Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಪುಸ್ತಕ ಆಂದೋಲನದ ರೂವಾರಿ ರಾಜಾರಾಮ್

ಪುಸ್ತಕ ಆಂದೋಲನದ ರೂವಾರಿ ರಾಜಾರಾಮ್

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ11 July 2017 12:09 AM IST
share
ಪುಸ್ತಕ ಆಂದೋಲನದ ರೂವಾರಿ ರಾಜಾರಾಮ್

 ಆರ್. ಎಸ್. ರಾಜಾರಾಮ್ ಎಂದಾಗ ನೆನಪಾಗುವುದು ‘ನವಕರ್ನಾಟಕ ಪ್ರಕಾಶನ’. ಪುಸ್ತಕ ಮಾರಾಟವನ್ನು ಒಂದು ಆಂದೋಲನವಾಗಿ ರೂಪಿಸಿದ ಹೆಗ್ಗಳಿಕೆ ಆರ್. ಎಸ್. ರಾಜಾರಾಮ್ ಅವರದು. ಎಡಪಂಥೀಯ ಪಕ್ಷವೊಂದರ ಹಿನ್ನೆಲೆಯಿರುವ ಪ್ರಕಾಶನವಾದರೂ, ಮುಂದೆ ಸಾಹಿತ್ಯ, ಚಿಂತನೆಯ ವಿವಿಧ ಧಾರೆಗಳನ್ನು ತನ್ನೊಳಗಿಟ್ಟು ಇದು ವಿಸ್ತಾರ ವಾಯಿತು. ನಾಡಿನ ಅಪಾರ ಸಂಖ್ಯೆಯ ಲೇಖಕರನ್ನು ಬೆಳೆಸಿದ ಪ್ರಕಾಶನ ಇದು. ಪ್ರಗತಿಪರ ಚಿಂತನೆಯನ್ನು ನಾಡಿನಗಲಕ್ಕೆ ತಲುಪಿಸಿದ ಹೆಗ್ಗಳಿಕೆ ನವಕರ್ನಾಟಕ ಪ್ರಕಾಶನದ ರಾಜಾರಾಮ್ ಅವರದು. ಒಂದು ಪುಸ್ತಕವೆಂದರೆ ಬಿಳಿಯ ಹಾಳೆಯ ಮೇಲೆ ಅಚ್ಚು ಮಾಡಿದ ಅಕ್ಷರಗಳು ಮಾತ್ರವಲ್ಲ, ಪುಸ್ತಕಕ್ಕೆ ಒಂದು ಹೃದಯವಿದೆ. ಪುಸ್ತಕ ಮನುಷ್ಯನ ಅತ್ಯುತ್ತಮ ಸಂಗಾತಿಯಾಗಬಲ್ಲ್ಲುದು, ಜ್ಞಾನ ಪ್ರಸಾರದ ಪರಿಣಾಮಕಾರಿ ಸಾಧನವೂ ಆಗಬಲ್ಲದು ಎಂಬ ತಿಳುವಳಿಕೆಯನ್ನು ಹೊಂದಿರುವ ರಾಜಾರಾಮ್ ಅವರು ನಡೆಸಿದ ವಿವಿಧ ಚಟುವಟಿಕೆಗಳ, ಎದುರಿಸಿದ ವಿವಿಧ ತೊಡಕುಗಳ ಮತ್ತು ಮಾಡಿದ ಸಾಧನೆಗಳ ಸ್ಥೂಲ ಪರಿಚಯ ನೀಡುವ ಕೃತಿ ‘ಸೃಷ್ಟಿಯ ಸೆಲೆ’. ಈ ಕೃತಿ ರಾಜಾರಾಮ್ ಅವರ ಬದುಕು ಮತ್ತು ಸಾಧನೆಯನ್ನು ಹೇಳುತ್ತದೆ. ಪರಂಜ್ಯೋತಿಯವರು ರಾಜಾರಾಮ್ ಆತ್ಮಕಥನವನ್ನು ನಿರೂಪಿಸಿದ್ದಾರೆ. ಮುನ್ನುಡಿಯಲ್ಲಿ ಜಿ. ರಾಮಕೃಷ್ಣ ಅವರು ಹೇಳುವಂತೆ, ‘ಸೃಷ್ಟಿಯ ಸೆಲೆ’ ರಾಜಾರಾಮ್ ಅವರ ಪೂರ್ಣ ಕ್ರಿಯಾ ಯೋಗವನ್ನು ವಿಸ್ತರಿಸಿ ಹೇಳುವ ಗ್ರಂಥವಲ್ಲ. ಕೆಲವು ತುಣುಕುಗಳನ್ನು ನಮ್ಮ ಮುಂದಿರಿಸಿ ರಾಜಾರಾಮ್ ಅವರ ಕಾರ್ಯಕ್ಷೇತ್ರದ ವ್ಯಾಪ್ತಿಯನ್ನು ಸಂಕ್ಷಿಪ್ತವಾಗಿ ಮತ್ತು ಸೊಗಸಾಗಿ ನಿರೂಪಿಸುವ ಹೊತ್ತಿಗೆ ಇದು. ಇಲ್ಲಿ ರಾಜಾರಾಮ್ ಕುರಿತಂತೆ ಅವರ ಕುಟುಂಬದ ವಿವಿಧ ಸದಸ್ಯರು ಬರೆದಿರುವ ವಿವಿಧ ಆತ್ಮೀಯ ಬರಹಗಳೂ ಇವೆ. ಜೊತೆಗೆ ಅವರ ಬದುಕನ್ನು ಕಟ್ಟಿಕೊಡುವ ಕೆಲವು ವರ್ಣಮಯ ಛಾಯಚಿತ್ರಗಳನ್ನೂ ಕೃತಿ ಹೊಂದಿದೆ. ತಮ್ಮ ಬಾಲ್ಯ, ಕಾಲೇಜು ಬದುಕು ಇತ್ಯಾದಿಗಳ ಜೊತೆಗೆ ನವಕರ್ನಾಟಕ ಪ್ರಕಾಶನ ಸ್ಥಾಪನೆಯ ಸವಾಲುಗಳು, ಅದು ಬೆಳೆದ ರೀತಿ ಎಲ್ಲವನ್ನು ಸಂಕ್ಷಿಪ್ತವಾಗಿ ಈ ಕೃತಿಯಲ್ಲಿ ರಾಜಾರಾಮ್ ಕಟ್ಟಿಕೊಟ್ಟಿದ್ದಾರೆ. ಅವರ ಬರಹ, ಚಿಂತನೆಗಳೂ ಈ ಕೃತಿಯಲ್ಲಿವೆ. ಪುಸ್ತಕ ಪ್ರಕಾಶನ, ಮಾರಾಟ ಮೊದಲಾದ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿದವರಿಗೆ ಈ ಕೃತಿ ಸ್ಫೂರ್ತಿಯಾಗಿದೆ. ಎಂ. ಎಸ್. ಕೃಷ್ಣನ್ ಸ್ಮರಣ ಸಂಸ್ಥೆ ಬೆಂಗಳೂರು ಹೊರತಂದಿರುವ ಕೃತಿಯ ಮುಖಬೆಲೆ 175 ರೂ. ಆಸಕ್ತರು 080- 22161911 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X