Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ ಯಶ್ ಹೆಸರಿನಲ್ಲಿ ಹಣ ಪಡೆದು ವಂಚನೆ:...

ನಟ ಯಶ್ ಹೆಸರಿನಲ್ಲಿ ಹಣ ಪಡೆದು ವಂಚನೆ: ನಿರ್ದೇಶಕ ಪ್ರಖ್ಯಾತ್‌ಗೌಡ ಆರೋಪ

ವಾರ್ತಾಭಾರತಿವಾರ್ತಾಭಾರತಿ12 July 2017 6:53 PM IST
share

ಬೆಂಗಳೂರು, ಜು.12: ಪದ್ಮಲತಾ, ವಿಕಾಸ್, ಜಗದೀಶ್, ಪುರುಷೋತ್ತಮ್ ಹಾಗೂ ಸಂಗಡಿಗರು ಚಿತ್ರನಟ ಯಶ್ ಅವರ ಹೆಸರಿನಲ್ಲಿ 40 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ನಿರ್ದೇಶಕ ಪ್ರಖ್ಯಾತ್‌ಗೌಡ ಆರೋಪಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರನಟ ಯಶ್‌ರ ಸಂಬಂಧಿಕರು ಎಂದು ಹೇಳಿ ಅವರ ಚಿತ್ರ ನಿರ್ದೇಶಿಸುವ ಅವಕಾಶ ಕೊಡಿಸುವುದಾಗಿ 2 ಲಕ್ಷ ಹಣ ಪಡೆದಿದ್ದರು. 2014ರಲ್ಲಿ ಬಿಡುಗಡೆಯಾದ ಲಿಂಗ ಚಿತ್ರದ ಡಿಸ್ಟ್ರಿಬ್ಯೂಶನ್ ಮಾಡಿಸುವ ಸಲುವಾಗಿ 40 ಲಕ್ಷ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಹೇಳಿದರು.

 ಹಣದ ಭದ್ರತೆ ದೃಷ್ಟಿಯಿಂದ ನೀಡಿದ್ದ ಚೆಕ್ಕನ್ನು ನಗದೀಕರಿಸಲು ಬ್ಯಾಂಕಿಗೆ ಹೋದ ಸಂದರ್ಭದಲ್ಲಿ ಚೆಕ್ ಬೌನ್ಸ್ ಆಗಿದ್ದು ನನ್ನ ಗಮನಕ್ಕೆ ಬಂದಿದೆ. ಈ ಕೂಡಲೇ ಇದಕ್ಕೆ ಸಂಬಂಧಿಸಿದಂತೆ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ನ್ಯಾಯಾಲಯದಿಂದ ಇದಕ್ಕೆ ಸಂಬಂಧಿಸಿದಂತೆ ಅರೆಸ್ಟ್ ವಾರೆಂಟ್ ನೀಡಲಾಗಿದೆ. ಆದರೆ, ಈಗ ಬಂಧನ ಭೀತಿಯಿಂದ ಇವರು ಕೇಸು ವಾಪಸ್ ಪಡೆಯುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದರು.
  

ಪದ್ಮಲತಾ, ಜಗದೀಶ್ ಮತ್ತು ಸಂಗಡಿಗರು ರೌಡಿಗಳ ಹೆಸರಿನಲ್ಲಿ ಬೆದರಿಕೆ ಕರೆ ಮಾಡಿಸಿ 25 ಲಕ್ಷ ಹಫ್ತಾ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ನಾನಿದನ್ನು ನಿರಾಕರಿಸಿದಾಗ ಚೆಕ್‌ಬೌನ್ಸ್ ಕೇಸ್ ವಾಪಸ್ ಪಡೆಯುವಂತೆ ಹೇಳಿದರು. ಕೇಸ್ ವಾಪಸ್ ಪಡೆಯಲಿಲ್ಲ ಎಂದಾದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಅಲ್ಲದೆ, ಮೇ.3 ರಂದು ಚಂದ್ರಾಲೇಔಟ್ ಪೊಲೀಸ್ ಠಾಣೆಯ ಹಿಂಭಾಗ ಹಾಗೂ ಬಿಎಸ್‌ಎನ್‌ಎಲ್ ಕಚೇರಿ ಬಳಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ದೈಹಿಕ ಹಲ್ಲೆ ಮಾಡಿ ಪರಾರಿಯಾಗಿದ್ದರು ಎಂದು ಅವರು ಹೇಳಿದರು.

ಇಷ್ಟೆ ಅಲ್ಲದೆ, ಹಲವಾರು ಬಾರಿ ನನ್ನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಜೊತೆಗೆ, ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಳ್ಳು ದೂರನ್ನು ನೆಪವಾಗಿಟ್ಟುಕೊಂಡು ಹಲವು ಟಿವಿ ಮಾಧ್ಯಮಗಳು ಹಾಗೂ ಪತ್ರಿಕೆಗಳು ಕಾಮುಕ, ರೇಪಿಸ್ಟ್, ವೇಶ್ಯಾವಾಟಿಕೆ ದಂಧೆಯ ಬ್ರೋಕರ್ ಎಂದೆಲ್ಲಾ ತಪ್ಪು ಸುದ್ದಿ ಪ್ರಸಾರ ಮಾಡಿ ನನ್ನ ಚಾರಿತ್ರ ವಧೆ ಮಾಡಿದ್ದಾರೆ. ಇದರಿಂದಾಗಿ 8 ಕೋಟಿ ರೂ.ಗಳ ಬಜೆಟ್‌ನಲ್ಲಿ ನಡೆಯುತ್ತಿದ್ದ ‘ಕತ್ರಿಗುಪ್ಪೆ ಕಟಿಂಗ್ ಶಾಪ್’ ಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮಗಳು ಬಿಂಬಿಸಿದ ಸುದ್ದಿಯಿಂದ ಮನೆ ಮಾಲಕರು ಮನೆ ಖಾಲಿ ಮಾಡಿಸಿದ್ದಾರೆ. ನಿಗದಿಯಾಗಿದ್ದ ನನ್ನ ಮದುವೆ ಮುರಿದು ಬಿದ್ದಿದೆ. ಎಲ್ಲವನ್ನೂ ಕಳೆದುಕೊಂಡು ಅಸಹಾಯಕನಾಗಿ ಬೀದಿಗೆ ಬಂದಿದ್ದೇನೆ. ಹೀಗಾಗಿ, ನಾನು ಈ ಸಿತ್ಥಿಗೆ ಬರಲು ಕಾರಣವಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ನನಗೆ ನ್ಯಾಯ ದೊರಕಿಸಿಕೊಡಬೇಕು. ನನಗೂ ಮತ್ತು ನಮ್ಮ ಕುಟುಂಬದವರಿಗೆ ಇವರಿಂದ ಪ್ರಾಣ ಬೆದರಿಕೆಯಿದ್ದು, ಮುಂದಿನ ದಿನಗಳಲ್ಲಿ ನಮ್ಮ ಜೀವಕ್ಕೆ ಹಾನಿಯುಂಟಾದರೆ ಇವರೇ ಕಾರಣಕರ್ತರಾಗಿರುತ್ತಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X