Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 17ನೇ ಶತಮಾನದಲ್ಲಿ ಟಿಪ್ಪು ಸುಲ್ತಾನ್...

17ನೇ ಶತಮಾನದಲ್ಲಿ ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಧ್ವಂಸ

ವಾರ್ತಾಭಾರತಿವಾರ್ತಾಭಾರತಿ8 July 2017 9:06 PM IST
share
17ನೇ ಶತಮಾನದಲ್ಲಿ ಟಿಪ್ಪು ಸುಲ್ತಾನ್ ನಿರ್ಮಿಸಿದ್ದ ಕೋಟೆ ಧ್ವಂಸ

ಮೂಡುಬಿದಿರೆ, ಜು.8:17ನೇ ಶತಮಾನದಲ್ಲಿ ಟಿಪ್ಪು ಸುಲ್ತಾನ್‌ರಿಂದ ನಿರ್ಮಿತವಾಗಿರುವುದೆಂದು ಹೇಳಲಾಗುವ ಮೂಡುಬಿದಿರೆ ಕೋಟೆಬಾಗಿಲಿನಲ್ಲಿರುವ ಐತಿಹಾಸಿಕ ಕೋಟೆಯ ಉಳಿದಿರುವ ಅಲ್ಪಭಾಗವನ್ನು ಇಂದು ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಸ್ಥಳೀಯರು ಮಾಧ್ಯಮ ಪ್ರತಿನಿಧಿಗಳಿಗೆ ದೂರು ನೀಡಿದ್ದು, ಯಂತ್ರಗಳನ್ನು ಬಳಸಿ ಕೋಟೆ ಒಡೆದರೆ ಸುದ್ದಿಯಾಗುತ್ತದೆ ಎಂದು ಕೂಲಿಯಾಳುಗಳನ್ನು ಬಳಸಿ ಬೃಹತ್ ಕೋಟೆಯನ್ನು ಉರುಳಿಸಲಾಗಿದೆ.

ಒಂದುವರೆ ಎಕರೆಯಷ್ಟು ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿದ್ದ ಈ ಕೋಟೆಯನ್ನು ಕೆಳದಿಯ ವೆಂಕಪ್ಪ ನಾಯಕ ಕಟ್ಟಿರಬಹುದು ಎಂದು ಇತಿಹಾಸ ತಜ್ಞರು ಅಭಿಪ್ರಾಯಪಡುತ್ತಾರಾದರೂ, ಟಿಪ್ಪು ಸುಲ್ತಾನ್ ಪ್ರಾಬಲ್ಯವಿದ್ದ ಸಮಯದಲ್ಲಿ ಈ ಕೋಟೆ ಟಿಪ್ಪು ಸುಲ್ತಾನ್ ಆದೇಶದಂತೆ ನಿರ್ಮಾಣಗೊಂಡಿದೆ ಎಂಬ ಅಭಿಪ್ರಾಯವೂ ಇದೆ.

ಆದರೆ ಈ ಜಾಗವು ಪುರಾತತ್ವ ಇಲಾಖೆಯ ಅಧೀನದಲ್ಲಿ ಬರದೇ ಇರುವುದರಿಂದ ಯಾವುದೇ ಕೋಟೆಗೆ ಯಾವುದೇ ರಕ್ಷಣೆ ಸಿಗಲಿಲ್ಲ. ಹೀಗಾಗಿ ಕೋಟೆಯ ಒಳಗೆ ಜನವಸತಿ ಆರಂಭಗೊಂಡಿತು. ಮನೆಕಟ್ಟಿ ಕೂತ ಕೆಲ ಕುಟುಂಬಗಳು ಆ ಜಾಗವನ್ನು ತಮ್ಮದೇ ಹೆಸರಿಗೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಕಳೆದ 10 ವರ್ಷಗಳಲ್ಲಿ ಕೋಟೆಯನ್ನು ಸ್ವಲ್ಪ ಸ್ವಲ್ಪವೇ ಧ್ವಂಸಗೊಳಿಸುತ್ತಾ ಬಂದ ಇಲ್ಲಿನ ಕೋಟೆಯೊಳಗಿನ ನಿವಾಸಿಗಳು ಅದರೊಳಗೆಯೇ ಮೊಬೈಲ್ ಟವರ್‌ಗೂ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ವಸತಿ ಸಮುಚ್ಚಯ ನಿರ್ಮಿಸಲಾಗಿದ್ದು, ಜನವಸತಿ ಹಿಂದಿಗಿಂತ ಹೆಚ್ಚಾಗಿದೆ. ಮೂಡುಬಿದಿರೆಯಲ್ಲಿ ಭೂಮಿಗೆ ಚಿನ್ನದ ಬೆಲೆ ಬಂದ ದಿನದಿಂದ ಈ ಜಾಗಕ್ಕೂ ಮೌಲ್ಯ ಹೆಚ್ಚಾಗಿದ್ದು, ಎದುರಿಗಿದ್ದ ಕೋಟೆಯ ಗೋಡೆಯಿಂದಾಗಿ ನಿವಾಸಿಗಳಿಗೆ ಸಮಸ್ಯೆಯುಂಟಾಗಿತ್ತು.

ಐತಿಹಾಸಿಕ ಕೋಟೆ ಇದಾಗಿರುವುದರಿಂದ ವರ್ಷಕ್ಕೊಂದು ಬಾರಿಯಂತೆ ಸ್ವಲ್ಪಸ್ವಲ್ಪವೇ ಕೋಟೆಯ ಗೋಡೆಗಳನ್ನು ಕೆಡವಲಾಗುತ್ತಿತ್ತು. ಇದರ ಜೊತೆಗೆ ಕೋಟೆಯ ಸುತ್ತಲೂ ಇದ್ದ ಕೋಟೆಕಣಿ (ನೀರು ಸಂಗ್ರಹಿಸಿಡುತ್ತಿದ್ದ ಕಂದಕ) ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಮುಚ್ಚಿಹಾಕಲಾಗಿದ್ದು, ಒಂದು ಸಣ್ಣಕುರುಹು ಕೂಡ ಕಾಣಸಿಗುವುದಿಲ್ಲ.

ಕೋಟೆಯನ್ನು ಧ್ವಂಸಗೊಳಿಸಲಾಗುತ್ತಿರವ ಬಗ್ಗೆ ಪುರಸಭಾ ಸದಸ್ಯೆ ರಮಣಿ ಪುರಸಭೆಯ ಅಧಿವೇಶನದಲ್ಲಿ ಧ್ವನಿಯೆತ್ತಿದ್ದರು. ಕೋಟೆಯನ್ನು ರಕ್ಷಿಸದೇ ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದರು. ಸೂಕ್ತ ಕ್ರಮ ಜರುಗಿಸುವ ಬಗ್ಗೆ ಪುರಸಭೆಯಲ್ಲಿ ನಿರ್ಣಯವೂ ಆಗಿತ್ತು.

ಆದರೆ ಕೋಟೆ ಧ್ವಂಸ ನಿರಂತರವಾಗಿ ಮುಂದುವರಿಯುತ್ತಿದ್ದು, ಐತಿಹಾಸಿಕವಾದ ಈ ಕೋಟೆ ಮುಂದೊಂದು ದಿನ ಹೇಳಹೆಸರಿಲ್ಲದಂತೆ ಮಾಯವಾಗುವುದು ನಿಸ್ಸಂಶಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X