Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳೆಗಾಲದಲ್ಲಿ ಯಡಿಯೂರಪ್ಪರ ಬರಪರಿಶೀಲನೆ...

ಮಳೆಗಾಲದಲ್ಲಿ ಯಡಿಯೂರಪ್ಪರ ಬರಪರಿಶೀಲನೆ ನಾಟಕ: ಐವನ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ10 July 2017 6:37 PM IST
share
ಮಳೆಗಾಲದಲ್ಲಿ ಯಡಿಯೂರಪ್ಪರ ಬರಪರಿಶೀಲನೆ ನಾಟಕ: ಐವನ್ ಡಿಸೋಜ

ಕಾಪು, ಜು.10: ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಬರಪರಿಶೀಲನೆ ನಡೆಸುವ ಬಿಜೆಪಿ ಮುಖಂಡ ಯಡಿಯೂರಪ್ಪ ಅವರ ನಾಟಕ ಜನರಿಗೆ ತಿಳಿದಿದೆ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು.

ಕಾಪು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಪೇಟೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಒಂದು ದೊಡ್ಡ ನಾಟಕ ಕಂಪೆನಿ. ನಾಟಕ ಕಂಪೆನಿಯಲ್ಲಿ ಪ್ರಶಸ್ತಿ ಕೊಡಬೇಕಿದ್ದರೆ ಮೊದಲು ಬಿಜೆಪಿಗೆ ನೀಡಬೇಕು ಎಂದು ಅವರು ಹೇಳಿದರು. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸುತಿದ್ದ ಅವರು, ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದ ಬಳಿಕ ಕೇಂದ್ರದ ವಿರುದ್ಧ ಒತ್ತಾಯ ಮಾಡುತಿಲ್ಲ. ಮೋದಿಯ ಮುಂದೆ ಹೋಗಿ ಮೌನರಾಗುವ ಇವರು ಕೇಂದ್ರ ಸರ್ಕಾರ ಮೂರು ವರ್ಷಗಳಲ್ಲಿ ಜನಪರ ಯೋಜನೆಗಳ ಬಗ್ಗೆ ಜನತೆಗೆ ತಿಳಿಸಲಿ ಎಂದರು.

ಶವದ ಮುಂದೆ ರಾಜಕೀಯ ಬೇಡ: ಎಲ್ಲಿಯಾದರೂ ಹೆಣ ಬಿದ್ದಾಗ ಹೋಗಿ ನೋಡಿ ರಾಜಕೀಯದ ನಾಟಕವಾಡುವ ಸಂಸದೆ ಶೋಭಾ ಕರಂದ್ಲಾಜೆ ಅವರು ನಡೆಸಿದ ಸಾಧನೆ ಏನು ಎಂದು ಪ್ರಶ್ನಿಸಿ ಡಿಸೋಜ, ಕೇವಲ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವ ಶೋಭಕ್ಕ 3 ವರ್ಷಗಳಲ್ಲಿ ಕೇಂದ್ರದ ಯಾವ ಯೋಜನೆಗಳನ್ನು ತಮ್ಮ ಕ್ಷೇತ್ರದಲ್ಲಿ ಜಾರಿಮಾಡಿದ್ದೀರಿ ಎಂದು ಪಟ್ಟಿ ಮಾಡಿ ಜನತೆಗೆ ತಿಳಿಸಿ ಎಂದು ಸವಾಲು ಹಾಕಿದರು. ಗುಂಪು ಘರ್ಷಣೆ ನಾಟಕಗಳು ಬೇಕಿಲ್ಲ. ಕೇವಲ ಜನಮರುಳು ಮಾತುಗಳಿಂದ ಜನಸಾಮಾನ್ಯರನ್ನು ಇನ್ನು ವಂಚಿಸಲು ಸಾಧ್ಯವಿಲ್ಲ. 150 ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕಿಳಸಲು ಅಸಮರ್ಥರಾಗುತ್ತಿರುವ ಬಿಜೆಪಿ ಗೆಲ್ಲುವುದು ಬಿಡಿ ಇಡುಗಂಟು ಪಡಕೊಳ್ಳುವುದನ್ನು ಯೋಚಿಸಲಿ.2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಇನ್ನೆಲ್ಲಿಯ 150+ ಸೀಟು ಎಂದು ಪ್ರಶ್ನಿಸಿದರು.

