Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನವಸತಿ ಪ್ರದೇಶಕ್ಕೆ ಬಾರ್ ಸ್ಥಳಾಂತರ:...

ಜನವಸತಿ ಪ್ರದೇಶಕ್ಕೆ ಬಾರ್ ಸ್ಥಳಾಂತರ: ವಿರೋಧ

ವಾರ್ತಾಭಾರತಿವಾರ್ತಾಭಾರತಿ6 July 2017 1:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಪಡುಬಿದ್ರಿ,ಜು.6: ಶಾಲೆ ಹಾಗೂ ಜನವಸತಿ ಇರುವ ಪ್ರದೇಶಕ್ಕೆ ಕಾನೂನು ಮೀರಿ ಬಾರ್ ಸ್ಥಳಾಂತರಿಸಲು ಪ್ರಯತ್ನ ನಡೆಯುತಿದ್ದು, ಒಂದು ವೇಳೆ ಬಾರ್ ಈ ಪ್ರದೇಶದಲ್ಲಿ ಸ್ಥಾಪನೆಯಾದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ಪಡುಬಿದ್ರಿ ಗ್ರಾಮ ಶಾಖೆಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಚ್ಚರಿಕೆ ನೀಡಿದ್ದಾರೆ.

ಕಾಪುವಿನ ಪ್ರೆಸ್‍ಕ್ಲಬ್‍ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡುಬಿದ್ರಿ ಪೇಟೆಯಲ್ಲಿ ಕಾರ್ಯಾಚರಿಸುತ್ತಿದ್ದ ನವರಂಗ್ ಬಾರ್ ಅನ್ನು ಪಡುಬಿದ್ರಿ ಬೋರ್ಡ್ ಶಾಲೆ ಸನಿಹದಲ್ಲಿ ಸ್ಥಾಪಿಸಲು ಕಾಮಗಾರಿ ನಡೆಯುತ್ತಿದೆ. ಭೂಪರಿವರ್ತನೆಯಾಗದೆ ಈ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲು ಸ್ಥಳೀಯ ಗ್ರಾಮ ಪಂಚಾಯ್ತಿ ಪರವಾನಿಗೆ ನೀಡಿರುವುದು ಆಕ್ಷೇಪಾರ್ಹ ಎಂದು ಅಸಮಾಧನ ವ್ಯಕ್ತಪಡಿಸಿದರು.

ಬಾರ್ ಸ್ಥಳಾಂತರ ಮಾಡಲುದ್ದೇಶಿಸಿದ ಜಮೀನಿನ ಆಸುಪಾಸಿನ 40 ಮೀಟರ್ ಅಂತರದಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರ, 30 ಮೀಟರ್ ಅಂತರದಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳು ಕಾರ್ಯಾಚರಿಸುತ್ತಿವೆ. ಅಲ್ಲದೆ ಮುಸಲ್ಮಾನರ ಪ್ರಾರ್ಥನಾ ಮಂದಿರ, ಉರ್ದು ಅನುದಾನಿತ ಶಾಲೆ, ದಲಿತ ಕಾಲನಿ, ದೈವಸ್ಥಾನ, ಖಡ್ಗೇಶ್ವರಿ ಬ್ರಹ್ಮಸ್ಥಾವೂ ಇದ್ದು, ಜನವಸತಿ ಪ್ರದೇಶವಾಗಿದೆ ಎಂದು ಅವರು ತಿಳಿಸಿದರು.

ಇಲ್ಲಿ ಬಾರ್ ಸ್ಥಳಾಂತರ ಮಾಡದಂತೆ ಜಿಲ್ಲಾಧಿಕಾರಿ, ಅಬಕಾರಿ ಇಲಾಖೆಗೆ ಮನವಿ ಮಾಡಲಾಗಿದೆ. ಬಾರ್ ಮಾಲೀಕರು ರಾಜಕೀಯ ಬಳಸಿ ಸ್ಥಳಾಂತರಿಸಲು ಮುಂದಾಗಿರುವುದು ಖಂಡನೀಯ. ಶಾಸಕ ವಿನಯ ಕುಮಾರ್ ಸೊರಕೆಯವರು ಇಲ್ಲಿ ಬಾರ್ ಸ್ಥಾಪನೆಗೆ ಅವಕಾಶ ಮಾಡುವಂತೆ ಸ್ಥಳೀಯ ಜನರ ಮನವೊಲಿಸಲು ಮುಂದಾಗಿರುವುದು ತಪ್ಪು ಎಂದು ಅವರು ದೂರಿದರು. ಯಾವುದೇ ಕಾರಣಕ್ಕೂ ಬಾರ್ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಶಾಲೆಯ ಕೆಲವೇ ಮೀಟರ್ ಅಂತರದಲ್ಲಿ ಬಾರ್ ನಿರ್ಮಾಣವಾಗುವುದರಿದ ಈಗಾಗಲೇ ಸಂಕಷ್ಟದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳು ಗಂಭೀರ ತೊಂದರೆಗೊಳಗಾಗಿದೆ. ಮುಂದಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಾರೆ. ಅಲ್ಲದೆ ಸಾಮಾನ್ಯ ನಾಗರಿಕರೂ ಓಡಾಡುವುದು ಕಷ್ಟಕರ. ಇದರಿಂದ ಪರಿಸರದ ಸ್ವಾಸ್ತ್ಯ ಕೆಡುತ್ತದೆ ಎಂದರು.

ಡಿಎಸ್‍ಎಸ್ ಸಂಚಾಲಕ ಹರಿಶ್ಚಂದ್ರ ಕಲ್ಲಟ್ಟೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್, ಪಡುಬಿದ್ರಿ ಘಟಕದ ಅಧ್ಯಕ್ಷ ಮೊಹಮ್ಮದ್ ಆಸಿಫ್, ಜೈ ಕರ್ನಾಟಕ ಪಡುಬಿದ್ರಿ ಘಟಕದ ಅಧ್ಯಕ್ಷ ಸಿ.ಪಿ. ಅಬ್ದುಲ್ ರಹಿಮಾನ್ ಇದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X