Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚಿಲಿ ವಿರುದ್ಧ ಭಾರತಕ್ಕೆ ಜಯ, ಕ್ವಾ....

ಚಿಲಿ ವಿರುದ್ಧ ಭಾರತಕ್ಕೆ ಜಯ, ಕ್ವಾ. ಫೈನಲ್ ಗೆ ಪ್ರವೇಶ

ವಾರ್ತಾಭಾರತಿವಾರ್ತಾಭಾರತಿ12 July 2017 11:42 PM IST
share
ಚಿಲಿ ವಿರುದ್ಧ ಭಾರತಕ್ಕೆ ಜಯ, ಕ್ವಾ. ಫೈನಲ್ ಗೆ ಪ್ರವೇಶ

ಜೋಹಾನ್ಸ್‌ಬರ್ಗ್,ಜು.12: ಪ್ರೀತಿ ದುಬೆ ಬಾರಿಸಿದ ಏಕೈಕ ಗೋಲಿನ ನೆರವಿನಿಂದ ಭಾರತ ತಂಡ ಚಿಲಿ ತಂಡವನ್ನು 1-0 ಅಂತರದಿಂದ ಮಣಿಸಿತು. ಈ ಮೂಲಕ ಎಫ್‌ಐಎಚ್ ಮಹಿಳೆಯರ ಹಾಕಿ ವಿಶ್ವ ಲೀಗ್‌ನಲ್ಲಿ(ಎಚ್‌ಡಬ್ಲುಎಲ್) ಕ್ವಾರ್ಟರ್ ಫೈನಲ್ ತಲುಪಿದೆ.
ಬುಧವಾರ ನಡೆದ ಪಂದ್ಯದಲ್ಲಿ ಪ್ರೀತಿ 38ನೆ ನಿಮಿಷದಲ್ಲಿ ಬಾರಿಸಿದ ಗೋಲಿನ ಸಹಾಯದಿಂದ ಭಾರತ ತಂಡ ಪ್ರಸ್ತುತ ಟೂರ್ನಮೆಂಟ್‌ನಲ್ಲಿ ಮೊದಲ ಜಯ ದಾಖಲಿಸಿತು. ದಕ್ಷಿಣ ಆಫ್ರಿಕ ವಿರುದ್ಧ ಗೋಲುರಹಿತ ಡ್ರಾ ಸಾಧಿಸಿದ್ದ ಭಾರತ ತಂಡ ಅಮೆರಿಕದ ವಿರುದ್ಧ ಕಳೆದ ಪಂದ್ಯದಲ್ಲಿ 1-4 ಅಂತರದಿಂದ ಸೋತಿತ್ತು.

 ಉಭಯ ತಂಡಗಳು ಮೊದಲ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಪಡೆದಿದ್ದರೂ ಅದನ್ನು ಗೋಲಾಗಿ ಪರಿವರ್ತಿಸಲು ವಿಫಲವಾದವು. ಚಿಲಿ ಪಂದ್ಯ ಆರಂಭವಾಗಿ ನಾಲ್ಕು ನಿಮಿಷ ಕಳೆಯುವಷ್ಟರಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದರೆ, ಭಾರತ 12ನೆ ನಿಮಿಷದಲ್ಲಿ ಪೆನಾಲ್ಟಿ ಅವಕಾಶ ಪಡೆದಿತ್ತು.

19ನೆ ನಿಮಿಷದಲ್ಲಿ ಅನುಪಾ ಬಾರ್ಲ ಚಿಲಿ ಆಟಗಾರ್ತಿಯಿಂದ ಚೆಂಡನ್ನು ಕಸಿದುಕೊಂಡು ಪ್ರತಿದಾಳಿಗೆ ವೇದಿಕೆ ನಿರ್ಮಿಸಿದ್ದರು. ಆದರೆ, ಸ್ಟ್ರೈಕರ್ ವೃತ್ತದಲ್ಲಿದ್ದ ರಾಣಿ ಚೆಂಡನ್ನು ಗೋಲುಪೆಟ್ಟಿಗೆಗೆ ಸೇರಿಸಲು ವಿಫಲರಾದರು.

 38ನೆ ನಿಮಿಷದಲ್ಲಿ ಚಿಲಿ ಗೋಲ್‌ಕೀಪರ್‌ನ್ನು ವಂಚಿಸಿದ ಪ್ರೀತಿ ಭಾರತಕ್ಕೆ ಮಹತ್ವದ ಮುನ್ನಡೆ ಒದಗಿಸಿಕೊಟ್ಟರು. ನಿರಂತರ ದಾಳಿ ನಡೆಸಿದ ಭಾರತ ತಂಡ ಚಿಲಿಗೆ ಒತ್ತಡ ಹೇರಿತು. ರಾಣಿ ಮತ್ತೊಮ್ಮೆ ಗೋಲು ಬಾರಿಸುವ ಅವಕಾಶ ಪಡೆದಿದ್ದರು. ಆದರೆ, ಚಿಲಿ ಗೋಲ್‌ಕೀಪರ್ ಇದಕ್ಕೆ ಅವಕಾಶ ನೀಡಲಿಲ್ಲ. ರೇಣುಕಾ ಯಾದವ್ ಹಳದಿ ಕಾರ್ಡ್ ಪಡೆದು ಮೈದಾನದಿಂದ ಹೊರ ನಡೆದಾಗ ಭಾರತ ದ್ವೀತಿಯಾರ್ಧದಲ್ಲಿ 10 ಆಟಗಾರ್ತಿಯರೊಂದಿಗೆ ಆಡಬೇಕಾಯಿತು. ಅಂತಿಮ 15 ನಿಮಿಷಗಳಲ್ಲಿ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಕಂಡು ಬಂತು. ಚಿಲಿ ತಂಡ ಭಾರತದ ರಕ್ಷಣಾ ಕೋಟೆ ಭೇದಿಸಲು ಸತತ ಯತ್ನ ನಡೆಸಿತು. ಬಾರ್ಲ 54ನೆ ನಿಮಿಷದಲ್ಲಿ ಮತ್ತೊಂದು ಪೆನಾಲ್ಟಿ ಅವಕಾಶ ಪಡೆದಿದ್ದರು. ಆದರೆ, ಅದನ್ನು ಗೋಲಾಗಿ ಪರಿವರ್ತಿಸಲು ವಿಫಲರಾದರು.

ಭಾರತ ಜುಲ16 ರಂದು ನಡೆಯಲಿರುವ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ಅರ್ಜೆಂಟೀನ ತಂಡವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X