Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಗಸ್ಟ್ 4ಕ್ಕೆ ಪ್ರೇಕ್ಷಕರ ಮುಂದೆ...

ಆಗಸ್ಟ್ 4ಕ್ಕೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ 'ರಾಜ್ ವಿಷ್ಣು'

ವಾರ್ತಾಭಾರತಿವಾರ್ತಾಭಾರತಿ13 July 2017 8:18 PM IST
share
ಆಗಸ್ಟ್ 4ಕ್ಕೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ ರಾಜ್ ವಿಷ್ಣು

ಬೆಂಗಳೂರು, ಜು.13: ಶರಣ್ ನಾಯಕರಾಗಿರುವ ಬಹುನಿರೀಕ್ಷಿತ ಚಲನಚಿತ್ರ 'ರಾಜ್ ವಿಷ್ಣು' ಮುಂದಿನ ತಿಂಗಳ ಮೊದಲ ವಾರ ತೆರೆಕಾಣಲಿದೆ. ಇಂದು ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದ ಪ್ರಮುಖರು ಪಾಲ್ಗೊಂಡು ವಿಶೇಷ ಮಾಹಿತಿಗಳನ್ನು ನೀಡಿದರು.

ರಿಮೇಕ್ ಚಿತ್ರಗಳ ನಿರ್ದೇಶಕರಾಗಿ ಯಶಸ್ಸು ಕಂಡಿರುವ ಕೆ. ಮಾದೇಶ್, ಈ ಬಾರಿ ತಮಿಳಿನ 'ರಜಿನಿ ಮುರುಗನ್' ಚಿತ್ರವನ್ನು ಕನ್ನಡಕ್ಕೆ ತಂದಿದ್ದಾರೆ. ಅವರ ಪ್ರಕಾರ ಇದೊಂದು ಅಪ್ಪಟ ಫ್ಯಾಮಿಲಿ ಎಂಟರ್ಟೇನ್ಮೆಂಟ್ ಚಿತ್ರ. ಮೂಲ ಚಿತ್ರದ ಕತೆಯನ್ನು ಇಲ್ಲಿನ ನೇಟಿವಿಟಿಗೆ ತಕ್ಕಂತೆ ಬದಲಿಸಲಾಗಿದೆಯಂತೆ. ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ, ಈ ಹಿಂದೆ ಶರಣ್ ರದ್ದೇ 'ಬುಲೆಟ್ ಬಸ್ಯಾ', 'ಮಾರುತಿ 800' ಮೊದಲಾದ ಚಿತ್ರಗಳಿಗೆ ಸಂಭಾಷಣೆ ಬರೆದಿರುವ ಅನುಭವ ಇರುವುದನ್ನು ನೆನಪಿಸಿಕೊಂಡರು.

ನಟ ಭಜರಂಗಿ ಲೋಕಿ ಮಾತನಾಡಿ, "ಮೊದಲ ಬಾರಿಗೆ ಹಾರಾಟ, ಚೀರಾಟಗಳಿರದ ಸೈಲೆಂಟ್ ಕಿಲ್ಲರ್ ನಂಥ ಪಾತ್ರ ದೊರಕಿದೆ. ಒರಿಜಿನಲ್ ಚಿತ್ರಕ್ಕಿಂತ ಅದ್ದೂರಿಯಾಗಿ ತಯಾರಾಗಿದೆ" ಎಂದರು. ನವ ನಟ ಗೌತಮ್ ತಮ್ಮದು ಭಜರಂಗಿ ಲೋಕಿಯ ಬಲಗೈಯಂತಿರುವ ಪಾತ್ರ ಎಂದರು. ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಮಾತನಾಡಿ, "ಅಧ್ಯಕ್ಷ ಚಿತ್ರದ ಬಳಿಕ ನನ್ನ ಮತ್ತೆ ಶರಣ್ ರ ಜೋಡಿ  ಒಂದಾಗಿದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಖುಷಿ ನೀಡುವುದೆಂಬ ನಂಬಿಕೆ ಇದೆ" ಎಂದರು.