ಪ್ರತಿಭಟನಾ ಸಭೆಯ ಆರಂಭದಲ್ಲಿ ಕಾಪು ವಿದ್ಯಾನಿಕೇತನ್ ಶಾಲೆಯ ಬಳಿಯಿಂದ ಕಾಪು ಪೇಟೆಯವರೆಗೆ ಪ್ರತಿಭಟನಾ ಜಾಥಾ ನಡೆಯಿತು. ಪ್ರತಿಭಟನೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡರು. ಕೇಂದ್ರ ಸರ್ಕಾರದ ವಿರುದ್ಧದ ಮತಪತ್ರಗಳನ್ನು ಪ್ರದರ್ಶಿಸಿ, ಘೋಷಣೆಗಳ ಕೂಗಿದರು.

ಕಾಪು ಶಾಸಕ ವಿನಯಕುಮಾರ್ ಸೊರಕೆ ಮಾತನಡಿ, ರಾಜ್ಯ ಸರಕಾರ ವಿನಂತಿಸಿದರೂ ವಾಣಿಜ್ಯ ಬ್ಯಾಂಕ್‌ನಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ. ದೇಶಕ್ಕೆ ಅನ್ನ ಕೊಡುವ ರೈತರು ನಾನಾ ಕಾರಣಗಳಿಂದ ಸಾಲ ಕಟ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ಧರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೇಸ್ ಸರಕಾರವು 50 ಸಾವಿರ ತನಕದ ಸಾಲವನ್ನು ಮನ್ನಾ ಮಾಡಿದ್ದು, 22 ಲಕ್ಷ ರೈತರಿಗೆ ಲಾಭವಾಗಿದೆ. ಇದರಿಂದ ರೂ.8,165 ಕೋಟಿ ಹೆಚ್ಚವರಿ ಹೊರೆ ರಾಜ್ಯ ಬೊಕ್ಕಸಕ್ಕೆ ಬೀಳಲಿದೆ. ಆದರೆ ಕೇಂದ್ರ ಸರಕಾರವು ರಾಜ್ಯ ಸರಕಾರ ವಿನಂತಿಸಿದರೂ ವಾಣಿಜ್ಯ ಬ್ಯಾಂಕ್‌ನಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ. 3 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಯಾವುದೇ ಬೇಡಿಕೆಯನ್ನು ಪೂರೈಸುತ್ತಿಲ್ಲ ಎಂದು ದೂರಿದರು.

ರೈತರು ಸಂಕಷ್ಟದಲ್ಲಿದ್ದು, ತೀವ್ರ ಬರಗಾಲ ಎದುರಿಸುತ್ತಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ಕಣ್ಣಿಗೆ ಮಣ್ಣು ಎರೆಚುವ ಕೆಲಸ ಮಾಡುತ್ತಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಪ್ರಣಾಳಿಕೆಯ ಯಾವುದನ್ನೂ ಅನುಷ್ಠಾನಕ್ಕೆ ತರಳಿಲ್ಲ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸುವ ಯಡಿಯೂರಪ್ಪ, ಮೋದಿ ಮುಂದೆ ಹೋಗಿ ಮೌನವಾಗುತ್ತಾರೆ ಎಂದು ಅವರು ಹೇಳಿದರು.

ಪ್ರತಿಭಟನಾ ಸಭೆಯಲ್ಲಿ ಕಾಪು ಬ್ಲಾಕ್ ಅಧ್ಯಕ್ಷ ನವೀನ್‌ಚಂದ್ರ ಜೆ.ಶೆಟ್ಟಿ, ಮಾಜಿ ಶಾಸಕರಾದ ಗೋಪಾಲ ಭಂಡಾರಿ, ಯು.ಆರ್.ಸಭಾಪತಿ, ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಂ.ಎ.ಗಫೂರ್, ಅಮೃತ್ ಶೆಣೈ, ದೇವಿಪ್ರಸಾದ್ ಶೆಟ್ಟಿ, ಅಬ್ದುಲ್ ಅಝೀಝ್ ಹೆಜಮಾಡಿ, ವಿಶ್ವಾಸ್ ಅಮೀನ್, ಗುಲಾಂ ಮುಹಮ್ಮದ್, ಪುರಸಭಾ ಅಧ್ಯಕ್ಷೆ ಸೌಮ್ಯ, ಎಂ.ಪಿ.ಮೊಯಿದಿನಬ್ಬ ಹಲವು ಮುಖಂಡರು ಭಾಗವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X