Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೊರೆಸ್ವಾಮಿಗೆ ಎಂ.ಪಿ.ಪ್ರಕಾಶ್...

ದೊರೆಸ್ವಾಮಿಗೆ ಎಂ.ಪಿ.ಪ್ರಕಾಶ್ ರಾಷ್ಟ್ರೀಯ ಸೇವಾಸಿರಿ ಪ್ರಶಸ್ತಿ

‘ಎಂ.ಪಿ ಪ್ರಕಾಶ್ ರಾಜ್ಯ ರಾಜಕಾರಣದ ಮ್ಯಾನ್ ಆಫ್ ಪರ್ಫೆಕ್ಷನ್’

ವಾರ್ತಾಭಾರತಿವಾರ್ತಾಭಾರತಿ11 July 2017 9:37 PM IST
share
ದೊರೆಸ್ವಾಮಿಗೆ ಎಂ.ಪಿ.ಪ್ರಕಾಶ್ ರಾಷ್ಟ್ರೀಯ ಸೇವಾಸಿರಿ ಪ್ರಶಸ್ತಿ

ಬೆಂಗಳೂರು, ಜು. 11: ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಎಂ.ಪಿ. ಪ್ರಕಾಶ್ ರಾಜಕಾರಣದಲ್ಲಿ ಅಲ್ಲದೆ ಸಾಂಸ್ಕೃತಿಕ ಕ್ಷೇತ್ರದಲ್ಲೂ ಹೆಸರು ಮಾಡಿದ್ದರು. ರಾಜ್ಯ ರಾಜಕಾರಣದಲ್ಲಿ ಅವರು ಮ್ಯಾನ್ ಆಫ್ ಪರ್ಫೆಕ್ಷನ್ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬಣ್ಣಿಸಿದ್ದಾರೆ.

ಮಂಗಳವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ 77ನೆ ಜನ್ಮ ದಿನಾಚರಣೆ ಅಂಗವಾಗಿ ಎಂ.ಪಿ.ಪ್ರಕಾಶ್ ಪ್ರತಿಷ್ಠಾನ, ರಂಗಭಾರತಿ ಜಂಟಿಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಎಂ.ಪಿ.ಪ್ರಕಾಶ್ ರಾಷ್ಟ್ರೀಯ ಸೇವಾಸಿರಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಎಂ.ಪಿ.ಪ್ರಕಾಶ್ ರಾಜ್ಯ ಕಂಡ ಅಪರೂಪದ ರಾಜಕಾರಣಿ. ಅವರ ಆದರ್ಶಗಳನ್ನು ಇಂದಿನ ಯುವ ರಾಜಕಾರಣಿಗಳು ಮೈಗೂಡಿಸಿಕೊಳ್ಳಬೇಕು. ರಾಜಕೀಯ ಕ್ಷೇತ್ರವಲ್ಲದೆ ಸಾಂಸ್ಕೃತಿಕ ರಂಗದಲ್ಲೂ ಗುರುತಿಸಿಕೊಂಡಾಗ ಮಾತ್ರ ಆದರ್ಶ ರಾಜಕಾರಣಿಗಳು ಆಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸ್ವಾತಂತ್ರ ಬಂದು 70 ವರ್ಷಗಳೆ ಕಳೆದರೂ ದೇಶದಲ್ಲಿ ಇನ್ನೂ ಬಡತನ ನಿರ್ಮೂಲನೆ ಆಗಿಲ್ಲ. ಭೂರಹಿತರಿಗೆ ಭೂಮಿಯನ್ನು ಹಂಚಬೇಕು ಎಂದು ಎಂ.ಪಿ.ಪ್ರಕಾಶ್ ಅವರು ಹೋರಾಟ ನಡೆಸಿದ್ದರು. ದುಡಿಯುವುದಕ್ಕಾಗಿ ಮಾತ್ರ ಎಂಬ ಷರತ್ತಿನ ಮೇಲೆ ಬಡವರಿಗೆ ಭೂಮಿಯನ್ನು ನೀಡಬೇಕು. ಇದರಿಂದ ಬಡವರು, ದಲಿತರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಂಡು ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.

