Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಿ20 ಸಮ್ಮೇಳನದಲ್ಲಿ ಮೋದಿ ಜೊತೆ...

ಜಿ20 ಸಮ್ಮೇಳನದಲ್ಲಿ ಮೋದಿ ಜೊತೆ ಮಾತುಕತೆಯಿಲ್ಲ: ಚೀನಾ

ವಾರ್ತಾಭಾರತಿವಾರ್ತಾಭಾರತಿ6 July 2017 7:32 PM IST
share
ಜಿ20 ಸಮ್ಮೇಳನದಲ್ಲಿ ಮೋದಿ ಜೊತೆ ಮಾತುಕತೆಯಿಲ್ಲ: ಚೀನಾ

ಬೀಜಿಂಗ್, ಜು. 5: ಜರ್ಮನಿಯ ಹ್ಯಾಂಬರ್ಗ್‌ನಲ್ಲಿ ನಡೆಯಲಿರುವ ಜಿ20 ದೇಶಗಳ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ಔಪಚಾರಿಕ ಅಥವಾ ದ್ವಿಪಕ್ಷೀಯ ಮಾತುಕತೆ ನಡೆಯಲು ‘ವಾತಾವರಣ ಪ್ರಶಸ್ತವಾಗಿಲ್ಲ’ ಎಂದು ಚೀನಾ ಹೇಳಿದೆ.

ಸಿಕ್ಕಿಂ ಸಮೀಪದ ಭಾರತ-ಚೀನಾ ಗಡಿಯಲ್ಲಿ ಉಭಯ ದೇಶಗಳ ಸೇನೆಗಳು ಮುಖಾಮುಖಿಯಾಗಿ ಉದ್ವಿಗ್ನತೆ ನೆಲೆಸಿರುವ ಹಿನ್ನೆಲೆಯಲ್ಲಿ ಚೀನಾದ ಈ ಹೇಳಿಕೆ ಹೊರಬಿದ್ದಿದೆ.

ಜಿ20 ಶೃಂಗ ಸಮ್ಮೇಳನಕ್ಕಾಗಿ ಪ್ರಧಾನಿ ಮೋದಿ ಗುರುವಾರ ರಾತ್ರಿ ಹ್ಯಾಂಬರ್ಗ್ ತಲುಪಲಿದ್ದಾರೆ.

ಶೃಂಗ ಸಮ್ಮೇಳನದ ನೇಪಥ್ಯದಲ್ಲಿ ಅವರು ಇತರ ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ.

 ಸಿಕ್ಕಿಂ ಸಮೀಪ ತನ್ನದೆಂದು ಚೀನಾ ಹೇಳಿಕೊಳ್ಳುತ್ತಿರುವ ಸ್ಥಳದಿಂದ ಭಾರತೀಯ ಸೈನಿಕರು ಹಿಂದೆ ಸರಿಯಬೇಕೆಂದು ಅದು ಹೇಳುತ್ತಿದೆ. ಈ ಸಂಬಂಧ ಚೀನಾ ಈ ವಾರ ಹಲವಾರು ಎಚ್ಚರಿಕೆಗಳನ್ನು ಹೊರಡಿಸಿದೆ.

ಸಿಕ್ಕಿಂ ಗಡಿ ಸಮೀಪ ನಿರ್ಮಾಣಗೊಳ್ಳುತ್ತಿರುವ ರಸ್ತೆಯನ್ನು ತಡೆಯಲು ಭಾರತೀಯ ಪಡೆಗಳು ಜೂನ್‌ನಲ್ಲಿ ಅಲ್ಲಿಗೆ ತೆರಳಿವೆ. ಈ ರಸ್ತೆ ನಿರ್ಮಾಣವು ‘ಗಂಭೀರ ಭದ್ರತಾ ಬೆದರಿಕೆ’ಯಾಗಿದೆ ಎಂದು ಭಾರತ ಹೇಳಿದೆ.

ಆದರೆ, ಬ್ರಿಟನ್ ಮತ್ತು ಭಾರತದ ನಡುವೆ 1890ರಲ್ಲಿ ನಡೆದ ಒಪ್ಪಂದವನ್ನು ಭಾರತೀಯ ಸೇನಾ ಕಾರ್ಯಾಚರಣೆಯು ಉಲ್ಲಂಘಿಸಿದೆ ಎಂದು ಚೀನಾ ಹೇಳುತ್ತದೆ. ಭಾರತೀಯ ಪಡೆಗಳು ಅಲ್ಲಿಂದ ವಾಪಸಾಗದ ಹೊರತು, ಈ ವಿಷಯದಲ್ಲಿ ಯಾವುದೇ ಮಾತುಕತೆಗೆ ತಾನು ಮುಂದಾಗುವುದಿಲ್ಲ ಎಂದು ಅದು ಹೇಳಿದೆ.

ಆದರೆ, ಈಗ ವಿವಾದದಲ್ಲಿರುವ ಸ್ಥಳ ತನಗೆ ಸೇರಿದೆ ಎಂದು ಭೂತಾನ್ ಹೇಳಿದೆ. ಭೂತಾನ್‌ಗೆ ಭಾರತ ಸೇನಾ ಮತ್ತು ರಾಜತಾಂತ್ರಿಕ ನೆರವು ನೀಡುತ್ತಿದೆ.

