Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಗಾಳದಲ್ಲಿ ಬೆಂಕಿ ಹಚ್ಚಲು ಗುಜರಾತ್...

ಬಂಗಾಳದಲ್ಲಿ ಬೆಂಕಿ ಹಚ್ಚಲು ಗುಜರಾತ್ ಗಲಭೆಯ ಫೋಟೊ ಟ್ವೀಟ್ ಮಾಡಿದ ಬಿಜೆಪಿ ನಾಯಕಿ

ಉರಿಯುವ ಬೆಂಕಿಗೆ ತುಪ್ಪ ಸುರಿದ ನೂಪುರ್ ಶರ್ಮಾ ವಿರುದ್ಧ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 July 2017 12:54 PM IST
share
ಬಂಗಾಳದಲ್ಲಿ ಬೆಂಕಿ ಹಚ್ಚಲು ಗುಜರಾತ್ ಗಲಭೆಯ ಫೋಟೊ ಟ್ವೀಟ್ ಮಾಡಿದ ಬಿಜೆಪಿ ನಾಯಕಿ

ಹೊಸದಿಲ್ಲಿ, ಜು.9: ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಫೋಟೊಗಳನ್ನು ಪೋಸ್ಟ್ ಮಾಡಿ, ದೇಶದ ಕೆಲವೆಡೆ ನಡೆಯುತ್ತಿರುವ ಗಲಭೆಗಳಿಗೆ ಮಸಾಲೆ ಅರೆಯುವ ಕೆಲಸವನ್ನು ಬಲಪಂಥೀಯರು, ಬಿಜೆಪಿಗರು ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗಂತೂ ಈ ಪರಿಪಾಠ ಹೆಚ್ಚುತ್ತಲೇ ಇವೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಕೋಮು ಗಲಭೆಯ ಲಾಭ ಪಡೆಯಲು 2002ರಲ್ಲಿ ಮೋದಿ ಅಧಿಕಾರವಧಿಯಲ್ಲಿ ಗುಜರಾತ್ ನಲ್ಲಿ ನಡೆದ ಗಲಭೆಯ ಫೋಟೊ ಪೋಸ್ಟ್ ಮಾಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ, “ಬಂಗಾಳವನ್ನು. ಹಿಂದೂಗಳನ್ನು ಉಳಿಸಿ” ಎಂದು ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಸುಮಾರು 2000 ಜನರ ಮಾರಣಹೋಮಕ್ಕೆ ಕಾರಣವಾದ ಗುಜರಾತ್ ಗಲಭೆಯ ಸಂದರ್ಭದ ಫೋಟೊವೊಂದನ್ನು ಟ್ವೀಟ್ ಮಾಡಿರುವ ನೂಪುರ್ ಶರ್ಮಾ. “ಮಾತನಾಡಿ, ಈಗಾಗಲೇ ತಡವಾಗಿದೆ. ಜಂತರ್ ಮಂತರ್ ನಲ್ಲಿ ಇಂದು ಸಂಜೆ 5 ಗಂಟೆಗೆ ಒಗ್ಗೂಡಿ, #ಬಂಗಾಳವನ್ನು ಉಳಿಸಿ #ಹಿಂದೂಗಳನ್ನು ಉಳಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಆಕೆ ಪೋಸ್ಟ್ ಮಾಡಿರುವ ಫೋಟೊಗಳು ಬಹುತೇಕ ಮುಸ್ಲಿಮರ ಹತ್ಯೆಗೆ ಕಾರಣವಾದ ಗುಜರಾತ್ ಗಲಭೆಯ ಸಂದರ್ಭದ್ದಾಗಿದೆ. ಈ ಹಿಂದೆ ಈ ಫೊಟೊ ಹಲವಾರು ಪತ್ರಿಕೆ, ವೆಬ್ ಸೈಟ್ ಗಳಲ್ಲಿ ಪ್ರಕಟವಾಗಿದೆ. 2016ರ ಜೂನ್ 2ರಂದು ನ್ಯೂಯಾರ್ಕ್ ಟೈಮ್ಸ್ ನಲ್ಲಿ ಪ್ರಕಟವಾದ ಅಂಕಟವೊಂದರಲ್ಲೂ ಇದೇ ಫೊಟೊ ಬಳಕೆಯಾಗಿದೆ. “ಭಾರತದ ಗುಜರಾತ್ ನಲ್ಲಿ ಮುಸ್ಲಿಮರ ಮಾರಣಹೋಮ ನಡೆಸಿದ 24 ಮಂದಿಗೆ ಶಿಕ್ಷೆ” ಎನ್ನುವ ಅಂಕಣದಲ್ಲಿ ಈ ಫೊಟೊವನ್ನು ಬಳಸಲಾಗಿತ್ತು. ಆದರೆ ಬಿಜೆಪಿ ನಾಯಕಿ ಇದೇ ಫೋಟೊವನ್ನು ಬಳಸಿ ಪಶ್ಚಿಮ ಬಂಗಾಳದ ಗಲಭೆ ಎಂದು ಬಳಸಿ ತಮ್ಮ ಅಪಾಯಕಾರಿ ಬುದ್ಧಿಮತ್ತೆಯನ್ನು ಪ್ರದರ್ಶಿಸಿದ್ದಾರೆ.

ಇದೇ ಫೊಟೊವನ್ನು ಬಿಜೆಪಿ ಆಯೋಜಿಸಿದ್ದ #ಸೇವ್ ಬೆಂಗಾಲ್ ಎನ್ನುವ ಸಭೆಯಲ್ಲೂ ಬಳಸಲಾಗಿತ್ತು. ನಕಲಿ ಫೋಟೊಗಳನ್ನು ಬಳಸಿ ಹಿಂದೂಗಳ ಭಾವನೆಯನ್ನು ಕೆರಳಿಸುತ್ತಿರುವ ನೂಪುರ್ ಶರ್ಮಾಳ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ.

“ಬಂಗಾಳದ ಗಲಭೆಯನ್ನು ಉತ್ತೇಜಿಸಲು 2002ರ ಗುಜರಾತ್ ಗಲಭೆಯ ಫೊಟೊ. ಈ ಖಾತೆಯನ್ನು ಯಾಕೆ ರಿಪೋರ್ಟ್ ಮಾಡಿಲ್ಲ. ರದ್ದುಮಾಡಿಲ್ಲ” ಎಂದು ಪ್ರಸಿದ್ಧ ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ ಪ್ರಶ್ನಿಸಿದ್ದಾರೆ.

You are a CM of entire Bengal not only of one community Mamta ji. @swapan55 at #SaveBengal pic.twitter.com/MUKumMpXaF

— Shailesh Jha (वंचित) (@HindustaniTweet) 8 July 2017

Images from 2002 Guj. riots to promote communal hatred in Bengal. Why hasn't this account been reported/shut-down? @Twitter @TwitterIndia https://t.co/IHVoL62svx

— VISHAL DADLANI (@VishalDadlani) 9 July 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X