Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2016ರ ಚುನಾವಣೆಗಳಿಗಾಗಿ ಕೇವಲ 355 ಕೋ.ರೂ...

2016ರ ಚುನಾವಣೆಗಳಿಗಾಗಿ ಕೇವಲ 355 ಕೋ.ರೂ ಸಂಗ್ರಹಿಸಿದ್ದ ಪಕ್ಷಗಳು ವ್ಯಯಿಸಿದ್ದು 573 ಕೋ.ರೂ!

ವಾರ್ತಾಭಾರತಿವಾರ್ತಾಭಾರತಿ6 July 2017 8:31 PM IST
share
2016ರ ಚುನಾವಣೆಗಳಿಗಾಗಿ ಕೇವಲ 355 ಕೋ.ರೂ ಸಂಗ್ರಹಿಸಿದ್ದ ಪಕ್ಷಗಳು ವ್ಯಯಿಸಿದ್ದು 573 ಕೋ.ರೂ!

ಹೊಸದಿಲ್ಲಿ,ಜು.6: ಕಳೆದ ವರ್ಷ ನಡೆದಿದ್ದ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಿಗಾಗಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳು ಕೇವಲ 355 ಕೋ.ರೂ.ಗಳ ದೇಣಿಗೆಗಳನ್ನು ಸಂಗ್ರಹಿಸಿದ್ದವಾದರೂ, 573.24 ಕೋ.ರೂ.ಗಳನ್ನು ವ್ಯಯಿಸಿದ್ದವು.
ಈ ಪೈಕಿ ರಾಷ್ಟ್ರೀಯ ಪಕ್ಷಗಳು ಒಟ್ಟು 287.89 ಕೋ.ರೂ.ಗಳನ್ನು ಸಂಗ್ರಹಿಸಿ 188.12 ಕೋ.ರೂ.ಗಳನ್ನು ವ್ಯಯಿಸಿದ್ದರೆ, ಪ್ರಾದೇಶಿಕ ಪಕ್ಷಗಳು ಒಟ್ಟು 67.22 ಕೋ.ರೂ.ಗಳನ್ನು ಸಂಗ್ರಹಿಸಿ 213.97 ಕೋ.ರೂ.ಗಳನ್ನು ವೆಚ್ಚ ಮಾಡಿದ್ದವು ಎಂದು ಚಿಂತನ ಚಿಲುಮೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ವರದಿಯು ತಿಳಿಸಿದೆ.

ಹಲವು ಪಕ್ಷಗಳು ನಗದು/ಚೆಕ್ ಮೂಲಕ ತಮ್ಮ ಚುನಾವಣಾ ವೆಚ್ಚವನ್ನು ಘೋಷಿಸುವಾಗ ತಮ್ಮ ಅಭ್ಯರ್ಥಿಗಳಿಗಾಗಿ ತಾವು ಮಾಡಿರುವ ವೆಚ್ಚಗಳನ್ನು ಸೇರಿಸಿಲ್ಲ. ಹೀಗಾಗಿ ನಗದು/ಚೆಕ್ ಮೂಲಕ (402.09 ಕೋ.ರೂ.) ಮತ್ತು ವಿವಿಧ ಶೀರ್ಷಿಕೆಗಳಡಿ (573.24 ಕೋ.ರೂ.) ಒಟ್ಟು ವೆಚ್ಚದಲ್ಲಿ ವ್ಯತ್ಯಾಸವಿದೆ ಎಂದು ವರದಿಯು ಹೇಳಿದೆ.

2016ರ ವಿಧಾನಸಭಾ ಚುನಾವಣೆಗಳಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಪ್ರಚಾರ, ಪ್ರಯಾಣ ವೆಚ್ಚ, ಇತರ ವೆಚ್ಚಗಳು ಮತ್ತು ಅಭ್ಯರ್ಥಿಗಳಿಗೆ ನೀಡಿದ ಮೊತ್ತ ಸೇರಿದಂತೆ ಒಟ್ಟು 573.24 ಕೋ.ರೂ.ಗಳನ್ನು ಖರ್ಚು ಮಾಡಿವೆ.

 ಕೇಂದ್ರ ಮತ್ತು ರಾಜ್ಯಮಟ್ಟಗಳಲ್ಲಿ ಆರು ರಾಷ್ಟ್ರೀಯ ಪಕ್ಷಗಳ ಪೈಕಿ ಬಿಜೆಪಿಯು 131.72 ಕೋ.ರೂ.ಗಳ ಗರಿಷ್ಠ ಮೊತ್ತವನ್ನು ಸಂಗ್ರಹಿಸಿ ಒಟ್ಟು 112.14 ಕೋ.ರೂ.ಗಳನ್ನು ಖರ್ಚು ಮಾಡಿದ್ದರೆ, 94.23 ಕೋ.ರೂ.ದೇಣಿಗೆ ಸಂಗ್ರಹದೊಂದಿಗೆ ಎರಡನೇ ಸ್ಥಾನದಲ್ಲಿ ರುವ ಕಾಂಗ್ರೆಸ್ 41.49 ಕೋ.ರೂ.ಗಳನ್ನು ವ್ಯಯಿಸಿದೆ.

ಪ್ರಾದೇಶಿಕ ಪಕ್ಷಗಳ ಪೈಕಿ ಎಸ್‌ಪಿ ಗರಿಷ್ಠ ದೇಣಿಗೆ (35.66 ಕೋ.ರೂ.) ಸಂಗ್ರಹಿಸಿ ದ್ದರೆ ಡಿಎಂಕೆ ಅತ್ಯಧಿಕ ಹಣ (97.34 ಕೋ.ರೂ.)ವನ್ನು ವ್ಯಯಿಸಿದೆ. ಎಐಎಡಿಎಂಕೆ 64.72 ಕೋ.ರೂ.ಗಳನ್ನು ಖರ್ಚು ಮಾಡಿತ್ತು.

ಸಿಪಿಎಂನ ಕೇರಳ ಘಟಕವು ಪಕ್ಷದ ಒಟ್ಟು ದೇಣಿಗೆಯ ಶೇ.55.49(28.79ಕೋ.ರೂ.) ಸಂಗ್ರಹಿಸಿದ್ದರೆ ಪ.ಬಂಗಾಳ ಘಟಕವು ಶೇ.33.81(17.54 ಕೋ.ರೂ.)ರಷ್ಟು ಕೊಡುಗೆ ಯನ್ನು ನೀಡಿತ್ತು.

ಚುನಾವಣೆಗಳಿಗಾಗಿ ತಾನು ಯಾವುದೇ ದೇಣಿಗೆಗಳನ್ನು ಸಂಗ್ರಹಿಸಿಲ್ಲ ಎಂದು ಬಿಎಸ್‌ಪಿ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X