Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದ ಜಿಎಸ್‌ಟಿ ಒಂದು ಅಣಕ:...

ಮೋದಿ ಸರಕಾರದ ಜಿಎಸ್‌ಟಿ ಒಂದು ಅಣಕ: ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ6 July 2017 7:34 PM IST
share
ಮೋದಿ ಸರಕಾರದ ಜಿಎಸ್‌ಟಿ ಒಂದು ಅಣಕ: ಚಿದಂಬರಂ

ಹೊಸದಿಲ್ಲಿ, ಜು.6: ಮೋದಿ ಸರಕಾರದ ಜಿಎಸ್‌ಟಿ ಅತ್ಯಂತ ದೋಷಯುಕ್ತವಾಗಿದ್ದು , ಏಳಕ್ಕೂ ಹೆಚ್ಚು ತೆರಿಗೆ ಇರುವ ಕಾರಣ ಇದನ್ನು ‘ಒಂದು ದೇಶ ಒಂದು ತೆರಿಗೆ’ ಎಂದು ವರ್ಗೀಕರಿಸಲಾಗದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.

 ತೆರಿಗೆ ದರ ಕಡಿಮೆಗೊಳಿಸಬೇಕೆಂದು ಮತ್ತು ಗರಿಷ್ಠ ತೆರಿಗೆ ಮಿತಿ ಶೇ.18 ಇರಬೇಕೆಂದು ಕಾಂಗ್ರೆಸ್ ಒತ್ತಾಯಿಸಲಿದೆ . ಅಲ್ಲದೆ ಪೆಟ್ರೋಲಿಯಂ ಉತ್ಪನ್ನಗಳು, ಇಲೆಕ್ಟ್ರಿಸಿಟಿ, ರಿಯಲ್ ಎಸ್ಟೇಟ್ ವ್ಯವಹಾರವನ್ನೂ ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ನಾವು ಬಯಸುತ್ತೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ವಿತ್ತ ಸಚಿವ ಚಿದಂಬರಂ ಹೇಳಿದ್ದಾರೆ.

  ಇದೊಂದು ಅತ್ಯಂತ ಅಪೂರ್ಣ , ದೋಷಯುಕ್ತ ನಿಯಮವಾಗಿದೆ. ಯುಪಿಎ ಪರಿಕಲ್ಪನೆಯ ಜಿಎಸ್‌ಟಿ ಇದಾಗಿಲ್ಲ. ಏಳು ಅಥವಾ ಅದಕ್ಕಿಂತಲೂ ಹೆಚ್ಚಿನ ತೆರಿಗೆ ಪ್ರಮಾಣ ಇರುವ ಇದು ಜಿಎಸ್‌ಟಿಯ ಅಣಕವಾಗಿದೆ. 0.25, 3,5,12,18,28 ಮತ್ತು 40 ಈ ಪ್ರಮಾಣದಲ್ಲಿ ತೆರಿಗೆ ವಿಧಿಸಬಹುದು. ಅಲ್ಲದೆ ರಾಜ್ಯ ಸರಕಾರದ ನಿರ್ದೇಶನಕ್ಕೆ ಅನುಗುಣವಾಗಿ ಅದಕ್ಕಿಂತಲೂ ಹೆಚ್ಚು ಇರಬಹುದು. ಹೀಗಿರುವಾಗ ಇದನ್ನು ‘ಒಂದು ದೇಶ, ಒಂದು ತೆರಿಗೆ’ ಎಂದು ಹೇಗೆ ಕರೆಯಲು ಸಾಧ್ಯ ಎಂದವರು ಪ್ರಶ್ನಿಸಿದರು.

   ಜಿಎಸ್‌ಟಿ ಜಾರಿಯ ಬಳಿಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಎಚ್ಚರಿಕೆಯಿಂದ ಗಮನಿಸಲಿದೆ ಮತ್ತು ಸಣ್ಣ , ಮಧ್ಯಮ ವರ್ಗದ , ಅಂತರಾಜ್ಯ ವ್ಯಾಪಾರಿಗಳು ಹಾಗೂ ಗ್ರಾಹಕರ ಆತಂಕ ಮತ್ತು ಅಸಮಾಧಾನಗಳಿಗೆ ಧ್ವನಿಯಾಗಲಿದೆ ಎಂದು ಚಿದಂಬರಂ ತಿಳಿಸಿದರು.

   ಜಿಎಸ್‌ಟಿ ಜಾರಿಯ ಬಗ್ಗೆ ಅಧಿಕಾರಿಗಳು ಹಾಗೂ ವ್ಯಾಪಾರಿಗಳು ಸಿದ್ಧಗೊಂಡಿರಲಿಲ್ಲ. ಜಿಎಸ್‌ಟಿಯನ್ನು ತರಾತುರಿಯಲ್ಲಿ ಜಾರಿಗೊಳಿಸುವ ಬದಲು ಎರಡು ತಿಂಗಳು ಮುಂದೂಡಬೇಕಿತ್ತು. ಸರಕು ಸೇವಾ ತೆರಿಗೆ ಅಂತರ್ಜಾಲವನ್ನು ಪರೀಕ್ಷಾರ್ಥ ನಡೆಸಬೇಕಿತ್ತು ಎಂದ ಅವರು, ಜಿಎಸ್‌ಟಿ ಕಾಂಗ್ರೆಸ್ ಕಲ್ಪನೆಯ ಕೂಸಾಗಿದೆ ಎಂಬುದನ್ನು ತಿಳಿಸಲು ಮತ್ತು ನಿಜವಾದ ಜಿಎಸ್‌ಟಿ ಜಾರಿಗೆ ಬರಬೇಕೆಂದು ಒತ್ತಾಯಿಸಿ ದೇಶಾದ್ಯಂತ ಸಮ್ಮೇಳನಗಳನ್ನು ಆಯೋಜಿಸಲಾಗುವುದು ಎಂದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರದ ಅವಧಿಯಲ್ಲಿ ಪರಿಕಲ್ಪಿಸಲಾದ ಜಿಎಸ್‌ಟಿ ಇದಲ್ಲ ಎಂದು ಬಿಜೆಪಿ ನಾಯಕ ಮತ್ತು ಮಾಜಿ ವಿತ್ತ ಸಚಿವ ಯಶವಂತ್ ಸಿನ್ಹ ಅವರೇ ಹೇಳಿದ್ದಾರೆ ಎಂದು ಚಿದಂಬರಂ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X