ಟಿಬೆಟ್ ಪ್ರಸ್ಥಭೂಮಿಯಲ್ಲಿ ಚೀನಾದಿಂದ ಸಮರಭ್ಯಾಸ ಸಿಕ್ಕಿಂ ವಲಯದ ನಾತು ಲಾದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಉದ್ವಿಗ್ನತೆ ನೆಲೆಸಿರುವಂತೆಯೇ, ಚೀನಾ ಸೇನೆಯು ಟಿಬೆಟ್ ಪ್ರಸ್ಥಭೂಮಿಯಲ್ಲಿ ಸೇನಾ ಅಭ್ಯಾಸ ನಡೆಸಿದೆ. 5,100 ಮೀಟರ್ ಎತ್ತರದಲ್ಲಿ ಮೊದಲ ಬಾರಿಗೆ ಟ್ಯಾಂಕ್‌ಗಳನ್ನು ನಿಯೋಜಿಸಲಾಗಿದೆ ಹಾಗೂ ಅವುಗಳ ಅಭ್ಯಾಸ ನಡೆಸಲಾಗಿದೆ.

ಅಭ್ಯಾಸದ ವೇಳೆ ನೂತನ ಸಲಕರಣೆಗಳನ್ನು ಪರೀಕ್ಷಿಸಲಾಗುತ್ತಿದೆ. 15,000 ಅಡಿ ಮತ್ತು ಅದಕ್ಕಿಂತಲೂ ಎತ್ತರದಲ್ಲಿ ಪೀಪಲ್ಸ್ ಲಿಬರೇಶನ್ ಆರ್ಮಿಯ ಪಡೆಗಳು ಯುದ್ಧ ಸನ್ನದ್ಧವಾಗಿದೆಯೇ ಎಂಬುದನ್ನು ಪರಿಶೀಲಿಸುವುದಕ್ಕಾಗಿ ಈ ಅಭ್ಯಾಸ ನಡೆಸಲಾಗುತ್ತಿದೆ ಎಂದು ಚೀನಾದ ಅಧಿಕೃತ ಸುದ್ದಿ ಸಂಸ್ಥೆ ಕ್ಸಿನುವ ತಿಳಿಸಿದೆ.

ಸಿಕ್ಕಿಂ ‘ಸ್ವಾತಂತ್ರ’ವನ್ನು ಚೀನಾ ಬೆಂಬಲಿಸಲಿ; ಚೀನಾದ ಅಧಿಕೃತ ಮಾಧ್ಯಮ

 ಸಿಕ್ಕಿಂನಲ್ಲಿ ಭಾರತ ಮತ್ತು ಚೀನಾಗಳ ನಡುವೆ ಏರ್ಪಟ್ಟಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ವಾಗ್ದಾಳಿಯನ್ನು ಹೆಚ್ಚಿಸಿರುವ ಚೀನಾದ ಅಧಿಕೃತ ಮಾಧ್ಯಮ ‘ಗ್ಲೋಬಲ್ ಟೈಮ್ಸ್’, ಚೀನಾವು ತನ್ನ ನಿಲುವನ್ನು ಪರಿಶೀಲಿಸಿ ಸಿಕ್ಕಿಂನ ‘ಸ್ವಾತಂತ್ರ’ಕ್ಕೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದೆ.

‘‘ಸಿಕ್ಕಿಂ ವಿವಾದಕ್ಕೆ ಸಂಬಂಧಿಸಿ ಬೀಜಿಂಗ್ ತನ್ನ ನಿಲುವನ್ನು ಪುನರ್‌ಪರಿಶೀಲಿಸಬೇಕು. ಸಿಕ್ಕಿಂಗೆ ಭಾರತದ ಸೇರ್ಪಡೆಯನ್ನು ಚೀನಾವು 2003ರಲ್ಲಿ ಅನುಮೋದಿಸಿದೆಯಾದರೂ, ಈ ವಿಷಯದಲ್ಲಿ ಅದು ತನ್ನ ನಿಲುವನ್ನು ಬದಲಿಸಿಕೊಳ್ಳಬಹುದಾಗಿದೆ’’ ಎಂದು ‘ಗ್ಲೋಬಲ್ ಟೈಮ್ಸ್’ನ ಸಂಪಾದಕೀಯವೊಂದು ತಿಳಿಸಿದೆ.

‘‘ಹೊಸದಿಲ್ಲಿಯ ‘ಪ್ರಾದೇಶಿಕ ಯಜಮಾನನ ಮನೋಭಾವ’ ವಿಸ್ತರಿಸುತ್ತಿದ್ದು, ಅದು ಈಗ ಒಂದು ನಿರ್ಣಾಯಕ ಹಂತಕ್ಕೆ ಬಂದಿದೆ ಹಾಗೂ ಅದು ತನ್ನ ಪ್ರಚೋದನೆಗಳಿಗಾಗಿ ಬೆಲೆ ತೆರಬೇಕಾಗಿದೆ’’ ಎಂದು ಪತ್ರಿಕೆ ಕೆಂಡ ಕಾರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X