Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಷ್ಟವನ್ನು ತಪ್ಪಿಸಲು ವಂಚನೆಯನ್ನು 3...

ನಷ್ಟವನ್ನು ತಪ್ಪಿಸಲು ವಂಚನೆಯನ್ನು 3 ದಿನಗಳಲ್ಲಿ ವರದಿ ಮಾಡಿ: ಗ್ರಾಹಕರಿಗೆ ಆರ್‌ಬಿಐ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 July 2017 8:58 PM IST
share
ನಷ್ಟವನ್ನು ತಪ್ಪಿಸಲು ವಂಚನೆಯನ್ನು 3 ದಿನಗಳಲ್ಲಿ  ವರದಿ ಮಾಡಿ: ಗ್ರಾಹಕರಿಗೆ ಆರ್‌ಬಿಐ ಸೂಚನೆ

ಹೊಸದಿಲ್ಲಿ,ಜು.6: ಅನಧಿಕೃತ ಇಲೆಕ್ಟ್ರಾನಿಕ್ ಬ್ಯಾಂಕಿಂಗ್ ವಹಿವಾಟುಗಳ ಬಗ್ಗೆ ಮೂರು ದಿನಗಳಲ್ಲಿ ದೂರು ಸಲ್ಲಿಸಿದರೆ ಗ್ರಾಹಕರು ಯಾವುದೇ ನಷ್ಟವನ್ನು ಅನುಭವಿಸು ವುದಿಲ್ಲ ಮತ್ತು ವಂಚನೆಯ ಮೊತ್ತವನ್ನು 8-10 ದಿನಗಳಲ್ಲಿ ಸಂಬಂಧಿತ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಆರ್‌ಬಿಐ ಗುರುವಾರ ತಿಳಿಸಿದೆ.

ಮೂರನೇ ವ್ಯಕ್ತಿಯಿಂದ ವಂಚನೆಯ ಕುರಿತು ನಾಲ್ಕರಿಂದ ಏಳು ಕೆಲಸದ ದಿನಗಳಷ್ಟು ವಿಳಂಬವಾಗಿ ದೂರು ಸಲ್ಲಿಸಿದರೆ ಗ್ರಾಹಕರು 25,000 ರೂ.ವರೆಗಿನ ನಷ್ಟವನ್ನು ಭರಿಸಬೇಕಾಗುತ್ತದೆ.

 ಆದರೆ ಖಾತೆದಾರನ ಅಲಕ್ಷತೆಯಿಂದ (ಅನಧಿಕೃತ ವ್ಯಕ್ತಿಗಳೊಂದಿಗೆ ಖಾತೆಯ ಅಥವಾ ಎಟಿಎಂ ಮಾಹಿತಿಗಳನ್ನು ಹಂಚಿಕೊಂಡಂತಹ) ನಷ್ಟವುಂಟಾದರೆ ಅನಧಿಕೃತ ವಹಿವಾಟಿನ ಬಗ್ಗೆ ಬ್ಯಾಂಕಿಗೆ ದೂರು ಸಲ್ಲಿಸುವವರೆಗಿನ ಸಂಪೂರ್ಣ ನಷ್ಟಕ್ಕೇ ಆತನೇ ಹೊಣೆಗಾರನಾಗುತ್ತಾನೆ. ಅನಧಿಕೃತ ವಹಿವಾಟಿನ ಕುರಿತು ಬ್ಯಾಂಕಿಗೆ ದೂರು ಸಲ್ಲಿಸಿದ ಬಳಿಕ ಯಾವುದೇ ನಷ್ಟವುಂಟಾದರೆ ಅದನ್ನು ಬ್ಯಾಂಕು ಭರಿಸುತ್ತದೆ ಎಂದು ಆರ್‌ಬಿಐ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

