Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಅಸ್ಪಶ್ಯತೆಯೆಂಬ ವಿಷ ಕೂಸಿನ ಸುತ್ತ...

ಅಸ್ಪಶ್ಯತೆಯೆಂಬ ವಿಷ ಕೂಸಿನ ಸುತ್ತ...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ12 July 2017 11:55 PM IST
share
ಅಸ್ಪಶ್ಯತೆಯೆಂಬ ವಿಷ ಕೂಸಿನ ಸುತ್ತ...

‘ಅಸ್ಪಶ್ಯತೆಯೆಂಬ ವಿಷ ಕೂಸಿನ ಸುತ್ತ’ ಕೃತಿ ಅಸ್ಪಶ್ಯತೆಯನ್ನು ಕೇಂದ್ರವಾಗಿಟ್ಟು ಡಾ. ಎಸ್. ಬಿ. ಜೋಗುವ ಅವರು ಬರೆದಿರುವ ಕೃತಿ. ಅಸ್ಪಶ್ಯತೆಯ ಉಗಮ-ಬೆಳವಣಿಗೆಯ ಸಮಾಜ ಶಾಸ್ತ್ರೀಯ ನೆಲೆಗಳನ್ನು ಈ ಕೃತಿಯಲ್ಲಿ ಅವರು ಶೋಧಿಸಿದ್ದಾರೆ. ಜಾತಿ ಒಂದು ಸಾಮಾಜಿಕ ಸಂಸ್ಥೆ ಎಂದು ಹೇಳುವ ಜೋಗುರ, ಅದು ಸಾವಿರಾರು ವರ್ಷಗಳಿಂದಲೂ ಒಂದು ಬಗೆಯ ಏಣಿಶ್ರೇಣಿ ವ್ಯವಸ್ಥೆಯನ್ನು ಅನುಸರಿಸಿಯೇ ಸಾಗಿ ಬಂದಿದೆ. ಇಲ್ಲಿ ಪ್ರಜ್ಞಾತೀತವಾಗಿ ನಮ್ಮ ನಮ್ಮ ಜಾತಿಯ ಬಗೆಗಿನ ಪ್ರಜ್ಞೆಗಳು, ಅಂದರೆ ಮೇಲರಿಮೆ ಮತ್ತು ಕೀಳರಿಮೆಯ ಭಾವನೆಗಳು ನಮಗೆ ಅಂತರ್ಗತವಾಗಿವೆ. ಜಾತಿಯ ಸ್ಥಾನಮಾನಗಳ ಬಗೆಗಿನ ತಿಳುವಳಿಕೆ ತಲೆಮಾರುಗಳ ಮೂಲಕ ಸಾಗಿ ಬರುವ ಪರಂಪರೆಯ ಭಾಗವೇ ಆಗಿರುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ. ಜಾತಿ ಮತ್ತು ಅದನ್ನು ಸುತ್ತಿಕೊಂಡಿರುವ ಅಸ್ಪಶ್ಯತೆಯನ್ನು ಈ ಹಿನ್ನೆಲೆಯಲ್ಲಿ ಕೃತಿಯುದ್ದಕ್ಕೂ ಅವರು ಚರ್ಚಿಸುತ್ತಾರೆ.

ಈ ಕೃತಿಯಲ್ಲಿ ಒಟ್ಟು 13 ಅಧ್ಯಾಯಗಳಿವೆ. ಮೊದಲ ಅಧ್ಯಾಯದಲ್ಲಿ ಅಸ್ಪಶ್ಯತೆಯ ಮೂಲ ನೆಲೆಗಳ ಕುರಿತಂತೆ ವಿಶ್ಲೇಷಿಸುತ್ತಾರೆ. ಜಾತಿಯ ಮೂಲಕ ಅಸ್ಪಶ್ಯತೆ ಜನ್ಮ ತಳೆದ ಬಗೆ, ಅದರ ಬೆಳವಣಿಗೆಗಳನ್ನು ಇದು ಚರ್ಚಿಸುತ್ತದೆ. ಜಾತಿ ಎನ್ನುವ ಗರ್ಭದಿಂದಲೇ ಅಸ್ಪಶ್ಯತೆ ಆವಿರ್ಭಸಿರುವುದನ್ನು ಗುರುತಿಸುವ ಅವರು ಬೌದ್ಧ ಧರ್ಮದ ಜೊತೆಗೆ ಅದು ಹೇಗೆ ಒಂದು ಹೊರ ಸಂಬಂಧವನ್ನು ಹೊಂದಿದೆ ಎನ್ನುವುದನ್ನು ಹೇಳುತ್ತಾರೆ. ಎರಡನೆಯ ಅಧ್ಯಾಯದಲ್ಲಿ ಅಸ್ಪಶ್ಯರ ಮೇಲಿನ ದೌರ್ಜನ್ಯಗಳನ್ನು ಅಂಕಿ ಅಂಶಗಳ ಸಮೇತ ನಿರೂಪಿಸುತ್ತಾರೆ. ದೌರ್ಜನ್ಯದ ಬೇರೆ ಬೇರೆ ಸ್ವರೂಪಗಳನ್ನೂ ಅಲ್ಲಿ ವಿವರಿಸುತ್ತಾರೆ. ಮೂರನೆ ಅಧ್ಯಾಯದಲ್ಲಿ ಅಸ್ಪಶ್ಯತೆಯನ್ನು ಅಂಬೇಡ್ಕರ್ ಕಣ್ಣಿನಲ್ಲಿ ನೋಡಿದ್ದಾರೆ. ಅಂಬೇಡ್ಕರ್ ಈ ಸವಾಲನ್ನು ಎದುರಿಸಿದ ರೀತಿಯನ್ನೂ ಇಲ್ಲಿ ಸಂಕ್ಷಿಪ್ತವಾಗಿ ನೀಡಲಾಗಿದೆ. ಹಾಗೆಯೇ ಗಾಂಧಿ, ಲೋಹಿಯಾ ಮತ್ತು ಜೋತಿಭಾ ಫುಲೆ ಅವರು ಅಸ್ಪಶ್ಯತೆಯನ್ನು ಹೇಗೆ ಕಂಡರು ಮತ್ತು ಅದನ್ನು ಯಾವ ದಾರಿಯ ಮೂಲಕ ಎದುರಿಸಿದರು ಎನ್ನುವುದನ್ನು ಮುಂದಿನ ಅಧ್ಯಾಯಗಳಲ್ಲಿ ಬರೆಯುತ್ತಾರೆ. ವರ್ಗ ಮತ್ತು ಜಾತಿಯ ನಡುವಿನ ಅಂತರವನ್ನು ಸ್ಪಷ್ಟಪಡಿಸುವ ಲೇಖಕರು, ಹೇಗೆ ಹಿರಿಯ ರಾಜಕಾರಣಿಗಳೂ ಜಾತೀಯತೆಯಿಂದ ನೋಯಬೇಕಾಯಿತು ಎನ್ನುವುದನ್ನು ಉದಾಹರಣೆ ಸಹಿತ ಈ ಕೃತಿಯಲ್ಲಿ ವಿವರಿಸುತ್ತಾರೆ. ಒಟ್ಟಿನಲ್ಲಿ ಅಸ್ಪಶ್ಯತೆಯನ್ನು ಸುತ್ತುವರಿದಿರುವ ಸಾಮಾಜಿಕ ಮತ್ತು ರಾಜಕೀಯಗಳು ಇಲ್ಲಿ ಬೇರೆ ಬೇರೆ ನೆಲೆಗಳಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುತ್ತವೆ. ಲಡಾಯಿ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 90 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X