Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಿಯಾಯಿತಿ ದರದಲ್ಲಿ ಸಿರಿಧಾನ್ಯಗಳ...

ರಿಯಾಯಿತಿ ದರದಲ್ಲಿ ಸಿರಿಧಾನ್ಯಗಳ ಸಂಸ್ಕರಣಾ ಯಂತ್ರೋಪಕರಣಗಳ ವಿತರಣೆಗೆ ಕ್ರಮ: ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ8 July 2017 7:37 PM IST
share
ರಿಯಾಯಿತಿ ದರದಲ್ಲಿ ಸಿರಿಧಾನ್ಯಗಳ ಸಂಸ್ಕರಣಾ ಯಂತ್ರೋಪಕರಣಗಳ ವಿತರಣೆಗೆ ಕ್ರಮ: ಕೃಷ್ಣ ಬೈರೇಗೌಡ

ಬೆಂಗಳೂರು, ಜು. 8: ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸುವ ಹಾಗೂ ಕಡಿಮೆ ದರದಲ್ಲಿ ಕಾಳುಗಳನ್ನು ನೀಡುವ ಉದ್ದೇಶದಿಂದ ಸಂಸ್ಕರಣಾ ಯಂತ್ರೋಪಕರಣಗಳನ್ನು ರಿಯಾಯತಿ ದರದಲ್ಲಿ ರೈತರಿಗೆ ವಿತರಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶನಿವಾರ ನಗರದ ನಾಗರಬಾವಿಯ ಮೈದಾನದಲ್ಲಿ ಸಾವಯವ ಉತ್ಪನ್ನಗಳ ಹಾಗೂ ಸಣ್ಣ ಸಿರಿಧಾನ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆ, ಕೃಷಿಕ್ ಸೊಸೈಟಿ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾವಯವ ಮತ್ತು ಸಿರಿಧಾನ್ಯಗಳ ಸಂಸ್ಕರಣೆಗೆ ಅಗತ್ಯವಾಗಿರುವ ಯಂತ್ರೋಪಕರಣಗಳು ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಇದರಿಂದ ಸಾವಯವ ಸಿರಿಧಾನ್ಯಗಳ ಬೆಲೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೆಚ್ಚಿನ ದರಗಳ ಹಿನ್ನಲೆಯಲ್ಲಿ ಗ್ರಾಹಕರಿಗೆ ಸಿರಿಧಾನ್ಯಗಳು ಗಗನ ಕುಸುಮವಾಗಿ ಪರಿಣಮಿಸಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಲಕ್ಷಕ್ಕೂ ಅಧಿಕ ಮಂದಿ ರೈತರು ಪ್ರಮಾಣೀಕೃತ ಸಾವಯವ ಬೆಳೆಗಾರರಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 12ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳ ಬೆಳೆಗಳನ್ನು ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಸಿರಿಧಾನ್ಯಗಳಿಗೆ ಸೂಕ್ತ ಮಾರುಕಟ್ಟೆ ವಿಸ್ತರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಿರಿಧಾನ್ಯಗಳ ಸಂಸ್ಕರಣೆಗೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಕೃಷಿ ಇಲಾಖೆ ವತಿಯಿಂದ ಅಭಿವೃದ್ದಿಪಡಿಸಲಾಗುತ್ತಿದೆ ಎಂದರು.

ವಸತಿ ಸಚಿವ ಎಂ.ಕೃಷ್ಣಪ್ಪಮಾತನಾಡಿ, ಸಿರಿಧಾನ್ಯಗಳು ನಮ್ಮ ಸಾಂಪ್ರದಾಯಿಕ ಆಹಾರ ಪದ್ಧತಿ. ಆರೋಗ್ಯದ ದೃಷ್ಟಿಯಿಂದ ಆಧುನಿಕ ಜೀವನದಲ್ಲಿ ಸಿರಿಧಾನ್ಯಗಳ ಬಳಕೆ ತೀರಾ ಅಗತ್ಯವಾಗಿದೆ. ಸಿರಿಧಾನ್ಯಗಳ ಬಳಕೆ ಕುರಿತು ಜನರಲ್ಲಿ ಅರಿವು ಮೂಡಿಸುವಲ್ಲಿ ರಾಜ್ಯ ಸರಕಾರ ಮುಂದಿದೆ ಎಂದರು.
 ಕಾರ್ಯಕ್ರಮದಲ್ಲಿ ಶಾಸಕ ಪ್ರಿಯಾಕೃಷ್ಣ, ಸಾವಯವ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X