Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕಾರಿಯ ಮಗನಿಗೆ ಸಿಗದ ಸೀಟು: ಕಾಲೇಜಿಗೆ...

ಅಧಿಕಾರಿಯ ಮಗನಿಗೆ ಸಿಗದ ಸೀಟು: ಕಾಲೇಜಿಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ8 July 2017 4:26 PM IST
share
ಅಧಿಕಾರಿಯ ಮಗನಿಗೆ ಸಿಗದ ಸೀಟು: ಕಾಲೇಜಿಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು

ಚೇರ್ತಲ(ಕೇರಳ),8: ಸೈಂಟ್ ಮೈಕಲ್ಸ್ ಕಾಲೇಜಿನ ಕೆಮಿಸ್ಟ್ರಿ ಲ್ಯಾಬ್‍ನಲ್ಲಿ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಇಬ್ಬರು ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.  ಚೇರ್ತಲ ಎಕ್ಸೈಸ್ ಸರ್ಕಲ್‍ಇನ್ಸ್‍ಪೆಕ್ಟರ್ ಕೆ.ಟಿ. ಜೇಮ್ಸ್, ಸಿವಿಲ  ಅಬಕಾರಿ  ಅಧಿಕಾರಿ. ಎ. ಥಾಮಸ್‍ರನ್ನು ಅಬಕಾರಿ ಇಲಾಖೆ ಕಮಿಶನರ್ ಅಮಾನತುಗೊಳಿಸಿದ್ದಾರೆ. ಸಹೋದ್ಯೋಗಿಯ ಮಗನಿಗೆ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ ಎನ್ನುವ ಕೋಪದಲ್ಲಿ ಅಬಕಾರಿ ಪೊಲೀಸರು ಕಾಲೇಜಿಗೆ ದಾಳಿ ನಡೆಸಿದ್ದಾರೆ ಎಂದು  ಕಾಲೇಜು ಮ್ಯಾನೇಜರ್ , ಪ್ರಿನ್ಸಿಪಾಲ್ ಮುಖ್ಯಮಂತ್ರಿಗೆ ಹಾಗೂ ಎಕ್ಸೈಸ್ ಕಮಿಶನರ್‍ಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

ಚೇರ್ತಲ ಅಬಕಾರಿ ಸರ್ಕಲ್ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಕಾಲೇಜಿನಲ್ಲಿ ತಪಾಸಣೆ ನಡೆಸಲಾಗಿತ್ತು. ಪಳ್ಳಿಪ್ಪುರಂ ಎಂಬಲ್ಲಿನ ಚೇರ್ತಲ ಠಾಣೆಯ ಎಕ್ಸೈಸ್ ಸಿವಿಲ್ ಅಧಿಕಾರಿ ಕೆಲವು ದಿವಸದ ಹಿಂದೆ ಕಾಲೇಜಿಗೆ ಬಂದು ಮ್ಯಾನೇಜರ್ ಫಾ. ನೆಲ್ಸನ್‍ರಲ್ಲಿ ತನ್ನ ಪುತ್ರನಿಗೆ ಡಿಗ್ರಿಗೆ ಪ್ರವೇಶ ನೀಡಬೇಕೆಂದು  ಮನವಿಮಾಡಿದ್ದರು.  ಖಚಿತವಾಗಿ ಹೇಳದೆ ನೋಡಿ ತಿಳಿಸುತ್ತೇವೆ ಎಂದುಮ್ಯಾನೇಜರ್ ಹೇಳಿದ್ದರು. ಆದರೆ ಮಂಗಳವಾರ ಸಂಜೆ ಎಕ್ಸೈಸ್ ಕಚೇರಿಯಿಂದ ಪ್ರಿನ್ಸಿಪಾಲ್ ಡಾ.ವಿ. ಮ್ಯಾಥ್ಯೂರಿಗೆ ಫೋನ್ ಮಾಡಿ ಮಗನಿಗೆ ಅಡ್ಮಿಶನ್ ಕೊಡದಿದ್ದರೆ ಕೆಮಿಸ್ಟ್ರಿ ಲ್ಯಾಬ್‍ಗೆ ದಾಳಿ ಮಾಡಿಸುತ್ತೇನೆ ಎಂದು  ಬೆದರಿಕೆಯೊಡ್ಡಿದ್ದರು.  ಬುಧವಾರ ಬೆಳಗ್ಗೆ ಚೇರ್ತಲ ಎಕ್ಸೈಸ್ ಸಿಐ ಕೆ.ಟಿ. ಜೇಮ್ಸ್ ನೇತೃತ್ವದಲ್ಲಿ ಪ್ರಿವಂಟೀವ್ ಆಫೀಸರ್ ಸಹಿತ ಜೀಪ್‍ನಲ್ಲಿ ಬಂದು ಕೆಮಿಸ್ಟ್ರಿ ಲ್ಯಾಬ್‍ನಲ್ಲಿ ಸ್ಪಿರಿಟ್ ಅನಧಿಕೃತವಾಗಿ ಇರಿಸಿದ್ದಾರೆ ಎಂದು ಆರೋಪಿಸಿ ತಪಾಸಣೆ ನಡೆಸಲಾಗಿತ್ತು. ಸೀಟು ಕೊಟ್ಟರೆ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತೇವೆ. ಇಲ್ಲದಿದ್ದರೆ ಪ್ರಾಂಶುಪಾಲರಿಗೆ ಹತ್ತುವರ್ಷ ಜೈಲುಶಿಕ್ಷೆಯಾಗುವಂತಹ ಆರೋಪವನ್ನು ಹೊರಿಸಿ ಕೇಸು ದಾಖಲಿಸುತ್ತೇವೆ ಎಂದು ಬೆದರಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X