Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಗುಂಡು" ಯಾವ ಧರ್ಮದವರು ಎಂದು...

"ಗುಂಡು" ಯಾವ ಧರ್ಮದವರು ಎಂದು ನೋಡುವುದಿಲ್ಲ: ಅಮರ್‌ನಾಥ್ ಯಾತ್ರಿಗಳನ್ನು ರಕ್ಷಿಸಿದ ಸಲೀಂ ಮಿರ್ಜಾ

ವಾರ್ತಾಭಾರತಿವಾರ್ತಾಭಾರತಿ12 July 2017 8:47 PM IST
share
ಗುಂಡು ಯಾವ ಧರ್ಮದವರು ಎಂದು ನೋಡುವುದಿಲ್ಲ: ಅಮರ್‌ನಾಥ್ ಯಾತ್ರಿಗಳನ್ನು ರಕ್ಷಿಸಿದ ಸಲೀಂ ಮಿರ್ಜಾ

ಅಹ್ಮದಾಬಾದ್, ಜು.12: ಸಾವು ಅಥವಾ ಬುಲೆಟ್ ಯಾವ ಧರ್ಮದವರು ಎಂದು ನೋಡುವುದಿಲ್ಲ ಎಂದು ಪ್ರಾಣದ ಹಂಗು ತೊರೆದು 50 ಮಂದಿ ಅಮರ್‌ನಾಥ್ ಯಾತ್ರಿಗಳನ್ನು ಭಯೋತ್ಪಾದಕ ದಾಳಿಯಿಂದ ರಕ್ಷಿಸಿದ ಬಸ್ ಚಾಲಕ ಸಲೀಂ ಮಿರ್ಜಾ ಹೇಳಿದ್ದಾರೆ.

ಮಂಗಳವಾರ ಇಡೀ ದಿನ ಅಮರ್‌ನಾಥ್ ಯಾತ್ರಿಕರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಬಗ್ಗೆ ಹಲವು ರಾಜಕಾರಣಿಗಳು ಮಾತಾಡಿರುವುದನ್ನು ನೋಡಿದೆ. ನನಗೆ ರಾಜಕೀಯ ಅರ್ಥವಾಗುವುದಿಲ್ಲ. ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂಬ ದುಃಖ ನನಗಿದೆ. ಈ ದಾಳಿಯಲ್ಲಿ ಅಲ್ಪಸ್ಪಲ್ಪ ಗಾಯಗಳಾಗಿ ಪಾರಾದವರು ನನಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನೀನು ನಮ್ಮನ್ನು ರಕ್ಷಿಸಿದೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ನನಗೆ ಪ್ರತಿಕ್ರಿಯಿಸಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ಘಟನೆ ನಡೆದ ಸ್ಥಳದಲ್ಲಿನ ರಕ್ತ, ಸಾವು ನನ್ನನ್ನು ಭೀತನನ್ನಾಗಿ ಮಾಡಿದೆ. ಭಯೋತ್ಪಾದಕ ದಾಳಿಯ 90 ನಿಮಿಷಗಳ ಬಳಿಕ ನಾನು ಆಘಾತದಿಂದ ಹೊರಬಂದೆ.

ಆರಂಭದ ಕೆಲವು ಬುಲೆಟ್‌ಗಳ ಬಳಿಕ ನಾನು ಬಸ್‌ನ ಸೀಟಿನಿಂದ ಕೆಳಗೆ ಕುಳಿತೆ. ಬಸ್ ಯಾವ ಕಡೆ ಹೋಗುತ್ತಿದೆ ಎಂದು ನನಗೆ ಗೊತ್ತೇ ಆಗುತ್ತಿರಲಿಲ್ಲ. ಆದರೆ, ಸ್ಟಿಯರಿಂಗ್ ವ್ಹೆಲ್ ಅನ್ನು ಬಿಡಲಿಲ್ಲ. ನಾನು ಭಾರತೀಯ ಎಂಬುದಕ್ಕೆ ನನಗೆ ಹೆಮ್ಮೆ ಇದೆ. ನನಗೆ ರಾಜಕೀಯ ಅರ್ಥವಾಗುವುದಿಲ್ಲ. ದೇಶದಲ್ಲಿ ಶಾಂತಿ ಇರಬೇಕು ಎಂದು ನಾನು ಬಯಸುತ್ತೇನೆ. ಯಾಕೆಂದರೆ ನನ್ನಂತವರು ಜೀವನ ನಡೆಸಲು ಸಂಪಾದಿಸಬೇಕೆಂದರೆ ದೇಶದಲ್ಲಿ ಶಾಂತಿ ಇರಬೇಕು.

ಅಲ್ಲಾಹ್ ಹಾಗೂ ಶಿವ ನನಗೆ ಮಾರ್ಗದರ್ಶನ ನೀಡಿದ. ನಾನು ಬುದ್ಧಿವಂತ ವ್ಯಕ್ತಿ ಅಲ್ಲ. ನನಗೆ ಈ ಧೈರ್ಯ ಎಲ್ಲಿಂದ ಬಂತು ಎಂದು ನನಗೇ ಗೊತ್ತಿಲ್ಲ. ನಾನು ಅಮರ್‌ನಾಥ್ ದರ್ಶನಕ್ಕೆ ಹೋಗುತ್ತೇನೆ. ಅಲ್ಲಿಂದ ನನ್ನ ಮನೆಯವರಿಗಾಗಿ ಪ್ರಸಾದ ತೆಗೆದುಕೊಂಡು ಹೋಗುತ್ತೇನೆ. ನಾನು ಶಿಕ್ಷಿತ ಅಲ್ಲ. ರಾಜಕಾರಣಿಗಳ ಹಾಗೆ ಹೇಳಿಕೆ ನೀಡಲು ನನಗೆ ಬರುವುದಿಲ್ಲ. ಆದರೆ, ನಾನು ಭಾರತೀಯ ಎಂದು ಹೇಳಲು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ.

 ಭಗವಂತ ನನಗೆ ಧೈರ್ಯ ನೀಡಿದ. ಭಯೋತ್ಪಾದಕರು ನಿರಂತರ ಗುಂಡಿನ ಮಳೆ ಸುರಿಸುತ್ತಿದ್ದರೂ ನಾನು ಬಸ್ ಚಲಾಯಿಸಿಕೊಂಡು ಬಂದು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಿದೆ. ಅನಂತರ ಸೇನಾ ಸಿಬ್ಬಂದಿ ನನಗೆ ಧೈರ್ಯ ತುಂಬಿದರು. ಸೇನಾ ಸಿಬ್ಬಂದಿ ತುಂಬಾ ಸಹಕಾರ ನೀಡಿದರು. ಅಲ್ಲದೆ ನನ್ನ ಮೊಬೈಲ್ ಸಂಖ್ಯೆ ಪಡೆದುಕೊಂಡರು. ನನ್ನ ಬಸ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕರನ್ನು ಶೋಧಿಸುವುದಾಗಿ ಹೇಳಿದರು. ಭಯೋತ್ಪಾದಕರು ಸಿಕ್ಕಿದರೆ ಫೋನ್ ಮಾಡಿ ತಿಳಿಸುವುದಾಗಿ ಹೇಳಿದರು ಎಂದು ಸಲೀಂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X