Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋಮುಗಲಭೆ ಹೆಚ್ಚಾಗಲು ಬಿಜೆಪಿ ಕಾರಣ:...

ಕೋಮುಗಲಭೆ ಹೆಚ್ಚಾಗಲು ಬಿಜೆಪಿ ಕಾರಣ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ10 July 2017 6:12 PM IST
share
ಕೋಮುಗಲಭೆ ಹೆಚ್ಚಾಗಲು ಬಿಜೆಪಿ ಕಾರಣ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜು.10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ಹೆಚ್ಚಾಗಲು ಮುಖ್ಯಮಂತ್ರಿ ಹಾಗೂ ರಾಜ್ಯ ಸರಕಾರ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಡಿರುವ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಹೆಚ್ಚಾಗಲು ಬಿಜೆಪಿ ಕಾರಣ ಎಂದು ಸ್ಥಳೀಯ ಮುಖಂಡರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.

ಈ ರೀತಿಯ ಬೆಳವಣಿಗೆಗಳು ನಡೆಯಬಾರದು. ಗಲಭೆಗಳನ್ನು ಹತ್ತಿಕ್ಕಬೇಕು, ಜನರು ಶಾಂತಿಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಗೃಹ ಸಚಿವನಾಗಿದ್ದಾಗ ಎಲ್ಲ ವಿಚಾರಗಳ ಬಗ್ಗೆ ಪ್ರತಿನಿತ್ಯ ನಿರ್ವಹಣೆ ಮಾಡುತ್ತಿದ್ದೆ ಎಂದು ಅವರು ಹೇಳಿದರು.
ಯಾವುದೇ ಕಾರಣಕ್ಕೂ ಅಮಾಯಕರ ಕೊಲೆ ಆಗಬಾರದು ಅಂತ ನಾವು ಕೆಲಸ ಮಾಡಿದ್ದೇವೆ. ಯಡಿಯೂರಪ್ಪ ರಾಜಕೀಯ ಕಾರಣಕ್ಕಾಗಿ ಮುಖ್ಯಮಂತ್ರಿ ಹಾಗೂ ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ಮೊದಲು ಸಂಘ ಸಂಸ್ಥೆಗಳನ್ನು ನಿಯಂತ್ರಿಸಲು ಪ್ರಯತ್ನಿಸಲಿ ಎಂದು ಪರಮೇಶ್ವರ್ ಆಗ್ರಹಿಸಿದರು.

ಗೃಹ ಸಚಿವರು ಇಲ್ಲದ ಕಾರಣಕ್ಕಾಗಿ ಈ ರೀತಿಯ ಗಲಭೆಗಳು ಆಗುತ್ತಿವೆಯೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಇಲಾಖೆಯು ಸದ್ಯಕ್ಕೆ ಮುಖ್ಯಮಂತ್ರಿ ಬಳಿಯಿದೆ. ಅವರು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿಯನ್ನು ಹಿಂದೂ ಹಾಗೂ ಮುಸ್ಲಿಂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಆರೆಸೆಸ್ಸ್, ಬಜರಂಗದಳ, ಶ್ರೀರಾಮಸೇನೆಯನ್ನು ನಿಷೇಧಿಸುವಂತೆಯೂ ಕೆಲವು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಪರಮೇಶ್ವರ್ ತಿರುಗೇಟು ನೀಡಿದರು.
ಕೋಮುಗಲಭೆಗಳು ನಡೆದಾಗ ಮತೀಯ ಸಂಘಟನೆಗಳನ್ನು ನಿಷೇಧಿಸುವ ಆಗ್ರಹ ಬರುತ್ತದೆ. ಕಾಂಗ್ರೆಸ್ ಪಕ್ಷವು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ. ನಾವು ಶಾಂತಿಯನ್ನು ಬಯಸುತ್ತೇವೆ. ಬಿಜೆಪಿ ಹಾಗೂ ಅದರ ಅಂಗ ಸಂಘಟನೆಗಳು ಸುಮ್ಮನಿದ್ದರೆ ಎಲ್ಲವೂ ಸರಿಹೋಗುತ್ತೆ ಎಂದು ಅವರು ಹೇಳಿದರು.
ರಾಜ್ಯ ಸರಕಾರ, ಮುಖ್ಯಮಂತ್ರಿ ಸೇರಿದಂತೆ ಇನ್ನಿತರರ ಬಗ್ಗೆ ಗೌರವಯುತವಾಗಿ ಮಾತನಾಡುವುದನ್ನು ಸಂಸದೆ ಶೋಭಾ ಕರಂದ್ಲಾಜೆ ಕಲಿಯುವುದು ಉತ್ತಮ ಎಂದು ಪರಮೇಶ್ವರ್ ಸಲಹೆ ನೀಡಿದರು.

ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತು ಸ್ಥಳೀಯ ಮುಖಂಡರ ಸಭೆ ಕರೆದು ಚರ್ಚೆ ಮಾಡಿದ್ದೇನೆ. ಅಂತಿಮವಾಗಿ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡುವುದು ಹೈಕಮಾಂಡ್ ಎಂದು ಪರಮೇಶ್ವರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X