಡಾ. ಜಿಜೋ, ಎಡನೀರು ಮಠದ ವೇಣುಗೋಪಾಲನ್ ಇ., ಡಾ. ಕೆ. ಕಮಲಾಕ್ಷ, ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಸುಜಾತ ಎಸ್., ಶಿಕ್ಷಕೇತರ ಅಧಿಕಾರಿ ಎಂ. ಬಾಲಸುಂದರನ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಗಂಗಾಧರನ್ ಶುಭಾಶಂಸನೆಗೈಯ್ಯುವರು. ಸಂಯೋಜನಾಧಿಕಾರಿ ಡಾ. ರತ್ನಾಕರ ಮಲ್ಲಮೂಲೆ, ಸಹಸಂಚಾಲಕ ಡಾ. ರಾಜೇಶ್ ಬೆಜ್ಜಂಗಳ ಉಪಸ್ಥಿತರಿರುವರು. ‘ವೀರಅಭಿಮನ್ಯು’ ಯಕ್ಷಗಾನ ಬಯಲಾಟ    : ಜು. 9ರಂದು ಅಪರಾಹ್ನ 2 ಗಂಟೆಗೆ ಪುತ್ತಿಗೆ ರಘುರಾಮ ಹೊಳ್ಳ ನಿರ್ದೇಶನದಲ್ಲಿ ಶಿಬಿರಾರ್ಥಿಗಳು ಹಾಗೂ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಭಾಗವತರಾಗಿ ಪುತ್ತಿಗೆ ರಘುರಾಮ ಹೊಳ್ಳ, ಚೆಂಡೆಯಲ್ಲಿ ಅಡೂರು ಲಕ್ಷ್ಮೀ ನಾರಾಯಣ ರಾವ್, ಮದ್ದಳೆಯಲ್ಲಿ ನೇರೋಳು ಗಣಪತಿ ನಾಯಕ್, ಉದಯ ಕಂಬಾರ್, ಚಕ್ರತಾಳದಲ್ಲಿ ಶ್ರೀಸ್ಕಂದ ದಿವಾಣ, ಮುಮ್ಮೇಳದಲ್ಲಿ ರಾಧಾಕೃಷ್ಣ ನಾವಡ, ಮೋಹನ ಶೆಟ್ಟಿ ಬಾಯಾರು, ಹರಿನಾರಾಯಣ ಎಡನೀರು, ಮೋಹನ ಬೆಳ್ಳಿಪ್ಪಾಡಿ, ಬಾಲಕೃಷ್ಣ ಮವ್ವಾರು, ಶಶಿಧರ ಕುಲಾಲ್, ಶಬರೀಶ ಮಾನ್ಯ, ಬಾಲಕೃಷ್ಣ ಸೀತಾಂಗೊಳಿ, ಶ್ರೀಸ್ಕಂದ ದಿವಾಣ, ವಿಶ್ವನಾಥ ಎಡನೀರು, ಪ್ರಕಾಶ್ ನಾಯ್ಕಾ ನೀರ್ಚಾಲು, ವಸುಧರ ಹರೀಶ್, ಮನೀಶ್ ಪಾಟಾಳಿ ಎಡನೀರು, ಮಧುರಾಜ್ ಪಾಟಾಳಿ ಎಡನೀರು ಹಾಗೂ ಶಿಬಿರಾರ್ಥಿಗಳು ಭಾಗವಹಿಸುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X