Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್:...

ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಅರ್ಚನಾ, ಸ್ವಪ್ನಾಗೆ ಸ್ವರ್ಣ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ9 July 2017 11:36 PM IST
share
ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಅರ್ಚನಾ, ಸ್ವಪ್ನಾಗೆ ಸ್ವರ್ಣ ಸಂಭ್ರಮ

ಭುವನೇಶ್ವರ, ಜು.9: ಭಾರತದ ಓಟಗಾರ್ತಿ ಅರ್ಚನಾ ಅಧವ್ ಹಾಗೂ ಹೆಪ್ಟಾಥ್ಲೀಟ್ ಸ್ವಪ್ನಾ ಬರ್ಮನ್ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಕೊನೆಯ ದಿನವಾದ ರವಿವಾರ ಚಿನ್ನದ ಪದಕ ಜಯಿಸಿದ್ದಾರೆ.

ಇಲ್ಲಿನ ಕಳಿಂಗ ಸ್ಟೇಡಿಯಂನಲ್ಲಿ ರವಿವಾರ ನಡೆದ ಮಹಿಳೆಯರ 800 ಮೀ. ಸ್ಪರ್ಧೆಯಲ್ಲಿ ಅರ್ಚನಾ ಮೊದಲ ಸ್ಥಾನ ಪಡೆದರೆ, ಸ್ವಪ್ನಾ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದರು. ಈ ಸಾಧನೆ ಮೂಲಕ ಈ ಇಬ್ಬರು ಅಥ್ಲೀಟ್‌ಗಳು ಆಗಸ್ಟ್‌ನಲ್ಲಿ ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಅರ್ಹತೆ ಪಡೆದಿದ್ದಾರೆ.

ಒಟ್ಟು 23 ಪದಕಗಳನ್ನು ಜಯಿಸಿರುವ ಭಾರತ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿ ಶ್ರೇಷ್ಠ ಪ್ರದರ್ಶನ ನೀಡಿದೆ. 1989ರ ಆವೃತ್ತಿಯಲ್ಲಿ 22 ಪದಕಗಳನ್ನು ಜಯಿಸಿ ಉತ್ತಮ ಸಾಧನೆ ಮಾಡಿತ್ತು.

800 ಮೀ.ಓಟದ ಸ್ಪರ್ಧೆಯಲ್ಲಿ 2:05.00 ಸೆಕೆಂಡ್‌ನಲ್ಲಿ ಗುರಿ ತಲುಪಿದ ಅರ್ಚನಾ ಮೊದಲ ಸ್ಥಾನ ಪಡೆದರೆ, ಶ್ರೀಲಂಕಾದ ನಿರ್ಮಲಾ(2:05.23 ಸೆ.) ಹಾಗೂ ಗಾಯಂತಿಕಾ ಥುಶಾರಿ(2:05.27 ಸೆ.) ಕ್ರಮವಾಗಿ 2ನೆ ಹಾಗೂ 3ನೆ ಸ್ಥಾನ ಪಡೆದರು.
ಭಾರತದ ಲಿಲ್ಲಿ ದಾಸ್ 2:07.49 ಸೆಕೆಂಡ್‌ನಲ್ಲಿ ಗುರಿ ತಲುಪಿ ಐದನೆ ಸ್ಥಾನ ಪಡೆದರು. ಪದಕ ಫೇವರಿಟ್ ಟಿಂಟು ಲುಕಾ ಸ್ಪರ್ಧೆ ಮುಗಿಸಲು ವಿಫಲರಾದರು.

ಮಹಿಳೆಯರ ಹೆಪ್ಟಾಥ್ಲಾನ್‌ನಲ್ಲಿ ಒಟ್ಟು 5,942 ಅಂಕ ಗಳಿಸಿದ ಸ್ವಪ್ನಾ ಬರ್ಮನ್ ಚಿನ್ನದ ಪದಕ ತನ್ನದಾಗಿಸಿಕೊಂಡರು. ಜಪಾನ್‌ನ ಮೆಗ್ ಹೆಂಫಿಲ್(5883 ಅಂಕ) ಹಾಗೂ ಭಾರತದ ಪೂರ್ಣಿಮಾ ಹೆಂಬ್ರಮ್(5798) ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಜಯಿಸಿದರು. ಪುರುಷರ 800ಮೀ. ಫೈನಲ್‌ನಲ್ಲಿ ಜಿನ್ಸನ್ ಜಾನ್ಸನ್ 1:50.07 ಸೆಕೆಂಡ್‌ನಲ್ಲಿ ಗುರಿ ತಲುಪುವ ಮೂಲಕ ಕಂಚಿಗೆ ತೃಪ್ತಿಪಟ್ಟರು. ಮಹಿಳೆಯರ ಡಿಸ್ಕಸ್ ಎಸೆತದ ಸ್ಪರ್ಧೆಯಲ್ಲಿ ಮೂವರು ಸ್ಪರ್ಧಿಗಳು ಪದಕ ಜಯಿಸಲು ವಿಫಲರಾದರು. ಕಮಲ್‌ಪ್ರೀತ್ ಕೌರ್, ಸೀಮಾ ಪೂನಿಯಾ ಹಾಗೂ ಹಿಮಾನಿ ಸಿಂಗ್ ಕ್ರಮವಾಗಿ 5, 6 ಹಾಗೂ 7ನೆ ಸ್ಥಾನ ಪಡೆದಿದ್ದಾರೆ.

<ದ್ಯುತಿ, ಸ್ರಬಾನಿ ನಂದಾ ಫೈನಲ್‌ಗೆ: ಮಹಿಳೆಯರ 200 ಮೀ.ಓಟದ ಸ್ಪರ್ಧೆಯಲ್ಲಿ ಸ್ಥಳೀಯ ಅಥ್ಲೀಟ್‌ಗಳಾದ ದ್ಯುತಿ ಚಂದ್ ಹಾಗೂ ಸ್ರಬಾನಿ ನಂದ ಫೈನಲ್‌ಗೆ ತಲುಪುವುದರೊಂದಿಗೆ ಪದಕದ ಭರವಸೆ ಮೂಡಿಸಿದರು.

ಈ ಇಬ್ಬರು ಓಟಗಾರ್ತಿಯರು ಶನಿವಾರ ನಡೆದ 4x100 ಮೀ. ರಿಲೇಯಲ್ಲಿ ಕಂಚಿನ ಪದಕ ಜಯಿಸಿದ್ದರು.
ಒಡಿಶಾದ ಇನ್ನೋರ್ವ ಓಟಗಾರ ಅಮಿಯಾ ಕುಮಾರ್ ಮಲಿಕ್ ಪುರುಷರ 200 ಮೀ. ಓಟದಲ್ಲಿ ಫೈನಲ್‌ಗೆ ತಲುಪಿದ್ದಾರೆ. ಮಲಿಕ್ ಇದೇ ಟೂರ್ನಿಯಲ್ಲಿ 100 ಮೀ. ಓಟ ಹಾಗೂ ರಿಲೇ ತಂಡದಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X