Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜು.21ರಿಂದ ಮೂರು ದಿನಗಳ ಕಾಲ...

ಜು.21ರಿಂದ ಮೂರು ದಿನಗಳ ಕಾಲ ಡಾ.ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ8 July 2017 7:59 PM IST
share
ಜು.21ರಿಂದ ಮೂರು ದಿನಗಳ ಕಾಲ ಡಾ.ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ

ಬೆಂಗಳೂರು, ಜು.8: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮ ವರ್ಷಾಚರಣೆ ಅಂಗವಾಗಿ ಜು.21ರಿಂದ ಮೂರು ದಿನ ಬೆಂಗಳೂರು ಜಿಕೆವಿಕೆಯ ಸಮಾವೇಶ ಕೇಂದ್ರದಲ್ಲಿ ‘ಸಾಮಾಜಿಕ ನ್ಯಾಯದ ಮರು ಅನುಷ್ಠಾನ-ಅಂಬೇಡ್ಕರ್ ಪುನರ್ ಪ್ರವೇಶ’ ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನದ ಲಾಂಛನ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸಮ್ಮೇಳನದಲ್ಲಿ 2ಸಾವಿರಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದು, 83ಅಂತಾರಾಷ್ಟ್ರೀಯ, 149 ರಾಷ್ಟ್ರೀಯ ಮತ್ತು 80 ಮಂದಿ ರಾಜ್ಯದ ಭಾಷಣಕಾರರು ವಿಷಯ ಮಂಡಿಸಲಿದ್ದಾರೆ ಎಂದರು.

ಉದ್ಘಾಟಣೆ: ಅಂತಾರಾಷ್ಟ್ರೀಯ ಸಮಾವೇಶದ ಉದ್ಘಾಟನೆಗೆ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ನ್ಯಾಯವಾದಿ ಮಾರ್ಟಿನ್ ಲೂಥರ್ ಕಿಂಗ್-3, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ಅವರು ವಿವರಿಸಿದರು.

ಸಾಮಾಜಿಕ ನ್ಯಾಯದ ಮೇಲೆ ದಬ್ಬಾಳಿಕೆ, ಅಸ್ಪಶ್ಯತೆ, ಅಸಮಾನತೆ ಸಂದರ್ಭದಲ್ಲಿ ಈ ಸಮ್ಮೇಳನ ನಡೆಯುತ್ತಿದ್ದು, ಶೋಷಣೆ ರಹಿತ ಸಮಾಜ, ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಅನ್ವೇಷಣೆ, ಸಾಂವಿಧಾನಿಕ, ಸಾಂಸ್ಥಿಕ ಮತ್ತು ನೀತಿ ನಿರೂಪಣೆಗೆ ಸೇತುವೆಯಾಗುವುದು ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಅಪೇಕ್ಷೆಪಟ್ಟರು.

‘ನೀನು ಯಾರೇ ಆಗಿರು, ಎಲ್ಲಿಂದಲೇ ಬಂದಿರು ನೀನು ಈ ದೇಶದಲ್ಲಿ ನ್ಯಾಯಯುತವಾದ ಸಮಾನತೆಗೆ ಅರ್ಹನಾಗಿರುತ್ತೀಯ’ ಎಂಬ ಅಂಬೇಡ್ಕರ್ ಅವರ ಮಾತಿನ ಸ್ಫೂರ್ತಿಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನದ ಆದರ್ಶ. ಮಾತ್ರವಲ್ಲ ದೇಶವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯುವ ಭರವಸೆಯನ್ನು ವಿಶ್ವಕ್ಕೆ ಸಾರುವುದಾಗಿದೆ ಎಂದು ಸಿದ್ದರಾಮಯ್ಯ ನುಡಿದರು.

ಪ್ರೊ.ಸುಖದೇವ್ ತೋರಟ್, ಅರುಣರಾಯ್, ನಿಖಿಲ್‌ಡೇ, ಪ್ರೊ.ಶಿವ ವಿಶ್ವನಾಥನ್, ಡಾ.ಶಶಿತರೂರ್, ಕೆ.ರಾಜು, ಸಲ್ಮಾನ್ ಖುರ್ಷಿದ್, ಪ್ರಕಾಶ್ ಅಂಬೇಡ್ಕರ್, ಆನಂದ್ ತೇಲ್‌ತುಂಬ್ಡೆ, ವಿಲ್ಸನ್ ಬೆಜವಾಡ, ಪ್ರೊ.ಆಕಾಶ್ ರಾಥೋಡ್ ಸೇರಿದಂತೆ ದೇಶ-ವಿದೇಶಗಳ ಹಲವು ಚಿಂತಕರು ಪಾಲ್ಗೊಳ್ಳಲಿದ್ದಾರೆ ಎಂದರು.

ದೇವನೂರ ಮಹಾದೇವ, ಪ್ರೊ.ರವಿವರ್ಮ ಕುಮಾರ್, ಡಾ.ಚಂದ್ರಶೇಖರ ಕಂಬಾರ, ಡಾ.ಸಿದ್ದಲಿಂಗಯ್ಯ. ಡಾ.ಕೆ.ಮರುಳ ಸಿದ್ದಪ್ಪ, ಪ್ರೊ.ಜಿ.ಕೆ.ಗೋವಿಂದರಾವ್, ದಿನೇಶ್ ಅಮೀನ್ ಮಟ್ಟು, ಪ್ರೊ.ರಹಮತ್ ತರೀಕೆರೆ, ನ್ಯಾ.ನಾಗಮೋಹನ್ ದಾಸ್, ಬಿ.ಟಿ.ಲಲಿತಾ ನಾಯಕ್, ಮೊಗಳ್ಳಿ ಗಣೇಶ್, ಗೌರಿ ಲಂಕೇಶ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ನೋಂದಣಿwww.questforequity. org, www.facebook.com/ questforequity, : ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹಾಗೂ ಸಮ್ಮೇಳನದ ಕುರಿತ ಹೆಚ್ಚಿನ ಮಾಹಿತಿಗಾಗಿ ಟ್ವಿಟರ್ www. twitter.com/ quest4equity/@quest4equity ಸಂಪರ್ಕಿಸಬಹುದು ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಎಚ್.ಆಂಜನೇಯ, ಟಿ.ಬಿ.ಜಯಚಂದ್ರ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ರಾಜ್ಯಸಭಾ ಸದಸ್ಯ ಪ್ರೊ. ರಾಜೀವ್‌ಗೌಡ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಸಲಹೆಗಾರ ಇ.ವೆಂಕಟಯ್ಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X