ಎಂ.ಪಿ.ಪ್ರಕಾಶ್ ನನಗಿಂತ 22 ವರ್ಷ ಚಿಕ್ಕವರು. ಇವರ ಹೆಸರಿನಲ್ಲಿ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ದುಃಖ, ಇನ್ನೊಂದು ಕಡೆ ಒಡನಾಡಿ ಹೆಸರಿನಲ್ಲಿ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಸಂತೋಷ ಆಗುತ್ತಿದೆ ಎಂದು ಭಾವುಕರಾದರು.
ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಟಗಾರರನ್ನು ನೋಡಲು, ಅವರ ಜೊತೆ ಗುರುತಿಸಿಕೊಳ್ಳಲು ಮಾತ್ರ ಹೋರಾಟಗಳಲ್ಲಿ ಭಾಗಿಯಾಗುತ್ತಿದ್ದೆ. ಸ್ವಾತಂತ್ರ ಹೋರಾಟಗಾರನಾಗಬೇಕು ಎಂದು ನಾನು ಎಂದಿಗೂ ಅಂದುಕೊಂಡಿದ್ದಿಲ್ಲ. ನನಗೆ 97 ವರ್ಷಗಳು ಆಗುವವರೆಗೂ ಇದು ನನ್ನ ಅರಿವಿಗೂ ಬರಲಿಲ್ಲ. ಕಳೆದ ಎರಡು ವರ್ಷದ ಹಿಂದೆ ಮಂಡೂರಿನಲ್ಲಿ ಸುರಿಯುತ್ತಿದ್ದ ಬೆಂಗಳೂರಿನ ಕಸ ವಿಲೇವಾರಿ ವಿರೋಧಿಸಿ ನಡೆಸಿದ ಪ್ರತಿಭಟನೆಗೆ ಸಿಕ್ಕ ಗೆಲುವು ನಾನೊಬ್ಬ ಹೋರಾಟಗಾರ ಎಂಬ ಅರಿವು ನನ್ನಲ್ಲಿ ಮೂಡಿಸಿತು ಎಂದು ಸ್ಮರಿಸಿಕೊಂಡರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಇಂದಿನ ಯುವ ರಾಜಕಾರಣಿಗಳು ಎಂಪಿ.ಪ್ರಕಾಶ್ ಅವರ ಹಾದಿಯಲ್ಲಿ ಸಾಗುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಹಿರಿಯ ಚಿಂತಕ ಗೊ.ರು.ಚನ್ನಬಸಪ್ಪ ಅವರಿಗೆ ಎಂ.ಪಿ.ಪ್ರಕಾಶ್ ಸಾಹಿತ್ಯ ಸೇವಾ ಸಿರಿ ಪ್ರಶಸ್ತಿ, ಸಾಮರ್ಥ್ಯ ವಿಕಲಚೇತನ ಪುನಶ್ಚೇತನ ಸೇವಾ ಸಂಸ್ಥೆಗೆ ಮ.ಮ. ಪಾಟೀಲ ಜನಸೇವಕ ಪ್ರಶಸ್ತಿ, ನಟಿ ಗಿರಿಜಾ ಲೋಕೇಶ್‌ಗೆ ಎಂ.ಪಿ.ಕೊಟ್ರಗೌಡ ಕಲಾರಾಧಕ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಪ್ರಶಸ್ತಿಗಳು ಫಲಕ, ತಲಾ ಒಂದು ಲಕ್ಷ ರೂ. ನಗದು ಒಳಗೊಂಡಿವೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಶಾಸಕ ಎಂ.ಪಿ.ರವೀಂದ್ರ, ಮಾಜಿ ಸಚಿವ ಅಮರೇಗೌಡ ಬೈಯಾಪುರ, ಶಿವರಾತ್ರೀಶ್ವರ ದೇಶೀಕೇಂದ್ರ ಮಹಾಸ್ವಾಮಿ, ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X