Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಧ್ಯಮಗಳಿಂದ ಲೈಂಗಿಕ ಅಲ್ಪಸಂಖ್ಯಾತರ...

ಮಾಧ್ಯಮಗಳಿಂದ ಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಖಂಡನೆ

ವಾರ್ತಾಭಾರತಿವಾರ್ತಾಭಾರತಿ6 July 2017 6:21 PM IST
share

ಬೆಂಗಳೂರು, ಜು.6: ಇತ್ತೀಚೆಗೆ ಮಾಧ್ಯಮಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಬೇಜವಾಬ್ದಾರಿಯುತವಾಗಿ ಚಿತ್ರಿಸುತ್ತಿದ್ದು, ಇದರಿಂದಾಗಿ ಅವರು ಮಾನಸಿಕ ಹಿಂಸೆಗೆ ಒಳಗಾಗುವಂತಾಗಿದೆ ಮತ್ತು ಸಮಾಜದಲ್ಲಿ ತಲೆಯೆತ್ತಿ ಬದುಕದಂತಾಗಿದೆ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್, ಕೊವಾಲಿಷನ್ ಫಾರ್ ಸೆಕ್ಸ್ ವರ್ಕರ್ಸ್‌ ಆ್ಯಂಡ್ ಸೆಕ್ಷುವಲ್ ಮೈನಾರಿಟೀಸ್ ರೈಟ್ಸ್ ಸೇರಿದಂತೆ ಹಲವು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ನಗರದಲ್ಲಿಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಕಾರ್ಯಕರ್ತೆ ರೂಮಿ ಹರೀಶ್, ಸಮಾಜದ ಆಗುಹೋಗುಗಳನ್ನು ಸಭ್ಯ ರೀತಿಯಲ್ಲಿ ಸಮಾಜಕ್ಕೆ ತಿಳಿಸಬೇಕಾದ ಮಾಧ್ಯಮಗಳು ಬೇರೆಯವರ ಜೀವನಕ್ಕೆ ಕುಂದುಂಟಾಗುವಂತೆ ವರ್ತಿಸುತ್ತಿವೆ. ಇತ್ತೀಚೆಗಷ್ಟೆ ಮಾಧ್ಯಮಗಳಲ್ಲಿ ಚರ್ಚೆಗೊಳಗಾದ ಇಬ್ಬರು ಲೆಸ್ಬಿಯನ್‌ಗಳು ಮದುವೆಯಾಗಿದ್ದಾರೆ ಎಂಬ ಸುದ್ದಿಯನ್ನು ಅನಗತ್ಯವಾಗಿ ಚರ್ಚೆ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮದುವೆಯ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ‘ಅನೈಸರ್ಗಿಕ ಸಂಬಂಧ’ವಾದ್ದರಿಂದ ಅದು ಶಿಕ್ಷಾರ್ಹ ಅಪರಾಧ ಎಂದು ತೋರಿಸಿದ್ದಾರೆ. ಅಲ್ಲದೆ, ಈ ಸುದ್ದಿವಾಹಿನಿ ಅವರಲ್ಲಿ ಒಬ್ಬರಿಗೆ ಕರೆ ಮಾಡಿ ಚರ್ಚೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿತ್ತು. ಅದಕ್ಕೆ ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ಫೇಸ್‌ಬುಕ್ ಮತ್ತು ಟ್ವಿಟ್ಟರ್‌ನಲ್ಲಿ ಹಾಕುವ ಮೂಲಕ ಮಾನಹಾನಿಯಾಗುವಂತೆ ಮಾಡಿತ್ತು. ಇದರಿಂದಾಗಿ ಸಮಾಜದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗಿದೆ. ಈ ಪ್ರಕರಣದಿಂದ ಓರ್ವ ಮಹಿಳೆ ಕೆಲಸ ಕಳೆದುಕೊಳ್ಳುವಂತಾಯಿತು ಎಂದು ಹೇಳಿದರು.

ಮಾಧ್ಯಮಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರ ವಿಷಯಗಳ ಬಗ್ಗೆ ವಿವಾದಾತ್ಮಕವಾಗಿ ವರದಿ ಮಾಡುವುದು ಸರಿಯಲ್ಲ. ಸೂಕ್ಷ್ಮವಾಗಿ ಬಿಂಬಿಸಬೇಕಾದ ಘಟನೆಯನ್ನು ವೈಭವೀಕರಿಸುವುದು ತಪ್ಪು. ಅವರಿಗೂ ಸಮಾಜದಲ್ಲಿ ಗೌರವದ ಸ್ಥಾನ ದೊರಕಿಸಿಕೊಡಬೇಕು ಎಂದು ವಕೀಲ ಗೌತಮ್ ಹೇಳಿದರು.
ಕುಟುಂಬಗಳಲ್ಲಿನ ಕೌಟುಂಬಿಕ ಹಿಂಸೆ, ಪೊಲೀಸರ ಕಿರುಕುಳ, ಜೀವ ಬೆದರಿಕೆಗಳಿಂದ ಬೇಸತ್ತು ಈಗ ಕೊಂಚ ಉಸಿರಾಡುತ್ತಿರುವವರಿಗೆ ಮಾಧ್ಯಮಗಳ ಇಂತಹ ವರದಿಯಿಂದ ನೆಮ್ಮದಿಯ ಬದುಕು ಕಸಿದುಕೊಂಡಂತಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂತಹ ಅಪ್ರಚಾರ ಮಾಡುವುದನ್ನು ಮಾಧ್ಯಮಗಳು ನಿಲ್ಲಿಸಬೇಕು. ನಮ್ಮನ್ನು ಮನುಷ್ಯರಂತೆ ಕಾಣಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪಿಯುಸಿಎಲ್‌ನ ರಾಮದಾಸ ರಾವ್, ಸನಾ, ವಿದ್ಯಾ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X