Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಲು ಬಳಗಕ್ಕೆ 72 ಗಂಟೆಗಳ ಗಡುವು...

ಲಾಲು ಬಳಗಕ್ಕೆ 72 ಗಂಟೆಗಳ ಗಡುವು ವಿಧಿಸಿದ ನಿತೀಶ್

ವಾರ್ತಾಭಾರತಿವಾರ್ತಾಭಾರತಿ12 July 2017 7:51 PM IST
share
ಲಾಲು ಬಳಗಕ್ಕೆ 72 ಗಂಟೆಗಳ ಗಡುವು ವಿಧಿಸಿದ ನಿತೀಶ್

ಪಾಟ್ನಾ,ಜು.12: ಬಿಹಾರದಲ್ಲಿಯ ಸಮ್ಮಿಶ್ರ ಸರಕಾರದ ಭವಿಷ್ಯವನ್ನು ನಿರ್ಧರಿಸಲು 72 ಗಂಟೆಗಳ ಗಡುವು ವಿಧಿಸಲಾಗಿದೆ ಎಂದು ವರದಿಯಾಗಿದ್ದು, ಇದರೊಂದಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ ನಡುವಿನ ದೋಸ್ತಿ ಕೊನೆಗೊಳ್ಳುವ ಸಂಕೇತಗಳು ಗೋಚರಿಸತೊಡಗಿವೆ.

ಲಾಲು ಪುತ್ರ ತೇಜಸ್ವಿ ಯಾದವ್ ಶನಿವಾರ ಸಂಜೆಯೊಳಗೆ ತನ್ನ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಿತೀಶ್ ಬಯಸಿದ್ದಾರೆ. ಆದರೆ ಇದನ್ನು ಬಹಿರಂಗವಾಗಿ ಹೇಳಲಾಗಿಲ್ಲ. ತಮ್ಮ ವಿರುದ್ಧದ ಭ್ರಷ್ಟಾಚಾರದ ಆರೋಪಗಳಿಗೆ ಯಾದವ ಕುಟುಂಬವು ಜನರಿಗೆ ಉತ್ತರಿಸುವುದು ಈಗಿನ ತುರ್ತು ಅಗತ್ಯವಾಗಿದೆ ಎಂದು ಜೆಡಿಯು ನಾಯಕ ಕೆ.ಇ.ತ್ಯಾಗಿ ಹೇಳಿದ್ದಾರೆ. ಆದರೆ ಇದರ ಒಳಾರ್ಥ ತೇಜಸ್ವಿ ರಾಜೀನಾಮೆ ನೀಡಬೇಕು ಎನ್ನುವುದೇ ಆಗಿದೆ ಎನ್ನುವುದು ರಾಜಕೀಯ ಪಂಡಿತರ ಅಭಿಪ್ರಾಯ.

ಲಾಲು ವಿರುದ್ಧದ ಭ್ರಷ್ಟಾಚರ ಪ್ರಕರಣದಲ್ಲಿ ತೇಜಸ್ವಿ ಯಾದವರನ್ನು ಹೆಸರಿಸಲಾಗಿದ್ದು, ಸಿಬಿಐ ಶುಕ್ರವಾರ ಅವರ ಪಾಟ್ನಾ ನಿವಾಸದ ಮೇಲೆ ದಾಳಿಯನ್ನೂ ನಡೆಸಿದೆ. ಲಾಲು ಅವರು ರೈಲ್ವೆ ಸಚಿವರಾಗಿದ್ದಾಗಿನ ಕಾಲದ ಈ ಪ್ರಕರಣವು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಿರಂತರ ಪ್ರಚಾರ ನಡೆಸುತ್ತಿರುವ ಅವರನ್ನು ದಂಡಿಸುವ ಕೇಂದ್ರದ ಕ್ರಮವಾಗಿದೆ ಎಂದು ಯಾದವ ಕಂಪನಿ ಹೇಳಿದೆ.

  ಮಂಗಳವಾರ ಜೆಡಿಯು ಸಭೆಯಲ್ಲಿ ಮಾತನಾಡಿದ ನಿತೀಶ್, ಯಾದವ ಕುಟುಂಬವು ಈವರೆಗೆ ನೀಡಿರುವ ಸಮರ್ಥನೆಯು ಏನೇನೂ ಸಾಲದು. ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವರು ಅದಕ್ಕೆ ಉತ್ತರಿಸಬೇಕು ಎಂದು ಹೇಳಿದ್ದರು. ಭ್ರಷ್ಟಾಚಾರವನ್ನು ಎಳ್ಳಷ್ಟೂ ಸಹಿಸುವುದಿಲ್ಲ ಎಂಬ ತನ್ನ ನೀತಿಯಿಂದ ತಾನು ದೂರ ಸರಿಯುವುದಿಲ್ಲ ಎಂದು ಅವರು ಒತ್ತಿ ಹೇಳಿದ್ದರು.

ಸಿಬಿಐ ಆರೋಪಗಳಿಗೆ ವಿವರವಾದ ಉತ್ತರವನ್ನು ನೀಡಲು ಹೊರಟರೆ ತೇಜಸ್ವಿಯನ್ನು ‘ಕಾಂಗರೂ ನ್ಯಾಯಾಲಯ’ಕ್ಕೆ ತಳ್ಳಿದಂತಾಗುತ್ತದೆ ಮತ್ತು ಅವರ ವಿರುದ್ಧ ದಾಳಿಗೆ ಪ್ರತಿಪಕ್ಷಗಳು ಮತ್ತು ತನಿಖಾ ಸಂಸ್ಥೆಗೆ ಅವಕಾಶ ನೀಡಿದಂತಾಗುತ್ತದೆ ಎಂದು ಮಂಗಳವಾರ ರಾತ್ರಿ ಇಲ್ಲಿ ನಡೆದ ಆರ್‌ಜೆಡಿ ಸಭೆಯು ಅಭಿಪ್ರಾಯಿಸಿದೆ.

ಜೆಡಿಯು ಜೊತೆಗಿನ ಎರಡು ವರ್ಷಗಳ ಪಾಲುದಾರಿಕೆಗೆ ಅಂತ್ಯ ಹಾಡಲು ಇದು ಸಕಾಲವಾಗಿದೆ ಎಂದು ಸಭೆಯಲಿ ಪಕ್ಷವು ಲಾಲುಗೆ ಸಲಹೆ ನೀಡಿದೆ.

ಸರಕಾರದಿಂದ ಹೊರಹೋಗುವಂತೆ ಔಪಚಾರಿಕ ಸೂಚನೆಯಿಂದ ಉಂಟಾಗಬಹು ದಾದ ಮುಖಭಂಗದಿಂದ ತೇಜಸ್ವಿಯವರನ್ನು ಪಾರು ಮಾಡಲು ಸಂಪುಟದಲ್ಲಿರುವ ತನ್ನ ಪಕ್ಷದ 12 ಸಚಿವರನ್ನು ಲಾಲು ಹಿಂದಕ್ಕೆ ಕರೆಸಿಕೊಳ್ಳಲಿದ್ದಾರೆ, ಅಂದರೆ ಅವರ ಪಕ್ಷ ಸರಕಾರದಿಂದ ಹೊರಬೀಳಲಿದೆ. ಆದರೆ ಸರಕಾರಕ್ಕೆ ಬೇಷರತ್ ಬೆಂಬಲವನ್ನು ಮುಂದುವರಿಸಲಿದ್ದಾರೆ ಎಂದು ಯಾದವ ಪಾಳಯಕ್ಕೆ ನಿಕಟವಾಗಿರುವ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X