Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸದನ ಸಮಿತಿ ರಚಿಸಿ ಶಿಕ್ಷೆಗೆ ಗುರಿ...

ಸದನ ಸಮಿತಿ ರಚಿಸಿ ಶಿಕ್ಷೆಗೆ ಗುರಿ ಮಾಡಿರುವುದು ಸರಿಯಲ್ಲ: ಡಾ.ಸೂರ್ಯಪ್ರಕಾಶ್

ಮಾಧ್ಯಮಗಳ ಮೇಲೆ ನಿಯಂತ್ರಣ

ವಾರ್ತಾಭಾರತಿವಾರ್ತಾಭಾರತಿ8 July 2017 6:06 PM IST
share

ಬೆಂಗಳೂರು, ಜು.8: ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ವಿಧಾನಸಭೆ ರಚಿಸಿರುವ ಜಂಟಿ ಸದನ ಸಮಿತಿಯ ರಚನೆ ಅಗತ್ಯವಿಲ್ಲ. ಈ ಬಗ್ಗೆ ಸರಕಾರ ಪುನರ್ ಪರಿಶೀಲನೆ ನಡೆಸಬೇಕೆಂದು ಕೇಂದ್ರ ಸರಕಾರದ ಪ್ರಸಾರ ಭಾರತಿ ಅಧ್ಯಕ್ಷ ಡಾ.ಸೂರ್ಯಪ್ರಕಾಶ್ ಅಭಿಪ್ರಾಯಿಸಿದ್ದಾರೆ.

ಶನಿವಾರ ನಗಗರದ ಮಿಥಿಕ್ ಸೊಸೈಟಿಯಲ್ಲಿ ವಿಶ್ವ ಸಂವಾದ ಕೇಂದ್ರ ಆಯೋಜಿಸಿದ್ದ ‘ಆದ್ಯ ಪತ್ರಕರ್ತ ನಾರದ ಜಯಂತಿ’ ನಿಮಿತ್ತ ಮಾಧ್ಯಮ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಸರಕಾರಗಳು ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಬಾರದು. ಸಂವಿಧಾನವನ್ನು ಗಟ್ಟಿಗೊಳಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ತರವಾಗಿದೆ ಎಂದು ತಿಳಿಸಿದರು.

ಸದನಕ್ಕೆ ತನ್ನದೇ ಆದ ವಿಶೇಷ ಹಕ್ಕುಗಳಿದ್ದು, ಅದನ್ನು ಉಲ್ಲಂಘಿಸಿದವರನ್ನು ಜೈಲಿಗೆ ಕಳುಹಿಸುವ ಅಥವಾ ವಾಗ್ದಂಡನೆ ವಿಧಿಸುವ ಅಧಿಕಾರ ಅದಕ್ಕಿದೆ ಎಂದು ಹೇಳುತ್ತಾರೆ. ಆದರೆ, ಹಕ್ಕು ಬಾಧ್ಯತಾ ಸಮಿತಿ ಶಿಫಾರಸಿನ ಮೇರೆಗೆ ಪತ್ರಕರ್ತರಾದ ರವಿಬೆಳಗೆರೆ ಹಾಗೂ ಅನಿಲ್ ರಾಜ್‌ಗೆ ಒಂದು ವರ್ಷ ಜೈಲು ಶಿಕ್ಷೆಗೆ ಗುರಿ ಮಾಡಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಜೀವನದಲ್ಲಿ ಒಮ್ಮೆಯಾದರೂ ದೇಶದಲ್ಲಿ ನಡೆದ ತುರ್ತು ಪರಿಸ್ಥಿತಿಯ ಬಗ್ಗೆ ತಿಳಿದುಕೊಳ್ಳಬೇಕು. ಪತ್ರಕರ್ತರು ಆಮಿಷಗಳಿಗೆ ಹಾಗೂ ಲಂಚಕ್ಕೆ ಬಲಿಯಾಗದಿದ್ದರೆ ಮಾತ್ರ ಒಳ್ಳೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಈ ದಿಕ್ಕಿನತ್ತ ಯುವ ಪತ್ರಕರ್ತರು ಚಿಂತಿಸಬೇಕೆಂದು ಎಂದು ಅವರು ಅಭಿಪ್ರಾಯಪಟ್ಟರು.

ಇದೀಗ ದೇಶದಲ್ಲಿ ಪತ್ರಿಕೆ ಓದುಗರ ಸಂಖ್ಯೆ ಹೆಚ್ಚಾಗಿದೆ. ಪ್ರಸ್ತುತ ಆರ್‌ಎನ್‌ಐ ದಾಖಲೆ ಪ್ರಕಾರ 1,10,851 ಪತ್ರಿಕೆಗಳು ನೋಂದಣಿ ಆಗಿವೆ. ಬಹುತೇಕರು ಪತ್ರಿಕೆಗಳ ಮೂಲಕವೇ ಸುದ್ದಿ ಸಮಾಚಾರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅದೇ ರೀತಿ, 30 ಕೋಟಿ ಜನರು ಟಿವಿ ಮಾಧ್ಯಮಗಳನ್ನು ಬಳಕೆ ಮಾಡುತ್ತಿದ್ದು, ಕೇಬಲ್ ಮೂಲಕ ಸಂಪರ್ಕ ಪಡೆದಿದ್ದಾರೆ. ಇದೆಲ್ಲಕ್ಕಿಂತ ಹೆಚ್ಚಾಗಿ ಹೊಸ ಮಾಧ್ಯಮಗಳಾದ ಫೇಸ್‌ಬುಕ್ ಸೇರಿ ಇನ್ನತರೆ ಮಾಧ್ಯಮಗಳು ಸಾರ್ವಜನಿಕರ ಮೆಚ್ಚುಗೆಯನ್ನು ಪಡೆದಿವೆ ಎಂದು ಸೂರ್ಯಪ್ರಕಾಶ್ ಹೇಳಿದರು.

ಈ ವೇಳೆ ಹಿರಿಯ ಪತ್ರಕರ್ತರಾದ ತಿ.ತಾ.ಶರ್ಮ ಹಾಗೂ ಬೆ.ಸು.ನಾ.ಮಲ್ಯ ಅವರ ನೆನಪಿನಲ್ಲಿ ವ್ಯಂಗ್ಯ ಚಿತ್ರಕಾರ ರಾಮಧ್ಯಾನಿ, ಜಿ.ಅನಿಲ್‌ಕುಮಾರ್‌ಗೆ ಗೌರವಿಸಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ಮವೀರ ಸಾಪ್ತಾಹಿಕ ಸಂಪಾದಕ ಜಿ.ಅನಿಲ್‌ಕುಮಾರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X