ಚಿತ್ರದ ನಾಯಕಿ ವೈಭವಿ ಈಗಾಗಲೇ ಮರಾಠಿ ಸೇರಿದಂತೆ ತಮಿಳು‌ ಚಿತ್ರಗಳಲ್ಲಿಯೂ ನಟಿಸಿದ ಅನುಭವ ಹೊಂದಿದ್ದಾರೆ. "ಚಿತ್ರದಲ್ಲಿ ನನ್ನದು ಲಾವಣ್ಯ ಎಂಬ ಯುವತಿಯ ಪಾತ್ರ" ಎಂದು ತಿಳಿಸಿದ ವೈಭವಿ, ಮರಾಠಿ ರಂಗಭೂಮಿಯಿಂದ ಬಂದ ಪ್ರತಿಭೆ.

ಚಿತ್ರವನ್ನು ನಿರ್ಮಿಸಿರುವ ರಾಮು ಈ ಹಿಂದೆ ಶರಣ್ ನಟನೆಯ 'ಅಧ್ಯಕ್ಷ' ಚಿತ್ರವನ್ನು ಮೈಸೂರು ಏರಿಯಾಗೆ ವಿತರಣೆ ಹಕ್ಕು ತೆಗೆದುಕೊಂಡು ಲಾಭ ಕಂಡಿದ್ದಾಗಿ ನೆನಪಿಸಿಕೊಂಡರು. ಅದೇ ಕಾರಣದಿಂದ "ರಜನಿ ಮುರುಗನ್" ಚಿತ್ರದ ಹಕ್ಕನ್ನು ಖುದ್ದಾಗಿ ಪಡೆದುಕೊಂಡು ಶರಣ್ -ಚಿಕ್ಕಣ್ಣ ಜೋಡಿಯನ್ನು ಮತ್ತೆ ಒಂದಾಗಿಸಿರುವುದಾಗಿ ಅವರು ಹೇಳಿದರು.

ಅಂದ ಹಾಗೆ ಚಿತ್ರದಲ್ಲಿ ಶ್ರೀಮುರಳಿ ಅತಿಥಿ ಪಾತ್ರ ನಿರ್ವಹಿಸುತ್ತಿರುವ ವಿಚಾರವನ್ನು ಅವರು ತಿಳಿಸಿದರು. ಕೊನೆಯಲ್ಲಿ ಮಾತನಾಡಿದ ಶರಣ್ ಚಿತ್ರದ ಹಾಡುಗಳ ಬಗ್ಗೆ ವಿವರಿಸುತ್ತಾ, ತಮ್ಮ ಮತ್ತು ಅರ್ಜುನ್ ಜನ್ಯ ಜೊತೆಗಿನ ಕಾಂಬಿನೇಶನ್ ಈ ‌ಬಾರಿಯೂ ಚೆನ್ನಾಗಿ ವರ್ಕೌಟಾಗಿದೆ ಎಂದರು. ಈ ಚಿತ್ರ ಕೂಡ ಅಧ್ಯಕ್ಷದಂತೆ ಆಗಸ್ಟ್ ನಲ್ಲಿ ಬಿಡುಗಡೆಗೊಳ್ಳುತ್ತಿದ್ದು, ರಾಜ್ ವಿಷ್ಣು ಅಭಿಮಾನಿಗಳು ಖುಷಿಯಾಗುವಂಥ‌ ಸನ್ನಿವೇಶಗಳಿವೆ ಎಂದರು.

ಸಾಧುಕೋಕಿಲ, ಶ್ರೀನಿವಾಸ ಮೂರ್ತಿ, ಸುಚೇಂದ್ರ ಪ್ರಸಾದ್, ವೀಣಾ ಸುಂದರ್ ಸೇರಿದಂತೆ ದೊಡ್ಡ ಮಟ್ಟಿನ ತಾರಾಗಣ ಚಿತ್ರದಲ್ಲಿದೆ. ಪತ್ರಿಕಾಗೋಷ್ಠಿಯ ಬಳಿಕ ಚಿತ್ರದ ಹಾಡು ಮತ್ತು ಟ್ರೇಲರ್ ಪ್ರದರ್ಶಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X