ಮೂರನೇ ವ್ಯಕ್ತಿಯು ಮಾಡುವ ವಂಚನೆಯಲ್ಲಿ ಬ್ಯಾಂಕ್ ಮತ್ತು ಗ್ರಾಹಕನ ಯಾವುದೇ ದೋಷವಿರದೆ,ಸಿಸ್ಟಮ್‌ನಲ್ಲಿಯೇ ಎಲ್ಲೋ ದೋಷವಿದ್ದರೆ ಗ್ರಾಹಕನ ಬಾಧ್ಯತೆ ಶೂನ್ಯವಾಗಿ ರುತ್ತದೆ. ಅಂದರೆ ಆತ ಯಾವುದೇ ನಷ್ಟವನ್ನು ಭರಿಸಬೇಕಿಲ್ಲ. ಆದರೆ ಇಂತಹ ಅನಧಿಕೃತ ವಹಿವಾಟಿನ ಬಗ್ಗೆ ಬ್ಯಾಂಕಿನಿಂದ ಮಾಹಿತಿ ಲಭಿಸಿದ ಮೂರು ಕೆಲಸದ ದಿನಗಳೊಳಗೆ ಗ್ರಾಹಕರು ಬ್ಯಾಂಕಿಗೆ ದೂರು ಸಲ್ಲಿಸಬೇಕಾಗುತ್ತದೆ.

ಬ್ಯಾಂಕುಗಳ ಶಾಮೀಲಾತಿ, ಅವುಗಳ ನಿರ್ಲಕ್ಷ ಅಥವಾ ದೋಷದಿಂದ ಅನಧಿಕೃತ ವಹಿವಾಟುಗಳು ನಡೆದರೆ ಗ್ರಾಹಕ ಆ ಬಗ್ಗೆ ದೂರು ಸಲ್ಲಿಸಿದ್ದಾನೋ ಇಲ್ಲವೋ ಎನ್ನುವುದನ್ನು ಪರಿಗಣಿಸಿದೆ ಆತ ಶೂನ್ಯ ಬಾಧ್ಯತೆಗೆ ಅರ್ಹನಾಗಿರುತ್ತಾನೆ ಎಂದು ಆರ್‌ಬಿಐ ತಿಳಿಸಿದೆ.

ವಂಚನೆಯ ಕುರಿತು ಏಳು ದಿನಗಳ ನಂತರ ದೂರು ಸಲ್ಲಿಸಿದರೆ ಬ್ಯಾಂಕ್‌ನ ಆಡಳಿತ ಮಂಡಳಿಯು ಒಪ್ಪಿಕೊಂಡಿರುವ ನೀತಿಯಂತೆ ಗ್ರಾಹಕನ ಬಾಧ್ಯತೆಯನ್ನು ನಿರ್ಧರಿಸಲಾ ಗುವುದು. ಇಂತಹ ಪ್ರಕರಣಗಳಲ್ಲಿ ಉಳಿತಾಯ ಖಾತೆಗಳ ಗ್ರಾಹಕರು ಭರಿಸಬೇಕಾದ ನಷ್ಟದ ಮೊತ್ತ ಗರಿಷ್ಠ 10,000 ರೂ.ಗಳಾಗಿರುತ್ತದೆ.

ಬ್ಯಾಂಕುಗಳು ಎಸ್‌ಎಂಎಸ್ ಎಚ್ಚರಿಕೆಗಳಿಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿ ಕೊಳ್ಳುವಂತೆ ತಮ್ಮ ಗ್ರಾಹಕರಿಗೆ ಸೂಚಿಸಬೇಕು ಮತ್ತು ಇಲೆಕ್ಟ್ರಾನಿಕ್ ಬ್ಯಾಂಕಿಂಗ್ ವ್ಯವಹಾರಗಳಿಗಾಗಿ ಇ-ಮೇಲ್ ಐಡಿಗಳು ಲಭ್ಯವಿದ್ದರೆ ಇ-ಮೇಲ್ ಎಚ್ಚರಿಕೆಗಳನ್ನು ಕಳುಹಿಸಬಹುದಾಗಿದೆ ಎಂದು ಆರ್‌ಬಿಐ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X