Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಮ ಜನ್ಮಭೂಮಿ ಹಿಂದೂಗಳ ಹಕ್ಕು:...

ರಾಮ ಜನ್ಮಭೂಮಿ ಹಿಂದೂಗಳ ಹಕ್ಕು: ಪೇಜಾವರಶ್ರೀ

"ಭಾರತವನ್ನು ಹಿಂದೂರಾಷ್ಟ್ರ ಎನ್ನುವ ಸಂಘಪರಿವಾರದ ಹೇಳಿಕೆಗೆ ಅರ್ಥವಿಲ್ಲ"

ವಾರ್ತಾಭಾರತಿವಾರ್ತಾಭಾರತಿ8 July 2017 9:55 PM IST
share
ರಾಮ ಜನ್ಮಭೂಮಿ ಹಿಂದೂಗಳ ಹಕ್ಕು: ಪೇಜಾವರಶ್ರೀ

ಉಡುಪಿ, ಜು.8: ಅಯೋಧ್ಯೆಯ ರಾಮ ಜನ್ಮಭೂಮಿ ಹಿಂದೂಗಳ ಹಕ್ಕು. ಅದರ ಜಾಗವನ್ನು ಮಸೀದಿ ನಿರ್ಮಿಸಲು ಬಿಟ್ಟುಕೊಡುವುದು ಅಸಾಧ್ಯ ಎಂದು ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥರು ಹೇಳಿದ್ದಾರೆ.

ಶ್ರೀಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಗತಿಪರರು ನನ್ನ ನಿಲುವು ಹಾಗೂ ಮನಸ್ಸನ್ನು ಸರಿಯಾಗಿ ಅರ್ಥಮಾಡಿ ಕೊಳ್ಳಲು ವಿಫಲರಾಗಿದ್ದಾರೆ. ನ್ಯಾಯಾಲಯವೇ ಆ ಜಾಗವನ್ನು ಹಿಂದೂಗಳಿಗೆ ನೀಡಲು ಹಾಗೂ ಅಲ್ಲಿ ರಾಮಮಂದಿರ ಕಟ್ಟಲು ಒಪ್ಪಿಗೆ ನೀಡಿದೆ. ಇಲ್ಲಿ ದೇವಸ್ಥಾನ ಇದ್ದ ಬಗ್ಗೆ ಶಾಸನಗಳ ಪುರಾವೆ ಸಿಕ್ಕಿವೆ. ಎಲ್ಲಾ ವಿಷಯಗಳಲ್ಲೂ ಸೌಹಾರ್ದತೆ ಹಾಗೂ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಆದರೆ ಹಿಂಸಾಚಾರದ ಮೂಲಕ ಸೌಹಾರ್ದತೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು.

ಈ ಸಮಸ್ಯೆಗೆ ಪರಿಹಾರವಿದೆ. ಇದು ಆರಂಭಗೊಂಡ ಸಮಯದಿಂದ ಸಮಿತಿಯ ಒಂದು ಭಾಗವಾಗಿರುವ ನನಗೆ, ಈ ಹಂತದಲ್ಲಿ ಸಮಿತಿಯಿಂದ ದೂರವುಳಿಯಲು ಸಾಧ್ಯವಿಲ್ಲ ಎಂದರು. ಇದರೊಂದಿಗೆ ಈ ಭೂಮಿಯಲ್ಲಿ ರಾಮಮಂದಿರವಿರಬೇಕೆಂದು ತಾವು ಭಾವಿಸುವುದಾಗಿ ನುಡಿದ ಪೇಜಾವರಶ್ರೀ, ಈ ವಿಷಯದಲ್ಲಿ ನ್ಯಾಯ ದೊರೆಯುವವರೆಗೆ ಸೌಹಾರ್ದತೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಹಿಂದೂಗಳು ತಮ್ಮ ಹಕ್ಕನ್ನು ಬಿಟ್ಟುಕೊಟ್ಟು ರಾಮಜನ್ಮಭೂಮಿ ವಿಷಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾಧಿಸಬೇಕೆಂದು ಪ್ರಗತಿಪರರು ಭಾವಿಸಿದ್ದಾರೆ ಎಂದ ಅವರು, ಹಾಗಿದ್ದರೆ ಹಿಂಸಾಚಾರವನ್ನು ನಿಲ್ಲಿಸಲು ಹಾಗೂ ಶಾಂತಿಯನ್ನು ಮರು ಸ್ಥಾಪಿಸಲು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು.

ಸಂಭಾವ್ಯ ಸಾಧ್ಯತೆಗಳ ಕುರಿತು ಯೋಚಿಸಿ ಪ್ರಗತಿಪರರು ತಮ್ಮ ಅಭಿಪ್ರಾಯಗಳನ್ನು ಬದಲಿಸಿಕೊಳ್ಳಲಿ. ಕಾಶ್ಮೀರ ಭಾರತದ ಹಕ್ಕು. ಅದೇ ರೀತಿ ರಾಮಮಂದಿರ ಎಂಬುದು ಹಿಂದೂಗಳ ಹಕ್ಕಾಗಿದೆ ಎಂದು ಪ್ರತಿಪಾದಿಸಿದರು. ಸೌಹಾರ್ದತೆ ಎಂಬ ಸವಲತ್ತಿಗೂ ಮಿತಿ ಇರಬೇಕು ಎಂದರು.

ಹಿಂದೂರಾಷ್ಟ್ರ: ಭಾರತವನ್ನು ಹಿಂದೂರಾಷ್ಟ್ರವೆಂದು ಪ್ರತಿಪಾದಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತವನ್ನು ಕೇವಲ ಹಿಂದೂಗಳ ದೇಶವಾಗಿ ತಾನು ಭಾವಿಸುವುದಿಲ್ಲ ಎಂದರು. ಈ ದೇಶ ಹಲವು ಮತ, ಧರ್ಮಗಳ ಸಂಗಮವಾಗಿದೆ. ಹೀಗಾಗಿ ಸಂಘಪರಿವಾರ ಹೇಳಿದಂತೆ ಭಾರತವನ್ನು ಹಿಂದೂರಾಷ್ಟ್ರ ಎಂದು ಹೇಳಿಕೊಳ್ಳುವಲ್ಲಿ ಯಾವುದೇ ಅರ್ಥವಿಲ್ಲ ಎಂದರು. ಶತಶತಮಾನಗಳಿಂದ ಈ ದೇಶ ಸೌಹಾರ್ದತೆ, ಜಾತ್ಯತೀತತೆಯನ್ನು ಕಾಪಾಡಿಕೊಂಡು ಬಂದಿದೆ. ಈ ಸಂಪ್ರದಾಯ ಮುಂದುವರಿಯಬೇಕು ಎಂದರು.

ಕಲ್ಲಡ್ಕ ಘಟನೆ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಲ್ಲಡ್ಕದಲ್ಲಿ ಅವ್ಯಾಹತವಾಗಿ ನಡೆದಿರುವ ಗಲಭೆ ಕುರಿತು ಪ್ರತಿಕ್ರಿಯಿಸಿದ ಅವರು, ಅಲ್ಲಿ ಕೂಡಲೇ ಶಾಂತಿ ಸಭೆ ನಡೆಯಬೇಕಾಗಿದೆ ಎಂದರು. ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ತಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಮರೆತು, ಈ ಭಾಗದಲ್ಲಿ ಶಾಂತಿಯನ್ನು ಕಾಪಾಡಲು ಕೈಜೋಡಿಸಬೇಕು ಎಂದು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X