Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಚುನಾವಣಾ ಆಯೋಗದ ವರ್ಚಸ್ಸಿನ ಬಗ್ಗೆ...

‘ಚುನಾವಣಾ ಆಯೋಗದ ವರ್ಚಸ್ಸಿನ ಬಗ್ಗೆ ಕಾಳಜಿಯಿತ್ತು’

ಇವಿಎಂ ವಿವಾದ ಕುರಿತು ಜೈದಿ

ವಾರ್ತಾಭಾರತಿವಾರ್ತಾಭಾರತಿ6 July 2017 6:38 PM IST
share
‘ಚುನಾವಣಾ ಆಯೋಗದ ವರ್ಚಸ್ಸಿನ ಬಗ್ಗೆ ಕಾಳಜಿಯಿತ್ತು’

ಹೊಸದಿಲ್ಲಿ,ಜು.: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಕುರಿತ ವಿವಾದದುದ್ದಕ್ಕೂ ತಾನು ಚುನಾವಣಾ ಆಯೋಗದ ಋಜುತ್ವ ಮತ್ತು ವರ್ಚಸ್ಸಿನ ಬಗ್ಗೆ ಕಾಳಜಿ ವಹಿಸಿದ್ದೆನೇ ಹೊರತು ತನ್ನ ವೈಯಕ್ತಿಕ ಗೌರವದ ಕುರಿತಲ್ಲ ಎಂದು ಬುಧವಾರ ಮುಖ್ಯ ಚುನಾವಣಾ ಆಯುಕ್ತ ಹುದ್ದೆಯಿಂದ ನಿವೃತ್ತರಾದ ನಸೀಂ ಝೈದಿ ಅವರು ಹೇಳಿದ್ದಾರೆ.

  ‘‘ನಾನು ಸಿಟ್ಟಾಗಿರಲಿಲ್ಲ, ಹಾಗೆಂದು ಆರೋಪಗಳನ್ನು ಲಘುವಾಗಿಯೂ ಪರಿಗಣಿಸಿ ರಲಿಲ್ಲ. ಆಯೋಗವು ದಶಕಗಳಿಂದಲೂ ಕಾಯ್ದುಕೊಂಡು ಬಂದಿರುವ ಋಜುತ್ವದ ಬಗ್ಗೆ ನನಗೆ ತೀವ್ರ ಕಾಳಜಿಯುಂಟಾಗಿತ್ತು. ಆಯೋಗದ ಋಜುತ್ವವನ್ನು ಸಂರಕ್ಷಿಸಿಕೊಂಡು ಉಳಿಸಿಕೊಳ್ಳುವುದು ಮತ್ತು ಆಯೋಗದಲ್ಲಿ ಜನತೆಯ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸುವುದು ಹೇಗೆ ಎನ್ನುವುದು ಮಾತ್ರ ಆಗ ನನ್ನ ತಲೆಯಲ್ಲಿತ್ತು. ಅದು ವ್ಯಕ್ತಿಗತವಾಗಿ ನನ್ನ ಕುರಿತ ಪ್ರಶ್ನೆಯಾಗಿರಲಿಲ್ಲ ’’ ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಇವಿಎಂ ವಿವಾದ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಝೈದಿ ನುಡಿದರು.

ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆಗಳ ಬಳಿಕವೇ ಆಯೋಗವು ಇವಿಎಂ ಗಳನ್ನು ನಿಯೋಜಿಸಿತ್ತು ಮತ್ತು ಅವುಗಳಲ್ಲಿ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ಹಲವಾರು ತಜ್ಞರ ಸಮಿತಿಗಳು ಸ್ಪಷ್ಟಪಡಿಸಿದ್ದವು. ಹೀಗಾಗಿ ಇವಿಎಂ ವಿವಾದ ಅಗತ್ಯವೇ ಇರಲಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಇವೇ ಇವಿಎಂಗಳನ್ನು ಬಳಸಿ, 2004ರಿಂದ 2014ರವರೆಗೆ 107 ವಿಧಾನಸಭಾ ಮತ್ತು ಮೂರು ಸಾರ್ವತ್ರಿಕ ಚುನಾವಣೆಗಳನ್ನು ನಾವು ನಡೆಸಿದ್ದೇವೆ. ಅವು ಯಾವಾಗಲೂ ಸರಿಯಾದ ಫಲಿತಾಂಶಗಳನ್ನೇ ನೀಡಿವೆ ಎಂದು ಝೈದಿ ಹೇಳಿದರು.

ರಾಜಕೀಯ ಪಕ್ಷಗಳು ನಿರಾಧಾರ ಆರೋಪಗಳನ್ನು ಹೊರಿಸುವ ಬದಲು ಸಾಕ್ಷ ಅಥವಾ ನಂಬಲರ್ಹ ಮಾಹಿತಿಯ ಜೊತೆಗೆ ಇವಿಎಂ ತಿರುಚಿದ ನಿರ್ದಿಷ್ಟ ಪ್ರಕರಣಗಳನ್ನು ಬೆಟ್ಟು ಮಾಡಬೇಕಾಗಿತ್ತು ಎಂದು ಹೇಳಿದ ಝೈದಿ, ಆದರೆ ನಮಗೆ ಇಂತಹ ಯಾವುದೇ ಸಾಕ್ಷ ಲಭಿಸಿರಲಿಲ್ಲ, ಇಂದಿಗೂ ನಾವು ಸಾಕ್ಷಗಳಿಗಾಗಿ ಕಾಯುತ್ತಿದ್ದೇವೆ ಎಂದರು.

ಇವಿಎಂ ವಿಶ್ವಾಸಾರ್ಹತೆಯನ್ನು ಇನ್ನಷ್ಟು ಹೆಚ್ಚಿಸಬಲ್ಲ ಸಲಹೆಗಳು ಮತ್ತು ಕ್ರಮಗಳನ್ನು ಆಯೋಗವು ಸದಾ ಸ್ವಾಗತಿಸುತ್ತದೆ ಎಂದು ಅವರು ಹೇಳಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X